ಬ್ರೇಕಿಂಗ್ ನ್ಯೂಸ್
14-04-22 04:14 pm Bengaluru Correspondent ಕರ್ನಾಟಕ
ಬೆಂಗಳೂರು, ಎ.14: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಕಾರಣ ಎಂದು ಆರೋಪಕ್ಕೀಡಾಗಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಸಿಎಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ, ರೇಸ್ ಕೋರ್ಸ್ ರಸ್ತೆಯಲ್ಲಿ ಅಡ್ಡ ಹಾಕಿದ ಪೊಲೀಸರು ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು, ನೂರಾರು ಕಾರ್ಯಕರ್ತರು ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ಕಾಲ್ನಡಿಗೆಯಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾಗೆ ಹೊರಟಿದ್ದರು. ಭಾರಿ ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ರೇಸ್ ಕೋರ್ಸ್ ರಸ್ತೆ ದಾಟುತ್ತಿದ್ದಂತೆ ಬ್ಯಾರಿಕೇಡ್ ಮೂಲಕ ಅಡ್ಡ ಹಾಕಿದ ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದರು.




ರ್ಯಾಲಿಯಲ್ಲಿ ಉದ್ದಕ್ಕೂ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಸರಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುತ್ತಾ ಸಾಗಿದ್ದಾರೆ. ಭ್ರಷ್ಟ ಸರಕಾರ, ಭ್ರಷ್ಟ ಈಶ್ವರಪ್ಪ ಎಂದು ಕಾರ್ಯಕರ್ತರು ಘೋಷಣೆ ಕೂಗುತ್ತಾ ಸಾಗಿದ್ದು ಈಶ್ವರಪ್ಪ ರಾಜಿನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಈ ವೇಳೆ ರ್ಯಾಲಿಯನ್ನು ತಡೆದ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತಳ್ಳಾಟ ನಡೆಯಿತು. ರೇಸ್ ಕೋರ್ಸ್ ರಸ್ತೆ ಮತ್ತು ಕುಮಾರಕೃಪಾ ರಸ್ತೆಯಲ್ಲಿ ಬಿಗಿ ಪೊಲೀಸ್ ಕಾವಲು ಹಾಕಲಾಗಿತ್ತು.



ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್, ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಿ, ಬಂಧಿಸಬೇಕು. ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ತನಿಖೆ ನಡೆಯಬೇಕು. ಏಕೆಂದರೆ, ರಾಜ್ಯ ಸರಕಾರದ ಪೊಲೀಸರೇ ಪ್ರಕರಣವನ್ನು ತನಿಖೆ ನಡೆಸಿದರೆ ಸತ್ಯಾಂಶ ಹೊರಗೆ ಬರುವ ಬಗ್ಗೆ ಸಂಶಯವಿದೆ ಎಂದು ಹೇಳಿದರು.
Congress leaders Randeep Surjewala, DK Shivakumar and Siddaramaiah and other party workers were arrested on Thursday, April 14, for staging a protest, demanding the removal of KS Eshwarappa from the Karnataka government. They were first detained and later placed under arrest on the way to Karnataka CM Basavaraj Bommai’s residence where they planned to stage a massive agitation.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm