ಬ್ರೇಕಿಂಗ್ ನ್ಯೂಸ್
03-04-22 10:54 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.3: ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಷ್ಟೇ ಸೀಮಿತವಾಗಿದ್ದ ವಿಧಾನ ಪರಿಷತ್ ಸಭಾಪತಿ, ಹಿರಿಯ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಕೊನೆಗೂ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮುಂಬರುವ ಚುನಾವಣೆ ವೇಳೆಗೆ ಬಿಜೆಪಿ ಸೇರುವುದು ಬಹುತೇಕ ಖಚಿತ ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಈಗಾಗಲೇ ಚರ್ಚೆಗಳು ನಡೆದಿವೆ. ಬಹುತೇಕ ಮುಂದಿನ ದಿನಗಳಲ್ಲಿ ಬಿಜೆಪಿ ಸೇರುವುದು ಖಚಿತ. ಈಗ ಸಭಾಪತಿ ಸ್ಥಾನದಲ್ಲಿರುವುದರಿಂದ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವುದಕ್ಕೆ ಆಗಲ್ಲ. ಮುಂದೆ ನಾನೇ ಈ ಬಗ್ಗೆ ತಿಳಿಸಲಿದ್ದೇನೆ ಎಂದು ತಿಳಿಸಿದರು.

ಬಿಜೆಪಿ ನಾಯಕರೊಂದಿಗೆ ಈ ಬಗ್ಗೆ ಮಾತುಕತೆ ಆಗಿದೆ. ಎಲ್ಲ ನಾಯಕರಿಂದಲು ಸಹಮತ ವ್ಯಕ್ತವಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಮುಖ್ಯಮಂತ್ರಿ, ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಸಹಮತ ತೋರಿದ್ದಾರೆ ಎಂದು ಹೊರಟ್ಟಿ ಹೇಳಿದರು.

ಯಾವಾಗ ಬಿಜೆಪಿ ಸೇರುತ್ತೀರಿ ಎಂಬ ಪ್ರಶ್ನೆಗೆ, ಬಹುತೇಕ ಮುಂದಿನ ಚುನಾವಣೆ ಘೋಷಣೆಯಾದ ನಂತರ ಬಿಜೆಪಿ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೂ ಈ ವಿಷಯವಾಗಿ ಚರ್ಚಿಸಿದ್ದೇನೆ. ಎಲ್ಲರ ಅನುಮತಿ ಪಡೆದು ಬಿಜೆಪಿ ಸೇರುತ್ತಿದ್ದೇನೆ ಎಂದರು. ಬಸವರಾಜ ಹೊರಟ್ಟಿ ಜನತಾ ಪರಿವಾರದ ಹಿರಿಯ ಮುಖಂಡರಾಗಿದ್ದು ಉತ್ತರ ಕರ್ನಾಟಕದಲ್ಲಿ ಇರುವ ಜೆಡಿಎಸ್ ಪಾಲಿನ ಏಕೈಕ ಲಿಂಗಾಯತ ಪ್ರಭಾವಿ ಮುಖಂಡ. ಇವರ ಬಿಜೆಪಿ ಸೇರ್ಪಡೆಯಿಂದ ಹುಬ್ಬಳ್ಳಿ- ಧಾರವಾಡದಲ್ಲಿ ಬಿಜೆಪಿಗೆ ಮತ್ತಷ್ಟು ಶಕ್ತಿ ಸಿಗಲಿದೆ. ಅಲ್ಲದೆ, ಪರಿಷತ್ ಸಭಾಪತಿ ಸ್ಥಾನವನ್ನೂ ಹೊರಟ್ಟಿ ಉಳಿಸಿಕೊಳ್ಳಲಿದ್ದಾರೆ.
The Vidhan Sabha Chairperson, senior JDS leader Basavaraja, who was limited to the rumor that the BJP will be joining the party, has finally made it clear. The BJP is almost certain to join the forthcoming elections, Basavaraja said.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm