ಬ್ರೇಕಿಂಗ್ ನ್ಯೂಸ್
30-03-22 01:10 pm HK Desk news ಕರ್ನಾಟಕ
ಮಂಡ್ಯ, ಮಾ.30: ಕೊಲ್ಲೂರಿನಲ್ಲಿ ಟಿಪ್ಪು ಹೆಸರಿನಲ್ಲಿ ಸಲಾಂ ಆರತಿ ಮಾಡುವುದಕ್ಕೆ ಆಕ್ಷೇಪ ಕೇಳಿಬಂದ ಬೆನ್ನಲ್ಲೇ ಮಂಡ್ಯದ ಮೇಲುಕೋಟೆಯಲ್ಲೂ ಸಲಾಂ ಪೂಜಾ ಪದ್ಧತಿ ಇರುವುದು ಬೆಳಕಿಗೆ ಬಂದಿದೆ. ಮೇಲುಕೋಟೆ ಚೆಲುವನಾರಾಯಣ ದೇವಾಲಯದಲ್ಲಿ ಪ್ರತಿನಿತ್ಯ ದೀವಟಿಗೆ ಸಲಾಂ ಹೆಸರಿನಲ್ಲಿ ಟಿಪ್ಪು ಸ್ಮರಣೆ ನಡೆಯುತ್ತಿದ್ದು ಇದರ ಹೆಸರು ಬದಲಿಸಬೇಕೆಂದು ಹಿಂದು ಸಂಘಟನೆಗಳು ಆಕ್ಷೇಪ ಎತ್ತಿವೆ.
ಮೇಲುಕೋಟೆ ಚೆಲುವನಾರಾಯಣ ದೇವಸ್ಥಾನಕ್ಕೆ ಮೈಸೂರಿನ ರಾಜನಾಗಿದ್ದ ಟಿಪ್ಪು ಅಭಯ ನೀಡಿದ್ದ ಎಂಬ ನೆಪದಲ್ಲಿ ಆತನ ಹೆಸರಿನಲ್ಲಿ ದೀವಟಿಗೆ ಸಲಾಂ ಎಂದು ಪ್ರತಿನಿತ್ಯ ಪೂಜೆ ನಡೆಯುತ್ತದೆ. ಹಿಂದಿನಿಂದಲೂ ಪಾರಂಪರಿಕವಾಗಿ ನಡೆದು ಬಂದಿದ್ದ ಸಂಧ್ಯಾರತಿಯನ್ನೇ ದೀವಟಿಗೆ ಸಲಾಂ ಎಂದು ಟಿಪ್ಪು ಕಾಲದಲ್ಲಿ ಆತನ ಅಣತಿಯಂತೆ ಬದಲಾವಣೆ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಕೊಲ್ಲೂರಿನಲ್ಲಿ ಸಲಾಂ ಆರತಿ ಹೆಸರು ಬದಲಿಸಬೇಕೆಂಬ ಆಗ್ರಹ ಕೇಳಿಬಂದ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ಹಿಂದು ಸಂಘಟನೆಗಳ ನಾಯಕರು, ಧಾರ್ಮಿಕ ಪರಿಷತ್ ನಾಯಕರು ಮೇಲುಕೋಟೆಯ ದೀವಟಿಗೆ ಸಲಾಂ ಆರತಿಯನ್ನು ಒಂದೋ ನಿಲ್ಲಿಸಬೇಕು, ಇಲ್ಲವೇ ಅದರ ಹೆಸರು ಬದಲಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು, ಹೆಸರು ಬದಲಾವಣೆಗೆ ಒತ್ತಾಯಿಸಿದ್ದಾರೆ. ಹಿಂದು ಸಂಪ್ರದಾಯದಲ್ಲಿ ಸಲಾಂ ಹೆಸರಿನ ಆರತಿಗೆ ಅವಕಾಶ ಇಲ್ಲ. ಅನ್ಯಧರ್ಮದ ದೇವರು, ರಾಜನ ಹೆಸರಿನಲ್ಲಿ ಪೂಜೆ ನಡೆಸೋದು ಬೇಡ. ಹಾಗಾಗಿ ದೀವಟಿಗೆ ಸಲಾಂ ಎನ್ನುವ ಪೂಜಾ ಪದ್ಧತಿಯನ್ನು ಬದಲಿಸುವಂತೆ ಒತ್ತಾಯ ಮಾಡಿದ್ದಾರೆ.
Salam Mangalarati ritual at Mandya temple requested to be cancelled after Kollur temple.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm