ಬ್ರೇಕಿಂಗ್ ನ್ಯೂಸ್
24-09-20 02:33 pm Headline Karnataka News Network ಕರ್ನಾಟಕ
ಬೆಳಗಾವಿ, ಸೆಪ್ಟಂಬರ್ 23: ಕೊರೊನಾ ಸೋಂಕಿನಿಂದ ಮೃತಪಟ್ಟ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರ ಅಂತ್ಯಕ್ರಿಯೆ ದೆಹಲಿಯಲ್ಲೇ ನಡೆಯಲಿದೆ. ನಿಧನರಾದ ಬಳಿಕ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ದೇಹದಲ್ಲಿ ಸೋಂಕು ಇರುವುದು ದೃಢಪಟ್ಟಿದ್ದರಿಂದ ಶವ ಬಿಟ್ಟುಕೊಡಲು ಏಮ್ಸ್ ವೈದ್ಯರು ನಿರಾಕರಿಸಿದ್ದಾರೆ.
ಲಿಂಗಾಯತ ಸಂಪ್ರದಾಯದ ಪ್ರಕಾರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ದೆಹಲಿಯ ದ್ವಾರಕಾ ಸೆಕ್ಟರ್-24 ರಲ್ಲಿ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ. ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯಲ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಹಲವರು ಏಮ್ಸ್ ಆಸ್ಪತ್ರೆಯಲ್ಲೇ ಅಂತಿಮ ದರ್ಶನ ಮಾಡಿದ್ದಾರೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸುರೇಶ ಅಂಗಡಿ ಹಿರಿಯ ಪುತ್ರಿ ಡಾಕ್ಟರ್ ಶೃತಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಪುತ್ರಿ, ಮೊಮ್ಮಗಳು ಹಾಗೂ ಸಂಪ್ರದಾಯ ಪ್ರಕಾರ ಅಂತ್ಯಕ್ರಿಯೆ ವಿಧಿವಿಧಾನ ನೇರವೇರಿಸಲು ಲಿಂಗಾಯತ ಸ್ವಾಮೀಜಿ ಬಾಳಯ್ಯ ಕೂಡ ದೆಹಲಿಗೆ ತೆರಳಿದ್ದಾರೆ.

ಬೆಳಗಾವಿಯಲ್ಲಿ ಮಡುಗಟ್ಟಿದ ಶೋಕ..!
ಬೆಳಗಾವಿಯಲ್ಲಿ ಅಜಾತ ಶತ್ರು ಎಂದೇ ಕರೆಸಿಕೊಂಡಿದ್ದ ಸುರೇಶ್ ಅಂಗಡಿ ನಿಧನ ಇಡೀ ಜಿಲ್ಲೆಯನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಬಿಜೆಪಿ, ಕಾಂಗ್ರೆಸ್ ಪ್ರಮುಖರು, ಅವರ ಮನೆಗ ತೆರಳಿ ಸಾಂತ್ವನ ಹೇಳುತ್ತಿದ್ದಾರೆ. ದಿಢೀರ್ ಆಗಿ ತಮ್ಮನ್ನಗಲಿದ್ದನ್ನು ಅರಗಿಸಿಕೊಳ್ಳಲು ಆಗದೆ ಕುಟುಂಬಸ್ಥರು ತೀವ್ರ ದುಃಖತಪ್ತರಾಗಿದ್ದಾರೆ. ಅವರ ತಾಯಿ, ಪತ್ನಿ ಹಾಗೂ ಮಗಳು, ಸಂಬಂಧಿಕರೆಲ್ಲ ಕಣ್ಣೀರು ಹಾಕುತ್ತಿದ್ದಾರೆ. ಅವರ ಮನೆಯಲ್ಲಿ ನೀರವ ಮೌನ ಆವರಿಸಿದ್ದು, ಇಡೀ ಕುಟುಂಬ ದುಃಖದಲ್ಲಿ ಮುಳುಗಿದೆ. ಸುರೇಶ್ ಅಂಗಡಿ ತಾಯಿ ಸೋಮವ್ವ ಅಂಗಡಿಯವರು ತೀವ್ರ ದುಃಖತಪ್ತರಾಗಿದ್ದು, ನನ್ನ ಮಗ ಬರ್ತಾನೆ, ಬಾಗಿಲು ತೆಗೀರಿ.. ಅವನಿಗೆ ಎನೂ ಆಗಿಲ್ಲ ಎಂದು ರೋದಿಸುತ್ತಿದ್ದಾರೆ. ಹಲವು ಸಂಬಂಧಿಕರು ಹಾಗೂ ಸ್ನೇಹಿತರು ಸಹ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುತ್ತಿದ್ದಾರೆ. ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಅವರ ಸಹೋದರಿ ಸಹ ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಸಹ ಸುರೇಶ್ ಅಂಗಡಿ ನಿವಾಸದ ಬಳಿ ಸೇರಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುತ್ತಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm