ಬ್ರೇಕಿಂಗ್ ನ್ಯೂಸ್
08-04-22 06:01 pm Bengaluru Correspondent ಕರ್ನಾಟಕ
ಬೆಂಗಳೂರು, ಎ.8: ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶ ವ್ಯಾಪ್ತಿಯ ಒಂಬತ್ತು ಶಾಲಾಡಳಿತಗಳಿಗೆ ಏಕಕಾಲದಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದ್ದು, ಪೊಲೀಸರು ಒಮ್ಮಿಂದೊಮ್ಮೆಲೇ ತಡಬಡಾಯಿಸಿ ಅಲರ್ಟ್ ಆಗಿದ್ದಾರೆ.
ಶಾಲೆಗಳ ಆಡಳಿತ ಮಂಡಳಿಯ ಇಮೇಲ್ ಗಳಿಗೆ ಬಾಂಬ್ ಹಾಕುವುದಾಗಿ ಅನಾಮಧೇಯ ಸಂದೇಶ ಹಾಕಲಾಗಿತ್ತು. ಕೂಡಲೇ ಶಾಲಾ ಸಿಬಂದಿ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಶಾಲೆಯ ಆವರಣದಲ್ಲಿ ಸರ್ಚ್ ನಡೆಸಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ಕಾರಣ ವಿದ್ಯಾರ್ಥಿಗಳು ಮತ್ತು ಶಾಲಾ ಸಿಬಂದಿ ತೀವ್ರ ಆತಂಕಕ್ಕೆ ಒಳಗಾಗಿದ್ದರು. ಪೊಲೀಸರು ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಿ ತಪಾಸಣೆ ನಡೆಸಿದ್ದಾರೆ.
ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕೊಪ್ಪ ಬೇಗೂರು ರಸ್ತೆಯಲ್ಲಿರುವ ಕ್ಯಾಂಡಾರ್ ಸ್ಕೂಲ್ ಮತ್ತು ರೆಡ್ ಬ್ರಿಡ್ಜ್ ಸ್ಕೂಲ್ ಗೆ ಬೆದರಿಕೆ ಮೇಲ್ ಬಂದಿತ್ತು. ಇದಕ್ಕೂ ಮುನ್ನ ಬೆಳಗ್ಗಿನ ವೇಳೆ ಎಬಿನೈಜರ್ ಇಂಟರ್ ನ್ಯಾಷನಲ್ ಸ್ಕೂಲ್ ಗೆ ಬೆದರಿಕೆ ಮೇಲ್ ಕಳಿಸಲಾಗಿತ್ತು. ಸರ್ಜಾಪುರ ರಸ್ತೆಯ ಕುನ್ಸ್ ಕ್ಯಾಪ್ಸ್ ಕೋಲಮ್ ಇಂಟರ್ನ್ಯಾಷನಲ್ ಸ್ಕೂಲ್, ಹೆಣ್ಣೂರಿನ ಸೆಂಟ್ ವಿನ್ಸೆಂಟ್ ಪಲ್ಲೋಟಿ ಶಾಲೆ, ಇಂಡಿಯನ್ ಪಬ್ಲಿಕ್ ಸ್ಕೂಲ್- ಗೋವಿಂದಪುರ, ಡೆಲ್ಲಿ ಪಬ್ಲಿಕ್ ಶಾಲೆ- ವರ್ತೂರು, ನ್ಯೂ ಅಕಾಡೆಮಿ ಶಾಲೆ- ಮಾರತಹಳ್ಳಿ, ಎಬಿನೈಜರ್ ಇಂಟರ್ ನ್ಯಾಷನಲ್ ಶಾಲೆ – ಹೆಬ್ಬಗೋಡಿ, ಗೋಪಾಲನ್ ಇಂಟರ್ ನ್ಯಾಷನಲ್ ಶಾಲೆ- ಮಹದೇವಪುರ ಹೀಗೆ ಬೆಂಗಳೂರು ನಗರ ಭಾಗದಲ್ಲಿ ಐದು ಶಾಲೆಗಳು ಹಾಗೂ ಗ್ರಾಮಾಂತರ ಪ್ರದೇಶದ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ.
ಪೊಲೀಸರ ಪರಿಶೀಲನೆ, ಹುಸಿಬಾಂಬ್ !
ಬೆದರಿಕೆ ಬಂದಿದ್ದ ಎಲ್ಲ ಶಾಲೆಗಳಿಗೂ ತೆರಳಿದ ಪೊಲೀಸರು ಶಾಲೆ ಆವರಣದ ಮೂಲೆ ಮೂಲೆಯಲ್ಲೂ ತಡಕಾಡಿದ್ದಾರೆ. ಬಾಂಬ್ ಬಗ್ಗೆ ಯಾವುದೇ ಮಾಹಿತಿ ಸಿಗದ ಹಿನ್ನೆಲೆಯಲ್ಲಿ ಹುಸಿ ಬಾಂಬ್ ಎಂದು ಪೊಲೀಸರು ಹಿಂತಿರುಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಪೂರ್ವ ವಿಭಾಗ ಎಸಿಪಿ ಸುಬ್ರಮಣ್ಯೇಶ್ವರ ರಾವ್, ನಗರದಲ್ಲಿ 8-9 ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು ಬಾಂಬ್ ನಿಷ್ಕ್ರಿಯ ದಳ ಮತ್ತು ಪೊಲೀಸರು ಶಾಲೆಗಳನ್ನ ಸಂಪೂರ್ಣ ಪರಿಶೀಲನೆ ಮಾಡಿದ್ದಾರೆ. ಮಕ್ಕಳು, ಪೋಷಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಪರೀಕ್ಷೆ ಸಮಯದಲ್ಲಿ ಈ ರೀತಿ ಬೆದರಿಕೆ ಬರುವುದು ಸಹಜ. ವಿವಿಧ ಇ-ಮೇಲ್ ಐಡಿಗಳಿಂದ ಬೆದರಿಕೆ ಬಂದಿದ್ದು ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.
Five schools in Bengaluru have been bombed. The bomb was threatened by anonymous e-mail.By 10-25 am on Friday, four schools in Bengaluru were bombed by e-mail and the police raided the place. “A powerful bomb has been placed in your school. It is your duty to be careful. "Please inform the police immediately."
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm