ಬ್ರೇಕಿಂಗ್ ನ್ಯೂಸ್
18-04-22 10:30 pm HK Desk news ಕರ್ನಾಟಕ
ಸುಳ್ಯ, ಎ.18 : ಅನಿಯಮಿತ ವಿದ್ಯುತ್ ಕಡಿತ ಆಗುತ್ತಿದ್ದ ಬಗ್ಗೆ ಕಳೆದ ಬಾರಿ ಸಿದ್ದರಾಮಯ್ಯ ಸರಕಾರದಲ್ಲಿ ಇಂಧನ ಸಚಿವರಾಗಿದ್ದ ಡಿಕೆ ಶಿವಕುಮಾರ್ ಅವರಿಗೆ ಫೋನಾಯಿಸಿ ಬೈದಿದ್ದ ಆರೋಪದಲ್ಲಿ ಪ್ರಕರಣ ಎದುರಿಸುತ್ತಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಕೃಷಿಕರೊಬ್ಬರಿಗೆ ನ್ಯಾಯಾಲಯ ಜೈಲು ಶಿಕ್ಷೆ ನೀಡಿದೆ.
ಬೆಳ್ಳಾರೆಯ ಸಾಯಿ ಗಿರಿಧರ್ ರೈ ಶಿಕ್ಷೆಗೊಳಗಾದವರು. 2016 ರ ಫೆ.28ರಂದು ಸಚಿವ ಡಿಕೆಶಿಗೆ ಫೋನ್ ಮಾಡಿ ಬೈದಿದ್ದ ಬಗ್ಗೆ ಸುಳ್ಯದ ಮೆಸ್ಕಾಂ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದರು. ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಸೇರಿ ನಾಲ್ಕು ಆರೋಪಗಳಡಿ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆದು ಹಲವರನ್ನು ಸಾಕ್ಷಿಗಳನ್ನಾಗಿಸಿ ಕೋರ್ಟಿಗೆ ಸಾಕ್ಷ್ಯ ಹೇಳಲು ಕರೆಸಲಾಗಿತ್ತು. ಸಚಿವರಾಗಿದ್ದ , ಹಾಲಿ ಕೆಪಿಸಿಸಿ ಅಧ್ಯಕ್ಷನಾಗಿರುವ ಡಿಕೆಶಿ ಅವರನ್ನೂ ಸಾಕ್ಷ್ಯ ಹೇಳಲು ಬರುವಂತೆ ಸಮನ್ಸ್ ನೀಡಲಾಗಿತ್ತು.
ಮತ್ತೆ ಮತ್ತೆ ಸಮನ್ಸ್ ಕೊಟ್ಟ ಬಳಿಕ 2021ರ ಅಕ್ಟೋಬರ್ 5ರಂದು ಡಿಕೆಶಿ ಸುಳ್ಯದ ನ್ಯಾಯಾಲಯಕ್ಕೆ ಬಂದು ಸಾಕ್ಷಿ ಹೇಳಿ ಹೋಗಿದ್ದರು. ವಿಚಾರಣೆ ಪೂರ್ತಿಗೊಳಿಸಿದ ಸುಳ್ಯದ ಹಿರಿಯ ಸಿವಿಲ್ ಕೋರ್ಟ್ ಇಂದು ಶಿಕ್ಷೆ ಪ್ರಮಾಣ ಘೋಷಣೆ ಮಾಡಿದೆ. ನಾಲ್ಕು ಅಪರಾಧಗಳು ಸಾಬೀತು ಆಗಿದ್ದರಿಂದ ಒಟ್ಟು ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, 5 ಸಾವಿರ ದಂಡ ವಿಧಿಸಲಾಗಿದೆ. ದಂಡ ತೆರಲು ತಪ್ಪಿದಲ್ಲಿ ಒಂದು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು.
Sullia Man from Ballary sentenced to two years jail for conflict with DK Shivakumar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm