ಬ್ರೇಕಿಂಗ್ ನ್ಯೂಸ್
19-03-22 11:51 am HK Desk news ಕರ್ನಾಟಕ
ತುಮಕೂರು, ಮಾ.19: ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದಾಗಿ ಖಾಸಗಿ ಬಸ್ ಪಲ್ಟಿಯಾಗಿ ಬಿದ್ದು ಭೀಕರ ದುರಂತ ನಡೆದಿದ್ದು, 20ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿರುವ ಭೀತಿ ವ್ಯಕ್ತವಾಗಿದೆ. ಎಂಟು ಮಂದಿ ಯುವಕರ ಶವಗಳು ಚೆಲ್ಲಾಪಿಲ್ಲಿಯಾಗಿ ಸ್ಥಳದಲ್ಲಿ ಬಿದ್ದಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಎಂಬಲ್ಲಿ ನಡೆದಿದ್ದು ಮೃತರದಲ್ಲಿ ಬಹುತೇಕ ವಿದ್ಯಾರ್ಥಿಗಳೇ ಆಗಿದ್ದಾರೆ.
ಸಮತಟ್ಟು ಆಗಿರುವ ರಸ್ತೆ ಮಧ್ಯದಲ್ಲೇ ಬಸ್ ಪಲ್ಟಿ ಹೊಡೆದಿದ್ದು, ಸ್ಥಳದಲ್ಲಿ ದುರಂತವೇ ನಡೆದುಹೋಗಿದೆ. ಎಸ್ ವಿಟಿ ಎನ್ನುವ ಹೆಸರಿನ ಖಾಸಗಿ ಬಸ್ ಇದಾಗಿದ್ದು, ಬಸ್ಸಿನಲ್ಲಿ ನೂರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಇದ್ದರು ಎನ್ನಲಾಗಿದೆ. ಬಸ್ ಸಂಖ್ಯೆ ಕಡಿಮೆ ಇದ್ದುದರಿಂದ ಬೆಳಗ್ಗಿನ ಹೊತ್ತಿನಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಜನರು ಬಸ್ಸಿನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಈ ಬಸ್ ವೈಎನ್ ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿತ್ತು.




ಬಸ್ ಪಲ್ಟಿಯಾಗಿದ್ದರಿಂದ ಹೊರಗಡೆ ನೇತಾಡುತ್ತಿದ್ದವರೆಲ್ಲ ಬಸ್ಸಿನ ಅಡಿಗೆ ಬಿದ್ದು ಸ್ಥಳದಲ್ಲೇ ಛಿದ್ರವಾಗಿದ್ದಾರೆ. ಮೃತರಲ್ಲಿ ಹೆಚ್ಚಿನವರು ಕಾಲೇಜು ವಿದ್ಯಾರ್ಥಿಗಳು ಎನ್ನಲಾಗುತ್ತಿದೆ. ಸ್ಥಳದಲ್ಲಿ ಎಂಟು ಮಂದಿ ದುರಂತ ಸಾವಿಗೀಡಾಗಿದ್ದರೆ, ಇನ್ನಷ್ಟು ಮಂದಿ ಸಾವನ್ನಪ್ಪುವ ಸಾಧ್ಯತೆಯಿದೆ. ಬಸ್ಸಿನಲ್ಲಿ ಮೇಲ್ಭಾಗದಲ್ಲಿಯೂ ಕುಳಿತುಕೊಂಡು ತೆರಳುತ್ತಿದ್ದರು ಎನ್ನಲಾಗಿದೆ.



ಸ್ಥಳದಲ್ಲಿ ಸಾವಿರಾರು ಜನರು ಸೇರಿದ್ದು, ಜನರು ರೋದನದಲ್ಲಿ ತೊಡಗಿದ್ದಾರೆ. ಮೃತ ಯುವಕರು ಯಾರೆಂದು ತಕ್ಷಣಕ್ಕೆ ತಿಳಿದುಬಂದಿಲ್ಲ. ಬಸ್ ಪಲ್ಟಿಯಾಗಿ ಬಿದ್ದ ಜಾಗದಲ್ಲಿ ಒಳಭಾಗದಲ್ಲಿಯೂ ಹಲವರು ಸಿಕ್ಕಿಕೊಂಡಿದ್ದು, ಅವರನ್ನು ಸ್ಥಳೀಯರು ಎಳೆದು ತೆಗೆಯುವ ಪ್ರಯತ್ನ ಪಟ್ಟಿದ್ದಾರೆ. ಅಮೂಲ್ಯ, ಕಲ್ಯಾಣ್, ಅಜಿತ್, ಶಾನವಾಜ್ ಮತ್ತು ಕೆಲವರ ಗುರುತು ಪತ್ತೆಯಾಗಿದೆ. ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
At least eight persons diad and more than 20 have been critically injured, including students, as a bus overturned near Pavagada in Karnataka's Tumkur district.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm