ಬ್ರೇಕಿಂಗ್ ನ್ಯೂಸ್
16-03-22 05:39 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.16: ಕರ್ನಾಟಕ ಹೈಕೋರ್ಟ್ ಹಿಜಾಬ್ ಕುರಿತು ನೀಡಿರುವ ತೀರ್ಪನ್ನು ವಿರೋಧಿಸಿ ಮಾ.17 ರಂದು ರಾಜ್ಯ ಬಂದ್ ನಡೆಸಲು ಮುಸ್ಲಿಂ ಸಂಘಟನೆಗಳ ನಾಯಕರು ಕರೆ ನೀಡಿದ್ದಾರೆ. ಅಮೀರ್ ಇ- ಷರೀಯತ್ ಕರ್ನಾಟಕ ಎನ್ನುವ ಸಂಘಟನೆಯ ನಾಯಕ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶದಿ ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿದ್ದು ಕೋರ್ಟ್ ತೀರ್ಪನ್ನು ವಿರೋಧಿಸಿ ಒಂದು ದಿನ ಸ್ವಯಂಪ್ರೇರಿತ ಬಂದ್ ನಡೆಸುವಂತೆ ಹೇಳಿದ್ದಾರೆ.
ಅಮೀರ್ ಇ -ಷರೀಯತ್ ಎನ್ನುವುದು ರಾಜ್ಯದಲ್ಲಿ ಎಲ್ಲ ಮುಸ್ಲಿಂ ಸಂಘಟನೆಗಳ ಪೈಕಿ ಪ್ರಮುಖವಾಗಿದ್ದು ಇದರ ಮುಖ್ಯಸ್ಥರ ಕರೆಯನ್ನು ಓಗೊಟ್ಟು ಇತರ ಸಂಘಟನೆಗಳ ನಾಯಕರು ಬಂದ್ ಬೆಂಬಲಿಸಲು ಕರೆ ನೀಡುತ್ತಿದ್ದಾರೆ. ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಹಿಜಾಬ್ ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೇಳಿರುವುದನ್ನು ಸಂಘಟನೆಗಳ ನಾಯಕರು ವಿರೋಧಿಸಿದ್ದಾರೆ.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರ ಅರ್ಜಿಯನ್ನು ಕೂಡಲೇ ಪರಿಗಣಿಸಲು ಕೋರ್ಟ್ ನಿರಾಕರಿಸಿತ್ತು. ಅಲ್ಲದೆ, ಹೋಲಿ ರಜೆಯ ಬಳಿಕ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಹೇಳಿತ್ತು. ಇದರ ಬೆನ್ನಲ್ಲೇ ರಾಜ್ಯದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳ ನಾಯಕರು ವಿದ್ಯಾರ್ಥಿನಿಯರ ಬೆನ್ನಿಗೆ ನಿಂತಿದ್ದಾರೆ. ಬುಧವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ಸಭೆ ನಡೆಸಿದ ಮಸೀದಿ ಕಮಿಟಿಗಳ ಮುಖ್ಯಸ್ಥರು, ವಿವಿಧ ಸಂಘಟನೆಗಳ ನಾಯಕರು ಕೋರ್ಟ್ ತೀರ್ಪನ್ನು ವಿರೋಧಿಸಿ ಒಂದು ದಿನದ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.
ಮುಸ್ಲಿಮರು ಎಲ್ಲ ವ್ಯಾಪಾರ, ವಹಿವಾಟುಗಳನ್ನು ಸ್ಥಗಿತಗೊಳಿಸಿ ಸಾತ್ವಿಕ ವಿರೋಧ ವ್ಯಕ್ತಪಡಿಸಬೇಕು. ಆದರೆ ಯುವಕರು ಸಂಯಮ ಕಾಪಾಡಬೇಕು. ಯಾರನ್ನೂ ಬಲವಂತದಿಂದ ಬಂದ್ ಮಾಡಲು ಮುಂದಾಗಬಾರದು. ಮೂಲೆ, ಮೂಲೆಯಲ್ಲಿರುವ ಎಲ್ಲ ರೀತಿಯ ಮುಸ್ಲಿಮರು ಸ್ವಯಂ ಆಗಿ ಬಂದ್ ಮಾಡಿ, ವ್ಯಾಪಾರ ವಹಿವಾಟು ಸ್ಥಗಿತಗೊಳಿಸಬೇಕು ಎಂದು ನಾಯಕರು ಹೇಳಿದ್ದಾರೆ.
Ameer-e-Shariat of Karnataka (head priest) Maulana Sagheer Ahmad Khan Rashadi on Wednesday issued a call for a state-wide bandh on Thursday and called upon the community members to observe it peacefully.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm