ಬ್ರೇಕಿಂಗ್ ನ್ಯೂಸ್
08-04-22 10:52 pm HK Desk news ಕರ್ನಾಟಕ
ಬೆಳ್ತಂಗಡಿ, ಎ.8: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬಿಲ್ಲವ ಸಂಘಟನೆಗೆ ದೂರು ನೀಡಿ ಸಂಚಲನ ಮೂಡಿಸಿದ್ದ ಮಹಿಳಾ ಅರಣ್ಯಾಧಿಕಾರಿ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಧರ್ಮಸ್ಥಳ ಠಾಣೆ ವ್ಯಾಪ್ತಿಯ ಕಲ್ಮಂಜ ಗ್ರಾಮದ ಕಜೆ ನಿವಾಸಿ ಐತ ಕೊರಗ ಎಂಬವರು ದೂರು ನೀಡಿದ್ದು ಅರಣ್ಯ ಇಲಾಖೆಯ ಪ್ರಕಾಶ್ ನೆಟಾಲ್ಕರ್, ಕ್ಲಿಫರ್ಡ್ ಲೋಬೊ ಮತ್ತು ಸಂಧ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ.
ದೂರುದಾರ ಐತ ಕೊರಗ ಎಂಬವರು ಕಲ್ಮಂಜ ಗ್ರಾಮದ ಕಜೆ ಎಂಬಲ್ಲಿ 2.18 ಎಕ್ರೆ ಭೂಮಿ ಹೊಂದಿದ್ದು, ಅದರಲ್ಲಿ ಹೆಬ್ಬಲಸು, ಬಣ್ಪು, ರಾಮಪತ್ರೆ, ಗೇರು ಕೃಷಿ ಹಾಗೂ ಮಾವು ಮರಗಳನ್ನು ಹೊಂದಿದ್ದರು. ಗೇರು ಕೃಷಿ ಲಾಭ ಇಲ್ಲವೆಂದು ಕಳೆದ 2021ರ ಡಿ.9ರಂದು ಗೇರು ಮರಗಳನ್ನು ಕಡಿದು ಅಡಿಕೆ ಕೃಷಿ ಮಾಡಲು ಮುಂದಾಗಿದ್ದರು. ಕಡಿದ ಗೇರು ಮರಗಳನ್ನು ಡಿ.9ರಂದು ವಾಹನದಲ್ಲಿ ಬೇರೆಡೆಗೆ ಸಾಗಿಸಲು ಯತ್ನಿಸುತ್ತಿದ್ದಾಗ ಅರಣ್ಯ ಇಲಾಖೆಯ ಅಧಿಕಾರಿಗಳಾದ ಪ್ರಕಾಶ್ ನೆಟಾಲ್ಕರ್, ಕ್ಲಿಫರ್ಡ್ ಲೋಬೊ ಮತ್ತು ಸಂಧ್ಯಾ ಎಂಬವರು ಸ್ಥಳಕ್ಕೆ ಬಂದಿದ್ದು ಕಡಿದು ಹಾಕಿದ ಮರ ಹಾಗೂ ವಾಹನವನ್ನು ಜಪ್ತಿ ಮಾಡಿದ್ದರು. ಅಲ್ಲದೆ, ಮರಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದರು.
ಮರುದಿನ ಅರಣ್ಯ ವಲಯ ಅಧಿಕಾರಿ ಸಂಧ್ಯಾ ಅವರು ಸ್ಥಳಕ್ಕೆ ಬಂದಿದ್ದು ಮರಗಳನ್ನು ಡಿಪೋಗೆ ಸಾಗಿಸಿದ್ದು ಮತ್ತಷ್ಟು ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದಾರೆ. ಅಲ್ಲದೆ, ಸಂಧ್ಯಾರವರು ದೂರುದಾರ ಐತ ಅವರಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನೆಟಾಲ್ಕರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೊ ಅವರಿಗೆ ಹಣ ಕೊಡಬೇಕಾಗಿದೆ. 5 ಲಕ್ಷ ರೂ. ನೀಡುವಂತೆ ಕೇಳಿದ್ದಾರೆ. ಹಣ ನೀಡಲು ಸಾಧ್ಯವಿಲ್ಲ ಎಂದಾಗ, ಕೋಪಗೊಂಡ ಸಂಧ್ಯಾರವರು ಕೊರಗ ಜಾತಿಗೆ ಸೇರಿದ ನಿಮ್ಮ ಬುದ್ಧಿಯೇ ಇಷ್ಟು.. ನಿಮಗೆ ಹೇಗೆ ಬುದ್ಧಿ ಕಲಿಸಬೇಕೆಂದು ಗೊತ್ತಿದೆ ಎಂದು ಬೆದರಿಸಿ ಜಾತಿ ನಿಂದನೆ ಮಾಡಿದ್ದಾರೆ.
ಅಲ್ಲದೆ, ಐತ ಕೊರಗ ಅವರಿಗೆ ಹಿಂಸೆ ನೀಡುವ ಉದ್ದೇಶದಿಂದ ಮೂವರು ಅಧಿಕಾರಿಗಳು ಸುಳ್ಳು ವರದಿ ತಯಾರಿಸಿ ಪ್ರಕರಣ ದಾಖಲು ಮಾಡಿದ್ದಾರೆ. ಈ ಬಗ್ಗೆ ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಮೂವರು ಅರಣ್ಯಾಧಿಕಾರಿಗಳ ವಿರುದ್ಧ ಸೆಕ್ಷನ್ 447, 506 ಹಾಗೂ ಎಸ್ಸಿ-ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಕಳೆದ ಡಿಸೆಂಬರ್ ತಿಂಗಳಲ್ಲಿ ಬಿಲ್ಲವ ಮಹಿಳಾ ಅಧಿಕಾರಿಯನ್ನು ಬೆಳ್ತಂಗಡಿ ಶಾಸಕ ಹರೀಶ ಪೂಂಜ ಗುಲ್ಬರ್ಗಕ್ಕೆ ವರ್ಗಾಯಿಸಿದ್ದು ಭಾರೀ ಸುದ್ದಿಯಾಗಿತ್ತು. ಆನಂತರ, ಈ ವಿಚಾರವನ್ನು ಟ್ರಿಬ್ಯುನಲ್ ನಲ್ಲಿ ಪ್ರಶ್ನಿಸಿ ಅರಣ್ಯಾಧಿಕಾರಿ ಮತ್ತೆ ಉಡುಪಿಯಲ್ಲೇ ತನ್ನ ಸ್ಥಾನ ಉಳಿಸಿಕೊಂಡಿದ್ದರು. ಇದರಿಂದ ಬೆಳ್ತಂಗಡಿ ಶಾಸಕರಿಗೂ ಮುಖಭಂಗ ಆಗಿತ್ತು. ಇದೀಗ ಹಳೆ ಪ್ರಕರಣದಲ್ಲಿ ಅಧಿಕಾರಿ ವಿರುದ್ಧ ಜಾತಿ ನಿಂದನೆ ಕೇಸು ದಾಖಲಾಗಿದ್ದು, ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.
Belthangady caste abuse case filed against Lady forest officer Sadhya Sachin's in Dharmasthala
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm