ಬ್ರೇಕಿಂಗ್ ನ್ಯೂಸ್
14-04-22 09:15 pm HK Desk news ಕರ್ನಾಟಕ
ತುಮಕೂರು, ಎ.14: ನಾನು ಸಚಿವ, ಶಾಸಕ, ಡಿಸಿಎಂ ಆಗಿದ್ದೇನೆ. ರಾಜ್ಯದಲ್ಲಿ ನಂಬರ್ ಟು ಪೊಸಿಶನ್ ಹೋಗಿದ್ದೇನೆ. ಆದ್ರೂ ನನನ್ನು ದೇವಸ್ಥಾನದೊಳಗೆ ಸೇರಿಸಲ್ಲ. ಹೀಗೆಂದು ಸಮಾಜದಲ್ಲಿ ಬೇರೂರಿರುವ ಜಾತಿ ವ್ಯವಸ್ಥೆಯ ಬಗ್ಗೆ ಬೇಜಾರು ಮಾತಾಡಿದ್ದಾರೆ, ಮಾಜಿ ಡಿಸಿಎಂ ಜಿ.ಪರಮೇಶ್ವರ್.
ಸ್ವಕ್ಷೇತ್ರ ಕೊರಟಗೆರೆಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಜಿ.ಪರಮೇಶ್ವರ್ ಈ ಹೇಳಿಕೆ ನೀಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಸಂದರೂ, ಜಾತಿ ವ್ಯವಸ್ಥೆಯನ್ನು ತೊಲಗಿಸಲು ಪಣ ತೊಟ್ಟು ಅಂಬೇಡ್ಕರ್ ಶ್ರೇಷ್ಠ ಸಂವಿಧಾನ ನೀಡಿದರೂ ನಮ್ಮಲ್ಲಿ ಸ್ಥಿತಿ ಬದಲಾಗಿಲ್ಲ. ನಾನು ದಲಿತ ಎಂಬ ಕಾರಣಕ್ಕೆ ದೇವಾಲಯದ ಒಳಗೆ ಬಿಟ್ಟುಕೊಳ್ಳುವುದಿಲ್ಲ ಎಂದು ಬಹಿರಂಗವಾಗಿಯೇ ಪರಮೇಶ್ವರ್ ಬೇಸರ ಹೊರಗೆ ಹಾಕಿದ್ದಾರೆ.
ನಾನು ಹಲವು ದೇಶಗಳನ್ನು ಸುತ್ತಾಡಿ ಬಂದಿದ್ದೇನೆ, ನಾನು ಶಾಸಕನಾಗಿದ್ದೇನೆ. ಎರಡು ಬಾರಿ ಸಚಿವನಾಗಿದ್ದೇನೆ, ರಾಜ್ಯದ ಅಧಿಕಾರ ಕೇಂದ್ರದಲ್ಲಿ ನಂಬರ್ ಟು ಆಗಿದ್ದೇನೆ. ಆದರೆ ನನಗೆ ದೇವಸ್ಥಾನಕ್ಕೆ ಸೇರಿಸಲ್ಲ. ನಾನು ದೇವಸ್ಥಾನಕ್ಕೆ ಹೋದ್ರೆ ಸ್ವಲ್ಪ ಸ್ವಲ್ಪ ಅಲ್ಲೇ ನಿಂತುಕೊಳ್ಳಿ ಎಂದು ಹೇಳಿ ಮಂಗಳಾರತಿ ತಟ್ಟೆ ತಂದು ಬಿಡ್ತಾರೆ. ನಾನು ಎಲ್ಲಿ ದೇವಾಲಯದೊಳಗೆ ಬಂದು ಬಿಡ್ತೀನೋ ಅಂತ ಹೀಗೆ ಮಾಡ್ತಾರೆ. ಇಂತಹ ಪರಿಸ್ಥಿತಿ ಈಗಲೂ ಸಮಾಜದಲ್ಲಿದೆ. ಅಂಬೇಡ್ಕರ್ ಹೆಸರಲ್ಲಿ ಜಯಂತಿ ಆಚರಣೆ ಮಾಡುತ್ತೇವೆ. ಆದರೆ ಜಾತಿ ವ್ಯವಸ್ಥೆಯ ತಾರತಮ್ಯ ಬದಲಾಗದ ಹೊರತು ಅಂಬೇಡ್ಕರ್ ಹೆಸರಲ್ಲಿ ಕಾರ್ಯಕ್ರಮ ಮಾಡಿ ಪ್ರಯೋಜನ ಇಲ್ಲ ಎಂದು ಕಾರ್ಯಕ್ರಮದ ವೇದಿಕೆ ಭಾಷಣದಲ್ಲಿ ಅಸಮಾಧಾನ ತೋಡಿಕೊಂಡಿದ್ದಾರೆ.
A minister, a legislator, a DCM and gone to the number two position in the state, And it is not included in the temple. Former DCM G.Parameshwar said that the caste system is rooted in the society.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm