ಬ್ರೇಕಿಂಗ್ ನ್ಯೂಸ್
19-03-22 09:05 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.19: ಮಾಗಡಿ ತಾಲೂಕಿನ ತಹಸೀಲ್ದಾರ್ ವರ್ಗಾವಣೆ ವಿಚಾರದಲ್ಲಿ ಸಚಿವರಾದ ಅಶ್ವತ್ಥ ನಾರಾಯಣ ಮತ್ತು ಆರ್.ಅಶೋಕ್ ವಿಧಾನಸಭೆ ಮೊಗಸಾಲೆಯಲ್ಲೇ ಪರಸ್ಪರ ಕಿತ್ತಾಡಿಕೊಂಡಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದ್ದು, ಎರಡು ದಿನಗಳ ಹಿಂದೆ ನಡೆದಿರುವ ಘಟನೆಯನ್ನು ಪ್ರತ್ಯಕ್ಷದರ್ಶಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.
ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅಶ್ವತ್ಥ ನಾರಾಯಣ ಅವರು ಮಾಗಡಿ ತಾಲೂಕಿನ ತಹಸೀಲ್ದಾರ್ ಶ್ರೀನಿವಾಸ್ ಅವರನ್ನು ವರ್ಗಾವಣೆ ನಡೆಸುವಂತೆ ಕಂದಾಯ ಸಚಿವ ಅಶೋಕ್ ಗೆ ಪತ್ರ ಬರೆದಿದ್ದರು ಎನ್ನಲಾಗಿದೆ. ಶ್ರೀನಿವಾಸ್ ಬದಲಿಗೆ ಬೇರೂಬ್ಬ ಅಧಿಕಾರಿಯನ್ನು ನೇಮಕ ಮಾಡುವಂತೆ ಪತ್ರದಲ್ಲಿ ಕೇಳಿಕೊಂಡಿದ್ದರು. ಆದರೆ, ಕಂದಾಯ ಸಚಿವರು ಇದನ್ನು ಮಾನ್ಯ ಮಾಡದೆ ಆದೇಶ ಪತ್ರ ಹೊರಡಿಸಿರಲಿಲ್ಲ. ತಹಸೀಲ್ದಾರ್ ಆಗಿರುವ ಅಧಿಕಾರಿಗೆ ಪ್ರಭಾವಿ ಮಠಾಧೀಶರೊಬ್ಬರ ಬೆಂಬಲ ಇರುವುದರಿಂದ ವರ್ಗಾವಣೆ ಸಾಧ್ಯವಿಲ್ಲ ಎಂದು ಅಶೋಕ್ ತಿಳಿಸಿದ್ದರು ಎನ್ನಲಾಗಿದೆ.
ಗುರುವಾರ ಮಧ್ಯಾಹ್ನ ಇಬ್ಬರು ಸಚಿವರು ಕೂಡ ವಿಧಾನಸಭೆ ಮೊಗಸಾಲೆಯಲ್ಲಿ ಮುಖಾಮುಖಿಯಾಗಿದ್ದು, ಸಚಿವ ಅಶ್ವತ್ಥ ನಾರಾಯಣ ತಹಸೀಲ್ದಾರ್ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ನಾನೊಬ್ಬ ಅಲ್ಲಿನ ಉಸ್ತುವಾರಿ ಸಚಿವ. ನನ್ನ ಮಾತಿಗೆ ಅಷ್ಟೂ ಬೆಲೆ ಇಲ್ಲವೇ.. ಹಲವು ಬಾರಿ ಕೇಳಿಕೊಂಡರೂ ವರ್ಗಾವಣೆ ಮಾಡಲ್ಲ ಎಂದರೆ ಹೇಗೆ ಎಂದು ಏರಿದ ದನಿಯಲ್ಲಿ ಅಶೋಕ್ ಅವರನ್ನು ಪ್ರಶ್ನೆ ಮಾಡಿದ್ದಾರೆ.
ಇದರಿಂದ ಸಿಟ್ಟಾದ ಸಚಿವ ಅಶೋಕ್, ನನ್ನ ಇಲಾಖೆಯಲ್ಲಿ ಯಾರನ್ನು ಎಲ್ಲಿಗೆ, ಯಾವಾಗ ವರ್ಗಾವಣೆ ಮಾಡಬೇಕು ಅನ್ನೋದು ನನಗೆ ಗೊತ್ತಿದೆ. ನಾನು ಪಕ್ಷದಲ್ಲಿ ನಿಮಗಿಂತ ಹಿರಿಯವನು. ವರ್ಗಾವಣೆ ಬಗ್ಗೆ ನಿಮ್ಮಿಂದ ಕಲಿಯಬೇಕಾಗಿಲ್ಲ ಎಂದು ಪ್ರತ್ಯುತ್ತರ ನೀಡಿದ್ದಾರೆ. ಇದೇ ವಿಚಾರದಲ್ಲಿ ಇಬ್ಬರು ಕೂಡ ಏಕವಚನದಲ್ಲಿ ನಿಂದಿಸಿಕೊಂಡಿದ್ದು, ನೀನು ನಿನ್ನ ಇಲಾಖೆಯಲ್ಲಿ ಏನೇನು ಮಾಡಿಕೊಂಡಿದ್ದೀಯ ಅನ್ನೋದು ಗೊತ್ತಿದೆ ಎಂದು ಪ್ರತಿಯಾಗಿ ಅಶ್ವತ್ಥ ನಾರಾಯಣ ನಿಂದಿಸಿದ್ದಾರೆ. ಅಲ್ಲದೆ, ಇಬ್ಬರೂ ಕೈ ಮಿಲಾಯಿಸುವ ಹಂತಕ್ಕೆ ಬಂದಿದ್ದು, ಅಶ್ವತ್ಥ ನಾರಾಯಣ ಏರಿ ಬಂದಿದ್ದನ್ನು ನೋಡಿ ಅಶೋಕ್ ಕೂಡ ಎದ್ದು ನಿಂತಿದ್ದಾರೆ. ಈ ವೇಳೆ, ಅಲ್ಲಿದ್ದ ಇತರ ಸಚಿವರು, ಶಾಸಕರು ಇಬ್ಬರನ್ನೂ ಸಮಾಧಾನ ಪಡಿಸಿದ್ದಾರೆ.
Two senior ministers from Bengaluru, R Ashoka and CN Ashwath Narayan have been fighting off each other since 2019. The argument raged for some time after the transfer of two tahsildars from Ramanagara district.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm