ಬ್ರೇಕಿಂಗ್ ನ್ಯೂಸ್
12-04-22 06:49 pm HK Desk news ಕರ್ನಾಟಕ
ಬೆಂಗಳೂರು, ಎ.12: ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು. ಕೂಡಲೇ ಅವರನ್ನು ಪೊಲೀಸರು ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹ ಮಾಡಿದ್ದಾರೆ.
ಗುತ್ತಿಗೆದಾರ ಸಾಯುವುದಕ್ಕೂ ಮುನ್ನ ಈಶ್ವರಪ್ಪ ಹೆಸರು ಹೇಳಿದ್ದಾರೆ. ತನ್ನ ಸಾವಿಗೆ ಈಶ್ವರಪ್ಪನೇ ಕಾರಣ ಎಂದು ನೇರವಾಗಿ ಆರೋಪ ಮಾಡಿದ್ದಾರೆ. ಹೀಗಾಗಿ ಈಶ್ವರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಲೇ ಸಂಪುಟದಿಂದ ಕಿತ್ತು ಹಾಕಬೇಕು ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಡಿಕೆಶಿ ಆಗ್ರಹಿಸಿದ್ದಾರೆ.

ರಾಜ್ಯ ಮಟ್ಟದ ಗುತ್ತಿಗೆದಾರರ ಸಂಘದ ನಾಯಕರೇ ಸರಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತನೂ ಆಗಿರುವ ಸಂತೋಷ್ ಪಾಟೀಲ್ ಬಗ್ಗೆಯೂ ಉಲ್ಲೇಖ ಮಾಡಿದ್ದರು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೂ ಪತ್ರ ಬರೆದಿದ್ದರು. ಆದರೆ ಈಗ ಒಬ್ಬ ಗುತ್ತಿಗೆದಾರ ಸಾವಿಗೆ ಶರಣಾಗಿದ್ದಾರೆ. ಇಂತಹ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಯಾರನ್ನೂ ರಕ್ಷಿಸಲು ಹೋಗಬಾರದು. ತನಿಖೆ ನಡೆಸ್ತೀವಿ, ಸತ್ಯ ಹೊರತರುತ್ತೇವೆ ಎಂದು ಹೇಳಿ ಸಮಯ ತಳ್ಳುವ ಕೆಲಸ ಬೇಡ. ಕೂಡಲೇ ಸಚಿವ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಪೊಲೀಸರಿಗೆ ಸೂಚನೆ ನೀಡಬೇಕು. ಮುಖ್ಯಮಂತ್ರಿ ತಮ್ಮ ಹುದ್ದೆಯ ಗೌರವ ಕಾಪಾಡಬೇಕು ಎಂದು ಶಿವಕುಮಾರ್ ಹೇಳಿದ್ದಾರೆ.

ಸಚಿವರ ವಿರುದ್ಧ ತುಂಬ ಗಂಭೀರವಾದ ಆರೋಪವನ್ನು ಮಾಡಲಾಗಿದೆ. ಹಾಗಾಗಿ ಈ ಬಗ್ಗೆ ಪೊಲೀಸರು ಕೇಸು ದಾಖಲಿಸಿ, ತನಿಖೆಯ ನಾಟಕ ಮಾಡಬಾರದು. ಆಮೇಲೆ ಬಿ ರಿಪೋರ್ಟ್ ಹಾಕಿಸುವ ಕೆಲಸ ಮಾಡುವುದು ಬೇಡ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು. ಸಂತೋಷ್ ಪಾಟೀಲ್ ಕುಟುಂಬಕ್ಕೆ ನ್ಯಾಯ ದೊರಕಿಸಬೇಕು ಎಂದು ಡಿಕೆಶಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
Karnataka Youth Congress workers on Tuesday staged a protest demanding the arrest of minister Eshwarappa in connection with the alleged suicide of contractor Santosh Patil. The protest was held near BJP leader Eshwarappa's house in Shivamogga. All workers were detained by police when they headed for Eshwarappa's residence.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm