ಬ್ರೇಕಿಂಗ್ ನ್ಯೂಸ್
01-04-22 12:42 pm HK Desk news ಕರ್ನಾಟಕ
ಮಂಡ್ಯ, ಎ.1 : ಬಾಲ್ಯ ವಿವಾಹ ನಿಷೇಧ ಇದ್ದರೂ ಇಲ್ಲೊಂದು ಕುಟುಂಬ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಮಗಳಿಗೆ ಗುಟ್ಟಾಗಿ ಬಾಲ್ಯ ವಿವಾಹ ಮಾಡಿದ್ದು, ಪರೀಕ್ಷೆ ಹಿನ್ನೆಲೆಯಲ್ಲಿ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿ ಸಿಕ್ಕಿಬಿದ್ದ ಘಟನೆ ಬೆಳಕಿಗೆ ಬಂದಿದೆ.
ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದ್ದು ಎರಡು ದಿನಗಳ ಬಳಿಕ ವಿಚಾರ ಬಯಲಾಗಿದೆ. ಮಾರ್ಚ್ 27 ರಂದು ಮನೆಯಲ್ಲೇ ಗುಟ್ಟಾಗಿ SSLC ಬಾಲಕಿಯನ್ನು ಯುವಕನ ಜೊತೆಗೆ ಮದುವೆ ಮಾಡಲಾಗಿತ್ತು. ಕೆ.ಆರ್.ಪೇಟೆ ತಾಲೂಕಿನ ಸಂಬಂಧಿ ಯುವಕನೊಂದಿಗೆ ಮದುವೆ ಮಾಡಿದ್ದರು.
ಮರುದಿನ 28ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಇದ್ದುದರಿಂದ ಪೋಷಕರೇ ಮಗಳ ತಾಳಿ ಮತ್ತು ಕಾಲುಂಗುರ ಬಿಚ್ಚಿಸಿ ಪರೀಕ್ಷೆ ಬರೆಯಲು ಕಳುಹಿಸಿದ್ದರು. ಪರೀಕ್ಷೆ ಬರೆಯಲು ಹೋಗಿದ್ದಾಗ ಬಾಲಕಿ ತನ್ನ ಸ್ನೇಹಿತೆಗೆ ಮದುವೆ ಬಗ್ಗೆ ಹೇಳಿಕೊಂಡಿದ್ದಳು. ಇದರಿಂದ ಮಾಹಿತಿ ಶಾಲೆಯ ಸಿಬಂದಿಗೆ ತಿಳಿದು ಮಕ್ಕಳ ರಕ್ಷಣಾ ಇಲಾಖೆಗೆ ಹೋಗಿತ್ತು. ಮೊದಲೇ ಗುಮಾನಿ ಹೊಂದಿದ್ದ ಅಧಿಕಾರಿಗಳು ಮನೆಗೆ ಬಂದು ಬಾಲಕಿಯ ರಕ್ಷಣೆ ಮಾಡಿದ್ದಾರೆ.
ಸದ್ಯ ಸಂತ್ರಸ್ತ ಬಾಲಕಿಯನ್ನು ಮಂಡ್ಯದ ಬಾಲ ಮಂದಿರದಲ್ಲಿ ಇರಿಸಲಾಗಿದ್ದು ಬಾಲ್ಯ ವಿವಾಹ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದಾರೆ. ಮದುವೆ ನಿಶ್ಚಯವಾಗಿದ್ದಾಗಲೇ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳಿಗೆ ದೂರು ಹೋಗಿದ್ದರಿಂದ ಕುಟುಂಬಕ್ಕೆ ಎಚ್ಚರಿಕೆ ನೀಡಿದ್ದರು. ಬಾಲ್ಯ ವಿವಾಹದ ಬಗ್ಗೆ ಕಂಪ್ಲೇಂಟ್ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಮಾರ್ಚ್ 18 ಮತ್ತು 25 ರಂದು ಬಾಲಕಿಯ ಮನೆಗೆ ಭೇಟಿ ನೀಡಿ ವಾರ್ನ್ ಮಾಡಿತ್ತು. ಆದರೆ ಅಧಿಕಾರಿಗಳ ಎಚ್ಚರಿಕೆ ಹಾಗೂ ಬುದ್ಧಿ ಮಾತಿಗೂ ಕೇರ್ ಮಾಡದೇ 27ರಂದು ಪೋಷಕರೇ ಕದ್ದು ಮುಚ್ಚಿ ವಿವಾಹ ಮಾಡಿಸಿದ್ದಾರೆ.
Mandya Child marriage exposed, sslc student caught while writing exams
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm