ಬ್ರೇಕಿಂಗ್ ನ್ಯೂಸ್
29-03-22 12:45 pm HK Desk news ಕರ್ನಾಟಕ
ಮಡಿಕೇರಿ, ಮಾ.29 : ಕಾಳು ಮೆಣಸು ಕೊಯ್ಯುತ್ತಿದ್ದಾಗ ಹುಲಿ ದಾಳಿ ನಡೆಸಿ ವ್ಯಕ್ತಿಯನ್ನು ಸೀಳಿ ಹಾಕಿದ ಘಟನೆ ವಿರಾಜಪೇಟೆ ತಾಲ್ಲೂಕಿನ ರುದ್ರಗುಪ್ಪೆ ಸಮೀಪದ ವಿ. ಬಾಡಗ ಗ್ರಾಮದಲ್ಲಿ ನಡೆದಿದ್ದು ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ತಲೆದೋರಿದೆ.
ಮೃತರನ್ನು ಗದ್ದೆಮನೆ ಗಣೇಶ್ (29) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಘಟನೆ ನಡೆದಿದ್ದು ಗ್ರಾಮಸ್ಥರು, ರೈತ ಸಂಘದ ಪ್ರತಿನಿಧಿಗಳು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಹುಲಿಯನ್ನು ಹಿಡಿಯಬೇಕು, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಭಾರೀ ಜನರು ಸೇರಿದ್ದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಜನರ ಆಕ್ರೋಶದ ಕಾರಣ ಇಂದು ಅರಣ್ಯ ಸಿಬಂದಿ ಸ್ಥಳದಲ್ಲಿ ಸೇರಿದ್ದು ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಎರಡು ಸಾಕಾನೆಗಳನ್ನು ಬಳಸಿ ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಗೊಂಡಿದೆ. ಪಶು ವೈದ್ಯರು, ಅರಿವಳಿಕೆ ಮದ್ದು ನೀಡುವ ವೈದ್ಯರು ಸ್ಥಳಕ್ಕೆ ಬಂದಿದ್ದು ಹುಲಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಗ್ರಾಮಸ್ಥರು ಹುಲಿಯನ್ನು ಕೊಲ್ಲಲು ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ. ಮೃತ ಗಣೇಶ್ ಶವವನ್ನು ಇವತ್ತು ಕೂಡ ಸ್ಥಳದಲ್ಲಿ ಇರಿಸಿದ್ದು ಜನರು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕಿದ್ದಾರೆ.
Mangalore 29-year-old killed after tiger attack in Madikeri which he was in the fields. The deceased has been identified as Ganesh.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm