ಬ್ರೇಕಿಂಗ್ ನ್ಯೂಸ್
30-03-22 01:10 pm HK Desk news ಕರ್ನಾಟಕ
ಮಂಡ್ಯ, ಮಾ.30: ಕೊಲ್ಲೂರಿನಲ್ಲಿ ಟಿಪ್ಪು ಹೆಸರಿನಲ್ಲಿ ಸಲಾಂ ಆರತಿ ಮಾಡುವುದಕ್ಕೆ ಆಕ್ಷೇಪ ಕೇಳಿಬಂದ ಬೆನ್ನಲ್ಲೇ ಮಂಡ್ಯದ ಮೇಲುಕೋಟೆಯಲ್ಲೂ ಸಲಾಂ ಪೂಜಾ ಪದ್ಧತಿ ಇರುವುದು ಬೆಳಕಿಗೆ ಬಂದಿದೆ. ಮೇಲುಕೋಟೆ ಚೆಲುವನಾರಾಯಣ ದೇವಾಲಯದಲ್ಲಿ ಪ್ರತಿನಿತ್ಯ ದೀವಟಿಗೆ ಸಲಾಂ ಹೆಸರಿನಲ್ಲಿ ಟಿಪ್ಪು ಸ್ಮರಣೆ ನಡೆಯುತ್ತಿದ್ದು ಇದರ ಹೆಸರು ಬದಲಿಸಬೇಕೆಂದು ಹಿಂದು ಸಂಘಟನೆಗಳು ಆಕ್ಷೇಪ ಎತ್ತಿವೆ.
ಮೇಲುಕೋಟೆ ಚೆಲುವನಾರಾಯಣ ದೇವಸ್ಥಾನಕ್ಕೆ ಮೈಸೂರಿನ ರಾಜನಾಗಿದ್ದ ಟಿಪ್ಪು ಅಭಯ ನೀಡಿದ್ದ ಎಂಬ ನೆಪದಲ್ಲಿ ಆತನ ಹೆಸರಿನಲ್ಲಿ ದೀವಟಿಗೆ ಸಲಾಂ ಎಂದು ಪ್ರತಿನಿತ್ಯ ಪೂಜೆ ನಡೆಯುತ್ತದೆ. ಹಿಂದಿನಿಂದಲೂ ಪಾರಂಪರಿಕವಾಗಿ ನಡೆದು ಬಂದಿದ್ದ ಸಂಧ್ಯಾರತಿಯನ್ನೇ ದೀವಟಿಗೆ ಸಲಾಂ ಎಂದು ಟಿಪ್ಪು ಕಾಲದಲ್ಲಿ ಆತನ ಅಣತಿಯಂತೆ ಬದಲಾವಣೆ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಕೊಲ್ಲೂರಿನಲ್ಲಿ ಸಲಾಂ ಆರತಿ ಹೆಸರು ಬದಲಿಸಬೇಕೆಂಬ ಆಗ್ರಹ ಕೇಳಿಬಂದ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ಹಿಂದು ಸಂಘಟನೆಗಳ ನಾಯಕರು, ಧಾರ್ಮಿಕ ಪರಿಷತ್ ನಾಯಕರು ಮೇಲುಕೋಟೆಯ ದೀವಟಿಗೆ ಸಲಾಂ ಆರತಿಯನ್ನು ಒಂದೋ ನಿಲ್ಲಿಸಬೇಕು, ಇಲ್ಲವೇ ಅದರ ಹೆಸರು ಬದಲಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು, ಹೆಸರು ಬದಲಾವಣೆಗೆ ಒತ್ತಾಯಿಸಿದ್ದಾರೆ. ಹಿಂದು ಸಂಪ್ರದಾಯದಲ್ಲಿ ಸಲಾಂ ಹೆಸರಿನ ಆರತಿಗೆ ಅವಕಾಶ ಇಲ್ಲ. ಅನ್ಯಧರ್ಮದ ದೇವರು, ರಾಜನ ಹೆಸರಿನಲ್ಲಿ ಪೂಜೆ ನಡೆಸೋದು ಬೇಡ. ಹಾಗಾಗಿ ದೀವಟಿಗೆ ಸಲಾಂ ಎನ್ನುವ ಪೂಜಾ ಪದ್ಧತಿಯನ್ನು ಬದಲಿಸುವಂತೆ ಒತ್ತಾಯ ಮಾಡಿದ್ದಾರೆ.
Salam Mangalarati ritual at Mandya temple requested to be cancelled after Kollur temple.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm