ಬ್ರೇಕಿಂಗ್ ನ್ಯೂಸ್
11-04-22 01:46 pm HK Desk news ಕರ್ನಾಟಕ
ವಿಜಯಪುರ, ಎ.11: ಸಚಿವ ಸಂಪುಟ ಬದಲಾವಣೆ ಮಾಡ್ತಾರೋ, ಪುನರ್ ರಚನೆ ಮಾಡ್ತಾರೋ ಯಾವುದರ ಬಗ್ಗೆನೂ ಸ್ಪಷ್ಟವಾದ ಸಂದೇಶ ಕೇಂದ್ರದಿಂದ ಬಂದಿಲ್ಲ. ಈಗ ನಾವು ಏನೇ ಮಾತನಾಡಿದ್ರೂ ಅದು ಊಹಾಪೋಹ ಆಗುತ್ತದೆ. ಪಕ್ಷದ ಕಾರ್ಯಕಾರಿಣಿ ಬಳಿಕ ಒಟ್ಟಾರೆ ಒಳ್ಳೆ ಬೆಳವಣಿಗೆ ಆಗುತ್ತದೆ ಎಂದು ಬಿಜೆಪಿ ರೆಬೆಲ್ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.
ವೈಯಕ್ತಿಕ ಹಾಗೂ ಕಾರ್ಯಕಾರಿಣಿ ಕೆಲಸದ ನಿಮಿತ್ತ ನಾನು ದೆಹಲಿಗೆ ಹೋಗಿದ್ದೆ. ಮಂತ್ರಿಯಾಗಲು ಲಾಬಿ ಮಾಡೋದಕ್ಕೆ ನಾನು ದೆಹಲಿಗೆ ಹೋಗಿಲ್ಲ. ಈ ಮೊದಲೂ ಅರವಿಂದ ಬೆಲ್ಲದ ಜೊತೆ ನಾನು ದೆಹಲಿಗೆ ಹೋಗಿದ್ದೆ, ಮಂತ್ರಿಗೋಸ್ಕರ ಹೋಗಿರಲಿಲ್ಲ ಎಂದಿದ್ದಾರೆ ಯತ್ನಾಳ್. ನೀವು ಸಚಿವನಾಗಲು ವಿಜಯೇಂದ್ರ ಅಡ್ಡಗಾಲು ಹಾಕುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ ಎಂತೆಂಥವರನ್ನೋ ಮನೆಯಲ್ಲಿ ಕೂಡಿಸಿದೆ ಹೈಕಮಾಂಡ್, ಇನ್ನು ವಿಜಯೇಂದ್ರ ಯಾವ ಗಿಡದ ತೊಪ್ಪಲು. ನನ್ನಿಂದ ಬಿಜೆಪಿ ಎನ್ನುವವರನ್ನೇ ಮನೆಯಲ್ಲಿ ಕೂಡಿಸಿದ್ದಾರೆ, ವಿಜಯೇಂದ್ರ ಮೊನ್ನೆ ಮೊನ್ನೆ ಹುಟ್ಟಿದ ಹುಡುಗ. ಬಿಜೆಪಿಯಲ್ಲಿ ಇನ್ಮುಂದೆ ವಂಶ ಪಾರಂಪರೆಗೆ ಅವಕಾಶವಿಲ್ಲ. ಪರಿವಾರ ವಾದ್ ಬಿಜೆಪಿಯಲ್ಲಿ ನಡೆಯಲ್ಲ ಎಂದು ಎಂದು ಪ್ರಧಾನ ಮಂತ್ರಿಗಳು ನಾಲ್ಕೈದು ಬಾರಿ ಹೇಳಿದ್ದಾರೆ. ಮಕ್ಕಳಿಗೆ, ಮೊಮ್ಮಕ್ಕಳಿಗೆ ಟಿಕೆಟ್ ಕೊಡುವ ಕಾಲ ಬಿಜೆಪಿಯಲ್ಲಿ ಹೋಯ್ತು.

ಮೊನ್ನೆ ಉತ್ತರ ಪ್ರದೇಶದಲ್ಲಿ ಈ ಪ್ರಯೋಗ ಆಗಿದೆ. ಅಪ್ಪನ ಜಾಗ ನನಗೆ ಬೇಕು, ಅಪ್ಪನ ಜಾಗ ನನಗೆ ಕೊಡಿ ಎನ್ನುವುದು ಇನ್ಮುಂದೆ ಯಾವುದು ಉಳಿಯಲ್ಲ ಎಂಬ ವಿಶ್ವಾಸ ನನಗಿದೆ. ಆ ಭ್ರಮೆಯಲ್ಲಿ ಇರುವುದಕ್ಕಿಂದ ಈಗೇನಾದ್ರೂ ಉದ್ಯೋಗ ಮಾಡಿಕೊಂಡಿದ್ರೆ ಅದರಲ್ಲೇ ಮುಂದುವರೆಯುವುದು ಒಳ್ಳೆಯದು ಎಂದು ಯಡಿಯೂರಪ್ಪ ಮತ್ತು ಅವರ ಪುತ್ರನಿಗೆ ಟಾಂಗ್ ನೀಡಿದ್ದಾರೆ.
Karnataka Yatnal talks about cabinet expansion and surgery.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm