ಬ್ರೇಕಿಂಗ್ ನ್ಯೂಸ್
30-03-22 01:10 pm HK Desk news ಕರ್ನಾಟಕ
ಮಂಡ್ಯ, ಮಾ.30: ಕೊಲ್ಲೂರಿನಲ್ಲಿ ಟಿಪ್ಪು ಹೆಸರಿನಲ್ಲಿ ಸಲಾಂ ಆರತಿ ಮಾಡುವುದಕ್ಕೆ ಆಕ್ಷೇಪ ಕೇಳಿಬಂದ ಬೆನ್ನಲ್ಲೇ ಮಂಡ್ಯದ ಮೇಲುಕೋಟೆಯಲ್ಲೂ ಸಲಾಂ ಪೂಜಾ ಪದ್ಧತಿ ಇರುವುದು ಬೆಳಕಿಗೆ ಬಂದಿದೆ. ಮೇಲುಕೋಟೆ ಚೆಲುವನಾರಾಯಣ ದೇವಾಲಯದಲ್ಲಿ ಪ್ರತಿನಿತ್ಯ ದೀವಟಿಗೆ ಸಲಾಂ ಹೆಸರಿನಲ್ಲಿ ಟಿಪ್ಪು ಸ್ಮರಣೆ ನಡೆಯುತ್ತಿದ್ದು ಇದರ ಹೆಸರು ಬದಲಿಸಬೇಕೆಂದು ಹಿಂದು ಸಂಘಟನೆಗಳು ಆಕ್ಷೇಪ ಎತ್ತಿವೆ.
ಮೇಲುಕೋಟೆ ಚೆಲುವನಾರಾಯಣ ದೇವಸ್ಥಾನಕ್ಕೆ ಮೈಸೂರಿನ ರಾಜನಾಗಿದ್ದ ಟಿಪ್ಪು ಅಭಯ ನೀಡಿದ್ದ ಎಂಬ ನೆಪದಲ್ಲಿ ಆತನ ಹೆಸರಿನಲ್ಲಿ ದೀವಟಿಗೆ ಸಲಾಂ ಎಂದು ಪ್ರತಿನಿತ್ಯ ಪೂಜೆ ನಡೆಯುತ್ತದೆ. ಹಿಂದಿನಿಂದಲೂ ಪಾರಂಪರಿಕವಾಗಿ ನಡೆದು ಬಂದಿದ್ದ ಸಂಧ್ಯಾರತಿಯನ್ನೇ ದೀವಟಿಗೆ ಸಲಾಂ ಎಂದು ಟಿಪ್ಪು ಕಾಲದಲ್ಲಿ ಆತನ ಅಣತಿಯಂತೆ ಬದಲಾವಣೆ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಕೊಲ್ಲೂರಿನಲ್ಲಿ ಸಲಾಂ ಆರತಿ ಹೆಸರು ಬದಲಿಸಬೇಕೆಂಬ ಆಗ್ರಹ ಕೇಳಿಬಂದ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ಹಿಂದು ಸಂಘಟನೆಗಳ ನಾಯಕರು, ಧಾರ್ಮಿಕ ಪರಿಷತ್ ನಾಯಕರು ಮೇಲುಕೋಟೆಯ ದೀವಟಿಗೆ ಸಲಾಂ ಆರತಿಯನ್ನು ಒಂದೋ ನಿಲ್ಲಿಸಬೇಕು, ಇಲ್ಲವೇ ಅದರ ಹೆಸರು ಬದಲಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು, ಹೆಸರು ಬದಲಾವಣೆಗೆ ಒತ್ತಾಯಿಸಿದ್ದಾರೆ. ಹಿಂದು ಸಂಪ್ರದಾಯದಲ್ಲಿ ಸಲಾಂ ಹೆಸರಿನ ಆರತಿಗೆ ಅವಕಾಶ ಇಲ್ಲ. ಅನ್ಯಧರ್ಮದ ದೇವರು, ರಾಜನ ಹೆಸರಿನಲ್ಲಿ ಪೂಜೆ ನಡೆಸೋದು ಬೇಡ. ಹಾಗಾಗಿ ದೀವಟಿಗೆ ಸಲಾಂ ಎನ್ನುವ ಪೂಜಾ ಪದ್ಧತಿಯನ್ನು ಬದಲಿಸುವಂತೆ ಒತ್ತಾಯ ಮಾಡಿದ್ದಾರೆ.
Salam Mangalarati ritual at Mandya temple requested to be cancelled after Kollur temple.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm