ಬ್ರೇಕಿಂಗ್ ನ್ಯೂಸ್
19-03-22 09:05 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.19: ಮಾಗಡಿ ತಾಲೂಕಿನ ತಹಸೀಲ್ದಾರ್ ವರ್ಗಾವಣೆ ವಿಚಾರದಲ್ಲಿ ಸಚಿವರಾದ ಅಶ್ವತ್ಥ ನಾರಾಯಣ ಮತ್ತು ಆರ್.ಅಶೋಕ್ ವಿಧಾನಸಭೆ ಮೊಗಸಾಲೆಯಲ್ಲೇ ಪರಸ್ಪರ ಕಿತ್ತಾಡಿಕೊಂಡಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದ್ದು, ಎರಡು ದಿನಗಳ ಹಿಂದೆ ನಡೆದಿರುವ ಘಟನೆಯನ್ನು ಪ್ರತ್ಯಕ್ಷದರ್ಶಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.
ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅಶ್ವತ್ಥ ನಾರಾಯಣ ಅವರು ಮಾಗಡಿ ತಾಲೂಕಿನ ತಹಸೀಲ್ದಾರ್ ಶ್ರೀನಿವಾಸ್ ಅವರನ್ನು ವರ್ಗಾವಣೆ ನಡೆಸುವಂತೆ ಕಂದಾಯ ಸಚಿವ ಅಶೋಕ್ ಗೆ ಪತ್ರ ಬರೆದಿದ್ದರು ಎನ್ನಲಾಗಿದೆ. ಶ್ರೀನಿವಾಸ್ ಬದಲಿಗೆ ಬೇರೂಬ್ಬ ಅಧಿಕಾರಿಯನ್ನು ನೇಮಕ ಮಾಡುವಂತೆ ಪತ್ರದಲ್ಲಿ ಕೇಳಿಕೊಂಡಿದ್ದರು. ಆದರೆ, ಕಂದಾಯ ಸಚಿವರು ಇದನ್ನು ಮಾನ್ಯ ಮಾಡದೆ ಆದೇಶ ಪತ್ರ ಹೊರಡಿಸಿರಲಿಲ್ಲ. ತಹಸೀಲ್ದಾರ್ ಆಗಿರುವ ಅಧಿಕಾರಿಗೆ ಪ್ರಭಾವಿ ಮಠಾಧೀಶರೊಬ್ಬರ ಬೆಂಬಲ ಇರುವುದರಿಂದ ವರ್ಗಾವಣೆ ಸಾಧ್ಯವಿಲ್ಲ ಎಂದು ಅಶೋಕ್ ತಿಳಿಸಿದ್ದರು ಎನ್ನಲಾಗಿದೆ.
ಗುರುವಾರ ಮಧ್ಯಾಹ್ನ ಇಬ್ಬರು ಸಚಿವರು ಕೂಡ ವಿಧಾನಸಭೆ ಮೊಗಸಾಲೆಯಲ್ಲಿ ಮುಖಾಮುಖಿಯಾಗಿದ್ದು, ಸಚಿವ ಅಶ್ವತ್ಥ ನಾರಾಯಣ ತಹಸೀಲ್ದಾರ್ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ನಾನೊಬ್ಬ ಅಲ್ಲಿನ ಉಸ್ತುವಾರಿ ಸಚಿವ. ನನ್ನ ಮಾತಿಗೆ ಅಷ್ಟೂ ಬೆಲೆ ಇಲ್ಲವೇ.. ಹಲವು ಬಾರಿ ಕೇಳಿಕೊಂಡರೂ ವರ್ಗಾವಣೆ ಮಾಡಲ್ಲ ಎಂದರೆ ಹೇಗೆ ಎಂದು ಏರಿದ ದನಿಯಲ್ಲಿ ಅಶೋಕ್ ಅವರನ್ನು ಪ್ರಶ್ನೆ ಮಾಡಿದ್ದಾರೆ.
ಇದರಿಂದ ಸಿಟ್ಟಾದ ಸಚಿವ ಅಶೋಕ್, ನನ್ನ ಇಲಾಖೆಯಲ್ಲಿ ಯಾರನ್ನು ಎಲ್ಲಿಗೆ, ಯಾವಾಗ ವರ್ಗಾವಣೆ ಮಾಡಬೇಕು ಅನ್ನೋದು ನನಗೆ ಗೊತ್ತಿದೆ. ನಾನು ಪಕ್ಷದಲ್ಲಿ ನಿಮಗಿಂತ ಹಿರಿಯವನು. ವರ್ಗಾವಣೆ ಬಗ್ಗೆ ನಿಮ್ಮಿಂದ ಕಲಿಯಬೇಕಾಗಿಲ್ಲ ಎಂದು ಪ್ರತ್ಯುತ್ತರ ನೀಡಿದ್ದಾರೆ. ಇದೇ ವಿಚಾರದಲ್ಲಿ ಇಬ್ಬರು ಕೂಡ ಏಕವಚನದಲ್ಲಿ ನಿಂದಿಸಿಕೊಂಡಿದ್ದು, ನೀನು ನಿನ್ನ ಇಲಾಖೆಯಲ್ಲಿ ಏನೇನು ಮಾಡಿಕೊಂಡಿದ್ದೀಯ ಅನ್ನೋದು ಗೊತ್ತಿದೆ ಎಂದು ಪ್ರತಿಯಾಗಿ ಅಶ್ವತ್ಥ ನಾರಾಯಣ ನಿಂದಿಸಿದ್ದಾರೆ. ಅಲ್ಲದೆ, ಇಬ್ಬರೂ ಕೈ ಮಿಲಾಯಿಸುವ ಹಂತಕ್ಕೆ ಬಂದಿದ್ದು, ಅಶ್ವತ್ಥ ನಾರಾಯಣ ಏರಿ ಬಂದಿದ್ದನ್ನು ನೋಡಿ ಅಶೋಕ್ ಕೂಡ ಎದ್ದು ನಿಂತಿದ್ದಾರೆ. ಈ ವೇಳೆ, ಅಲ್ಲಿದ್ದ ಇತರ ಸಚಿವರು, ಶಾಸಕರು ಇಬ್ಬರನ್ನೂ ಸಮಾಧಾನ ಪಡಿಸಿದ್ದಾರೆ.
Two senior ministers from Bengaluru, R Ashoka and CN Ashwath Narayan have been fighting off each other since 2019. The argument raged for some time after the transfer of two tahsildars from Ramanagara district.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm