ಬ್ರೇಕಿಂಗ್ ನ್ಯೂಸ್
24-09-20 11:51 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 24: 'ಕರ್ನಾಟಕದಲ್ಲಿ ಖಾಸಗಿ ಕ್ಷೇತ್ರದಲ್ಲಿ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಖಾತರಿಪಡಿಸಲು ಆಂಧ್ರಪ್ರದೇಶದ ಮಾದರಿಯಲ್ಲಿ ಜಿಲ್ಲಾಮಟ್ಟದ ಮೇಲುಸ್ತುವಾರಿ ಸಮಿತಿಗಳನ್ನು ಅಸ್ತಿತ್ವಕ್ಕೆ ತರಲಾಗುವುದು' ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ವಯ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಲು ಸಿದ್ಧಪಡಿಸಿರುವ ಮಸೂದೆಯನ್ನು ಸದನದಲ್ಲಿ ಮಂಡಿಸುವಂತೆ ವಿಧಾನ ಪರಿಷತ್ನಲ್ಲಿ ಬುಧವಾರ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಅವರು ನಿಯಮ 330ರಡಿ ಪ್ರಸ್ತಾಪಿಸಿದ ವಿಷಯದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಸಚಿವರು, ಈ ಭರವಸೆ ನೀಡಿದರು.
ಉದ್ಯಮ ಸ್ಥಾಪನೆಗೆ ಕನ್ನಡದ ನೆಲ, ಜಲವನ್ನು ಬಳಸಿಕೊಳ್ಳುವ ಕಂಪನಿಗಳು ಸ್ಥಳೀಯರಿಗೆ ಉದ್ಯೋಗ ನೀಡುವುದಿಲ್ಲ.
ಕೆಳಹಂತದ ಕೆಲವು ಉದ್ಯೋಗಗಳನ್ನು ನೀಡಿ ವಂಚಿಸುತ್ತವೆ. ಸರ್ಕಾರದ ಸೌಲಭ್ಯ ಪಡೆದ ಉದ್ದಿಮೆಗಳಷ್ಟೇ ಅಲ್ಲ, ಸೌಲಭ್ಯ ಪಡೆಯದ ಉದ್ದಿಮೆಗಳೂ ಸ್ಥಳೀಯರಿಗೆ ಉದ್ಯೋಗ ನೀಡುವುದನ್ನು ಕಡ್ಡಾಯಗೊಳಿಸಲಾಗುವುದು. ಇದಕ್ಕಾಗಿ ಆಂಧ್ರಪ್ರದೇಶ ಮಾದರಿ ಅನುಷ್ಠಾನ ಮಾಡಲಾಗುವುದು' ಎಂದರು.
ವಿಷಯ ಪ್ರಸ್ತಾಪಿಸಿದ ಹೊರಟ್ಟಿ, 'ನೆರೆಯ ಆಂಧ್ರ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ ಮೀಸಲಾತಿ ಲಭಿಸಿದೆ. ಪರಿಣಾಮವಾಗಿ ರಾಜ್ಯದಲ್ಲಿ ಪರ ಭಾಷಿಕರ ಸಂಖ್ಯೆ ಹೆಚ್ಚುತ್ತಿದೆ. ಬೆಂಗಳೂರನ್ನು ಪರಭಾಷಿಕ ಶಾಸಕರೇ ಆಳುವ ದಿನಗಳು ಬಂದರೂ ಅಚ್ಚರಿ ಇಲ್ಲ. ಕನ್ನಡಿಗರಿಗೆ ಮೀಸಲಾತಿ ಖಾತರಿಪಡಿಸುವ ಮೂಲಕ ನ್ಯಾಯ ಒದಗಿಸಬೇಕು' ಎಂದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm