ಬ್ರೇಕಿಂಗ್ ನ್ಯೂಸ್
01-04-22 12:42 pm HK Desk news ಕರ್ನಾಟಕ
ಮಂಡ್ಯ, ಎ.1 : ಬಾಲ್ಯ ವಿವಾಹ ನಿಷೇಧ ಇದ್ದರೂ ಇಲ್ಲೊಂದು ಕುಟುಂಬ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಮಗಳಿಗೆ ಗುಟ್ಟಾಗಿ ಬಾಲ್ಯ ವಿವಾಹ ಮಾಡಿದ್ದು, ಪರೀಕ್ಷೆ ಹಿನ್ನೆಲೆಯಲ್ಲಿ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿ ಸಿಕ್ಕಿಬಿದ್ದ ಘಟನೆ ಬೆಳಕಿಗೆ ಬಂದಿದೆ.
ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದ್ದು ಎರಡು ದಿನಗಳ ಬಳಿಕ ವಿಚಾರ ಬಯಲಾಗಿದೆ. ಮಾರ್ಚ್ 27 ರಂದು ಮನೆಯಲ್ಲೇ ಗುಟ್ಟಾಗಿ SSLC ಬಾಲಕಿಯನ್ನು ಯುವಕನ ಜೊತೆಗೆ ಮದುವೆ ಮಾಡಲಾಗಿತ್ತು. ಕೆ.ಆರ್.ಪೇಟೆ ತಾಲೂಕಿನ ಸಂಬಂಧಿ ಯುವಕನೊಂದಿಗೆ ಮದುವೆ ಮಾಡಿದ್ದರು.
ಮರುದಿನ 28ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಇದ್ದುದರಿಂದ ಪೋಷಕರೇ ಮಗಳ ತಾಳಿ ಮತ್ತು ಕಾಲುಂಗುರ ಬಿಚ್ಚಿಸಿ ಪರೀಕ್ಷೆ ಬರೆಯಲು ಕಳುಹಿಸಿದ್ದರು. ಪರೀಕ್ಷೆ ಬರೆಯಲು ಹೋಗಿದ್ದಾಗ ಬಾಲಕಿ ತನ್ನ ಸ್ನೇಹಿತೆಗೆ ಮದುವೆ ಬಗ್ಗೆ ಹೇಳಿಕೊಂಡಿದ್ದಳು. ಇದರಿಂದ ಮಾಹಿತಿ ಶಾಲೆಯ ಸಿಬಂದಿಗೆ ತಿಳಿದು ಮಕ್ಕಳ ರಕ್ಷಣಾ ಇಲಾಖೆಗೆ ಹೋಗಿತ್ತು. ಮೊದಲೇ ಗುಮಾನಿ ಹೊಂದಿದ್ದ ಅಧಿಕಾರಿಗಳು ಮನೆಗೆ ಬಂದು ಬಾಲಕಿಯ ರಕ್ಷಣೆ ಮಾಡಿದ್ದಾರೆ.
ಸದ್ಯ ಸಂತ್ರಸ್ತ ಬಾಲಕಿಯನ್ನು ಮಂಡ್ಯದ ಬಾಲ ಮಂದಿರದಲ್ಲಿ ಇರಿಸಲಾಗಿದ್ದು ಬಾಲ್ಯ ವಿವಾಹ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದಾರೆ. ಮದುವೆ ನಿಶ್ಚಯವಾಗಿದ್ದಾಗಲೇ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳಿಗೆ ದೂರು ಹೋಗಿದ್ದರಿಂದ ಕುಟುಂಬಕ್ಕೆ ಎಚ್ಚರಿಕೆ ನೀಡಿದ್ದರು. ಬಾಲ್ಯ ವಿವಾಹದ ಬಗ್ಗೆ ಕಂಪ್ಲೇಂಟ್ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಮಾರ್ಚ್ 18 ಮತ್ತು 25 ರಂದು ಬಾಲಕಿಯ ಮನೆಗೆ ಭೇಟಿ ನೀಡಿ ವಾರ್ನ್ ಮಾಡಿತ್ತು. ಆದರೆ ಅಧಿಕಾರಿಗಳ ಎಚ್ಚರಿಕೆ ಹಾಗೂ ಬುದ್ಧಿ ಮಾತಿಗೂ ಕೇರ್ ಮಾಡದೇ 27ರಂದು ಪೋಷಕರೇ ಕದ್ದು ಮುಚ್ಚಿ ವಿವಾಹ ಮಾಡಿಸಿದ್ದಾರೆ.
Mandya Child marriage exposed, sslc student caught while writing exams
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm