ಬ್ರೇಕಿಂಗ್ ನ್ಯೂಸ್
18-04-22 10:30 pm HK Desk news ಕರ್ನಾಟಕ
ಸುಳ್ಯ, ಎ.18 : ಅನಿಯಮಿತ ವಿದ್ಯುತ್ ಕಡಿತ ಆಗುತ್ತಿದ್ದ ಬಗ್ಗೆ ಕಳೆದ ಬಾರಿ ಸಿದ್ದರಾಮಯ್ಯ ಸರಕಾರದಲ್ಲಿ ಇಂಧನ ಸಚಿವರಾಗಿದ್ದ ಡಿಕೆ ಶಿವಕುಮಾರ್ ಅವರಿಗೆ ಫೋನಾಯಿಸಿ ಬೈದಿದ್ದ ಆರೋಪದಲ್ಲಿ ಪ್ರಕರಣ ಎದುರಿಸುತ್ತಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಕೃಷಿಕರೊಬ್ಬರಿಗೆ ನ್ಯಾಯಾಲಯ ಜೈಲು ಶಿಕ್ಷೆ ನೀಡಿದೆ.
ಬೆಳ್ಳಾರೆಯ ಸಾಯಿ ಗಿರಿಧರ್ ರೈ ಶಿಕ್ಷೆಗೊಳಗಾದವರು. 2016 ರ ಫೆ.28ರಂದು ಸಚಿವ ಡಿಕೆಶಿಗೆ ಫೋನ್ ಮಾಡಿ ಬೈದಿದ್ದ ಬಗ್ಗೆ ಸುಳ್ಯದ ಮೆಸ್ಕಾಂ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದರು. ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಸೇರಿ ನಾಲ್ಕು ಆರೋಪಗಳಡಿ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆದು ಹಲವರನ್ನು ಸಾಕ್ಷಿಗಳನ್ನಾಗಿಸಿ ಕೋರ್ಟಿಗೆ ಸಾಕ್ಷ್ಯ ಹೇಳಲು ಕರೆಸಲಾಗಿತ್ತು. ಸಚಿವರಾಗಿದ್ದ , ಹಾಲಿ ಕೆಪಿಸಿಸಿ ಅಧ್ಯಕ್ಷನಾಗಿರುವ ಡಿಕೆಶಿ ಅವರನ್ನೂ ಸಾಕ್ಷ್ಯ ಹೇಳಲು ಬರುವಂತೆ ಸಮನ್ಸ್ ನೀಡಲಾಗಿತ್ತು.
ಮತ್ತೆ ಮತ್ತೆ ಸಮನ್ಸ್ ಕೊಟ್ಟ ಬಳಿಕ 2021ರ ಅಕ್ಟೋಬರ್ 5ರಂದು ಡಿಕೆಶಿ ಸುಳ್ಯದ ನ್ಯಾಯಾಲಯಕ್ಕೆ ಬಂದು ಸಾಕ್ಷಿ ಹೇಳಿ ಹೋಗಿದ್ದರು. ವಿಚಾರಣೆ ಪೂರ್ತಿಗೊಳಿಸಿದ ಸುಳ್ಯದ ಹಿರಿಯ ಸಿವಿಲ್ ಕೋರ್ಟ್ ಇಂದು ಶಿಕ್ಷೆ ಪ್ರಮಾಣ ಘೋಷಣೆ ಮಾಡಿದೆ. ನಾಲ್ಕು ಅಪರಾಧಗಳು ಸಾಬೀತು ಆಗಿದ್ದರಿಂದ ಒಟ್ಟು ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, 5 ಸಾವಿರ ದಂಡ ವಿಧಿಸಲಾಗಿದೆ. ದಂಡ ತೆರಲು ತಪ್ಪಿದಲ್ಲಿ ಒಂದು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು.
Sullia Man from Ballary sentenced to two years jail for conflict with DK Shivakumar.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm