ಬ್ರೇಕಿಂಗ್ ನ್ಯೂಸ್
27-03-22 01:16 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.27: ಹೈಕೋರ್ಟ್ ತೀರ್ಪು ಹೊರತಾಗಿಯೂ ಕಾಲೇಜು ಶಿಕ್ಷಣದಿಂದ ದೂರ ಉಳಿದಿರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಲಹೆ ನೀಡಿದ್ದಾರೆ. ಶಿಕ್ಷಣ ಮತ್ತು ನಿಮ್ಮ ಭವಿಷ್ಯ ಮುಖ್ಯ. ಹಾಗಾಗಿ ಹಿಜಾಬ್ ವಿಚಾರದಲ್ಲಿ ನಿಮ್ಮ ಶಿಕ್ಷಣಕ್ಕೆ ಕುಂದು ತರುವ ಕೆಲಸ ಮಾಡಬೇಡಿ ಎಂದು ಸಲಹೆ ಮಾಡಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ ಎಂದು ರಾಜ್ಯ ಸರಕಾರ ಸುತ್ತೋಲೆ ಬಿಡುಗಡೆ ಮಾಡಿದ್ದರಿಂದ ಡಿಕೆಶಿ ಈ ಸಲಹೆ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಡಿಕೆಶಿ, ಶಾಲಾ ಶಿಕ್ಷಕರು ಕೂಡ ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಕೂರಿಸಿ ಮನವೊಲಿಕೆ ಮಾಡಬೇಕು. ಹೈಕೋರ್ಟ್ ತೀರ್ಪು ನೀಡಿದರೂ, ಕೆಲವು ವಿದ್ಯಾರ್ಥಿನಿಯರು, ಪೋಷಕರು ತೀರ್ಪಿನ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಸದ್ಯಕ್ಕೆ ಈ ವಿಚಾರ ಸುಪ್ರೀಂ ಕೋರ್ಟಿನಲ್ಲಿದ್ದು, ಮುಂದೆ ಬೇರೆ ರೀತಿಯ ತೀರ್ಪು ಬರುವುದಕ್ಕೂ ಅವಕಾಶ ಇರುತ್ತದೆ. ಯಾವುದಕ್ಕೂ ಕಾಯಬೇಕಾಗುತ್ತದೆ. ಹಾಗೆಂದು ಹಿಜಾಬ್ ವಿಚಾರದಲ್ಲಿ ಒಂದೇ ವಿಚಾರಕ್ಕೆ ಅಂಟಿಕೊಂಡು ಕುಳಿತರೆ ತಮ್ಮ ಭವಿಷ್ಯವೇ ಹಾಳಾಗುತ್ತದೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಸಮವಸ್ತ್ರದ ಬಣ್ಣದ ಶಾಲನ್ನೇ ತಲೆಗೆ ಹಾಕಿಕೊಂಡು ಬರಲಿ ಎಂಬ ಹೇಳಿಕೆಯ ಬಗ್ಗೆ ಕೇಳಿದ್ದಕ್ಕೆ, ಸಂವಿಧಾನ ಏನು ಹೇಳುತ್ತದೋ ಅದು ಎಲ್ಲರಿಗೂ ಅನ್ವಯ ಎಂದು ಹೇಳಿದರು. ಹಿಜಾಬ್ ವಿಚಾರದಲ್ಲಿ ವಿದ್ಯಾರ್ಥಿನಿಯರ ಭವಿಷ್ಯ ಹಾಳು ಮಾಡುವುದಕ್ಕಿಂತ ಕುಳಿತು ಸಮಸ್ಯೆ ಬಗೆಹರಿಸುವುದು ಒಳ್ಳೆಯದು. ಇದಕ್ಕಾಗಿ ಸರಕಾರ ನಡೆಸುವ ಮಂದಿ ವಿದ್ಯಾರ್ಥಿನಿಯರ ಮನವೊಲಿಸುವ ಕೆಲಸ ಮಾಡಬೇಕು. ಅಧಿಕಾರಿಗಳು, ಪೋಷಕರು, ಕಾಲೇಜು ಆಡಳಿತಗಳು ಪಟ್ಟು ಹಿಡಿದು ಕುಳಿತಿರುವ ವಿದ್ಯಾರ್ಥಿಗಳನ್ನು ಮನವೊಲಿಸಬೇಕು ಎಂದು ಹೇಳಿದರು.
Karnataka Congress President D.K. Shivakumar on Saturday urged parents and the BJP government in the state to convince the students about the court verdict on hijab to ensure that their careers are not ruined.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 08:23 pm
HK News Desk
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm