ಬ್ರೇಕಿಂಗ್ ನ್ಯೂಸ್
28-03-22 07:25 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.28: ಪಾಕಿಸ್ಥಾನದ ರಿಪಬ್ಲಿಕ್ ಡೇ ಹಿನ್ನೆಲೆಯಲ್ಲಿ ವಾಟ್ಸಪ್ ಸ್ಟೇಟಸ್ ಹಾಕ್ಕೊಂಡಿದ್ದ ಬಾಗಲಕೋಟ ಮೂಲದ 25 ವರ್ಷದ ಮುಸ್ಲಿಮ್ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮದ್ರಸಾ ವಿದ್ಯಾರ್ಥಿನಿಯೂ ಆಗಿರುವ ಬಾಗಲಕೋಟ ಜಿಲ್ಲೆಯ ಮುಧೋಳ್ ನಗರದ ನಿವಾಸಿ ಕುತುಮಾ ಶೇಖ್ ಬಂಧಿತ ವಿದ್ಯಾರ್ಥಿನಿ. ಮಾರ್ಚ್ 23ರ ಪಾಕಿಸ್ಥಾನದ ರಿಪಬ್ಲಿಕ್ ಡೇಯ ದಿನ ಈಕೆ ತನ್ನ ಮೊಬೈಲಿನಲ್ಲಿ ಉರ್ದು ಭಾಷೆಯಲ್ಲಿ ವಾಟ್ಸಪ್ ಸ್ಟೇಟಸ್ ಹಾಕ್ಕೊಂಡಿದ್ದಳು. ‘’ಅಲ್ಲಾ ಹರ್ ಮುಲ್ಕ್ ಮೇ ಇತ್ತಿಹಾದ್.. ಅಮನ್, ಸುಕೂನ್, ಅತಾ ಫಾರ್ಮಾ ಮೌಲಾ...’’ ಹೀಗೆಂದು ಪಾಕಿಸ್ಥಾನದ ಪರವಾಗಿ ಬರೆದಿದ್ದಾಳೆಂದು ಪೊಲೀಸ್ ದೂರು ದಾಖಲಾಗಿತ್ತು.
‘’ಓ ಅಲ್ಲಾ.. ಎಲ್ಲ ದೇಶಗಳಿಗೂ ಶಾಂತಿ, ಸೌಹಾರ್ದತೆಯಿಂದ ಇರಲೆಂದು ಆಶೀರ್ವದಿಸು..’’ ಎಂಬುದು ಆಕೆ ಬರೆದಿರುವ ಪದಗಳ ಕನ್ನಡ ಅನುವಾದ ಆಗಿದ್ದು ನಿರ್ದಿಷ್ಟವಾಗಿ ಪಾಕಿಸ್ಥಾನದ ಪದ ಉಲ್ಲೇಖ ಆಗಿರಲಿಲ್ಲ. ಆದರೆ ಈ ಸ್ಟೇಟಸ್ ವೈರಲ್ ಆಗುತ್ತಿದ್ದಂತೆ ಸಂಘಟನೆಯೊಂದರ ಕಾರ್ಯಕರ್ತ ಅರುಣ್ ಕುಮಾರ್ ಭಜಂತ್ರಿ ಎಂಬಾತ ಮುಧೋಳ ಠಾಣೆಗೆ ದೂರು ನೀಡಿದ್ದು ಈ ಸ್ಟೇಟಸ್ ಮೂಲಕ ಸಾಮರಸ್ಯ ಕದಡುವ ಯತ್ನ ಮಾಡಿದ್ದಾಗಿ ದೂರಿದ್ದ. ಯುವತಿ ವಿರುದ್ಧ ಪೊಲೀಸರು ಸೆಕ್ಷನ್ 153 (ಎ) ಮತ್ತು 505 (2) ಅಡಿ ಪ್ರಕರಣ ದಾಖಲಿಸಿದ್ದು ವಶಕ್ಕೆ ಪಡೆದಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಕುತುಮಾ ಶೇಖ್ ಳನ್ನು ಮಾ.24ರಂದು ಪೊಲೀಸರು ವಶಕ್ಕೆ ಪಡೆದಿದ್ದರು. ಮರುದಿನವೇ ಆಕೆಗೆ ನ್ಯಾಯಾಲಯದ ಮೂಲಕ ಜಾಮೀನು ದೊರಕಿತ್ತು. ಪಾಕಿಸ್ಥಾನದ ರಿಪಬ್ಲಿಡ್ ಡೇ ದಿನವನ್ನು ಆಚರಿಸುವುದು ಆಕೆಯ ಉದ್ದೇಶ ಆಗಿತ್ತು. ಆ ಬಗ್ಗೆ ನಾವು ಕೂಡಲೇ ಸ್ಪಂದಿಸದಿದ್ದರೆ, ಪ್ರತಿಭಟನೆ, ಗಲಭೆಗಳಿಗೆ ಕಾರಣವಾಗುತ್ತಿತ್ತು. ಹಾಗಾಗಿ ಕೂಡಲೇ ಆಕೆಯ ವಿರುದ್ಧ ಕ್ರಮ ಜರುಗಿಸಿದ್ದೆವು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
A 25-year-old woman was arrested in Karnataka's Bagalkot district on Monday for allegedly posting a Whatsapp status that wished Pakistan on its Republic Day, according to the superintendent of police. The woman, Kuthma Sheikh, is a Mudhol native and a student at a neighbouring madrasa.According to authorities, she wrote in Urdu on her WhatsApp status on March 23, Pakistan's Republic Day, “Allah Har Mulk me Ittihaad…Aman...Sukoon…Ata Farma Maula." Which translates to "May God bless every nation with peace, unity, and harmony."
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm