ಬ್ರೇಕಿಂಗ್ ನ್ಯೂಸ್
08-04-22 06:01 pm Bengaluru Correspondent ಕರ್ನಾಟಕ
ಬೆಂಗಳೂರು, ಎ.8: ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶ ವ್ಯಾಪ್ತಿಯ ಒಂಬತ್ತು ಶಾಲಾಡಳಿತಗಳಿಗೆ ಏಕಕಾಲದಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದ್ದು, ಪೊಲೀಸರು ಒಮ್ಮಿಂದೊಮ್ಮೆಲೇ ತಡಬಡಾಯಿಸಿ ಅಲರ್ಟ್ ಆಗಿದ್ದಾರೆ.
ಶಾಲೆಗಳ ಆಡಳಿತ ಮಂಡಳಿಯ ಇಮೇಲ್ ಗಳಿಗೆ ಬಾಂಬ್ ಹಾಕುವುದಾಗಿ ಅನಾಮಧೇಯ ಸಂದೇಶ ಹಾಕಲಾಗಿತ್ತು. ಕೂಡಲೇ ಶಾಲಾ ಸಿಬಂದಿ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಶಾಲೆಯ ಆವರಣದಲ್ಲಿ ಸರ್ಚ್ ನಡೆಸಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ಕಾರಣ ವಿದ್ಯಾರ್ಥಿಗಳು ಮತ್ತು ಶಾಲಾ ಸಿಬಂದಿ ತೀವ್ರ ಆತಂಕಕ್ಕೆ ಒಳಗಾಗಿದ್ದರು. ಪೊಲೀಸರು ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಿ ತಪಾಸಣೆ ನಡೆಸಿದ್ದಾರೆ.

ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕೊಪ್ಪ ಬೇಗೂರು ರಸ್ತೆಯಲ್ಲಿರುವ ಕ್ಯಾಂಡಾರ್ ಸ್ಕೂಲ್ ಮತ್ತು ರೆಡ್ ಬ್ರಿಡ್ಜ್ ಸ್ಕೂಲ್ ಗೆ ಬೆದರಿಕೆ ಮೇಲ್ ಬಂದಿತ್ತು. ಇದಕ್ಕೂ ಮುನ್ನ ಬೆಳಗ್ಗಿನ ವೇಳೆ ಎಬಿನೈಜರ್ ಇಂಟರ್ ನ್ಯಾಷನಲ್ ಸ್ಕೂಲ್ ಗೆ ಬೆದರಿಕೆ ಮೇಲ್ ಕಳಿಸಲಾಗಿತ್ತು. ಸರ್ಜಾಪುರ ರಸ್ತೆಯ ಕುನ್ಸ್ ಕ್ಯಾಪ್ಸ್ ಕೋಲಮ್ ಇಂಟರ್ನ್ಯಾಷನಲ್ ಸ್ಕೂಲ್, ಹೆಣ್ಣೂರಿನ ಸೆಂಟ್ ವಿನ್ಸೆಂಟ್ ಪಲ್ಲೋಟಿ ಶಾಲೆ, ಇಂಡಿಯನ್ ಪಬ್ಲಿಕ್ ಸ್ಕೂಲ್- ಗೋವಿಂದಪುರ, ಡೆಲ್ಲಿ ಪಬ್ಲಿಕ್ ಶಾಲೆ- ವರ್ತೂರು, ನ್ಯೂ ಅಕಾಡೆಮಿ ಶಾಲೆ- ಮಾರತಹಳ್ಳಿ, ಎಬಿನೈಜರ್ ಇಂಟರ್ ನ್ಯಾಷನಲ್ ಶಾಲೆ – ಹೆಬ್ಬಗೋಡಿ, ಗೋಪಾಲನ್ ಇಂಟರ್ ನ್ಯಾಷನಲ್ ಶಾಲೆ- ಮಹದೇವಪುರ ಹೀಗೆ ಬೆಂಗಳೂರು ನಗರ ಭಾಗದಲ್ಲಿ ಐದು ಶಾಲೆಗಳು ಹಾಗೂ ಗ್ರಾಮಾಂತರ ಪ್ರದೇಶದ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ.
ಪೊಲೀಸರ ಪರಿಶೀಲನೆ, ಹುಸಿಬಾಂಬ್ !
ಬೆದರಿಕೆ ಬಂದಿದ್ದ ಎಲ್ಲ ಶಾಲೆಗಳಿಗೂ ತೆರಳಿದ ಪೊಲೀಸರು ಶಾಲೆ ಆವರಣದ ಮೂಲೆ ಮೂಲೆಯಲ್ಲೂ ತಡಕಾಡಿದ್ದಾರೆ. ಬಾಂಬ್ ಬಗ್ಗೆ ಯಾವುದೇ ಮಾಹಿತಿ ಸಿಗದ ಹಿನ್ನೆಲೆಯಲ್ಲಿ ಹುಸಿ ಬಾಂಬ್ ಎಂದು ಪೊಲೀಸರು ಹಿಂತಿರುಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಪೂರ್ವ ವಿಭಾಗ ಎಸಿಪಿ ಸುಬ್ರಮಣ್ಯೇಶ್ವರ ರಾವ್, ನಗರದಲ್ಲಿ 8-9 ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು ಬಾಂಬ್ ನಿಷ್ಕ್ರಿಯ ದಳ ಮತ್ತು ಪೊಲೀಸರು ಶಾಲೆಗಳನ್ನ ಸಂಪೂರ್ಣ ಪರಿಶೀಲನೆ ಮಾಡಿದ್ದಾರೆ. ಮಕ್ಕಳು, ಪೋಷಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಪರೀಕ್ಷೆ ಸಮಯದಲ್ಲಿ ಈ ರೀತಿ ಬೆದರಿಕೆ ಬರುವುದು ಸಹಜ. ವಿವಿಧ ಇ-ಮೇಲ್ ಐಡಿಗಳಿಂದ ಬೆದರಿಕೆ ಬಂದಿದ್ದು ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.
Five schools in Bengaluru have been bombed. The bomb was threatened by anonymous e-mail.By 10-25 am on Friday, four schools in Bengaluru were bombed by e-mail and the police raided the place. “A powerful bomb has been placed in your school. It is your duty to be careful. "Please inform the police immediately."
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm