ಬ್ರೇಕಿಂಗ್ ನ್ಯೂಸ್
27-04-22 10:56 am Bengaluru Correspondent ಕರ್ನಾಟಕ
ಬೆಂಗಳೂರು, ಎ.27: ಗೃಹ ಇಲಾಖೆಯಲ್ಲಿ ಮೇಜರ್ ಸರ್ಜರಿಗೆ ಮುಂದಾಗಿರುವ ರಾಜ್ಯ ಸರ್ಕಾರವು ಬೆಂಗಳೂರು ಪೊಲೀಸ್ ಆಯುಕ್ತರ ಹುದ್ದೆ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಚುನಾವಣೆ ಮುಂದಿಟ್ಟುಕೊಂಡು ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಲು ನಿರ್ಧರಿಸಿದೆ.
ಪ್ರಮುಖವಾಗಿ ಬೆಂಗಳೂರು ನಗರ, ಮೈಸೂರು, ಮಂಗಳೂರು ನಗರ ಪೊಲೀಸ್ ಆಯುಕ್ತರ ಅವಧಿ ಒಂದು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಹೊಸ ಆಯುಕ್ತರ ನೇಮಕಕ್ಕೆ ಸರ್ಕಾರ ತೀರ್ಮಾನಿಸಿದೆ. ಈ ನಡುವೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆಗೇರಲು ಹಿರಿಯ ಐಪಿಎಸ್ ಅಧಿಕಾರಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹುದ್ದೆಯಲ್ಲಿ 20 ತಿಂಗಳು ಪೂರೈಸಿದ್ದು ಅವರಿಂದ ತೆರವಾಗುವ ಸ್ಥಾನಕ್ಕಾಗಿ ಅಧಿಕಾರಿಗಳು ಲಾಬಿ ನಡೆಸಿದ್ದಾರೆ. ಕೆಎಸ್ಆರ್ಪಿ ಎಡಿಜಿಪಿ ಅಲೋಕ್ ಕುಮಾರ್ ಮತ್ತು ಗುಪ್ತಚರ ದಳ ಮುಖ್ಯಸ್ಥ ಬಿ.ದಯಾನಂದ್ ಹೆಸರು ಬೆಂಗಳೂರು ಆಯುಕ್ತರ ಸ್ಥಾನಕ್ಕೆ ಮುಂಚೂಣಿಯಲ್ಲಿದೆ. ಅಲ್ಲದೆ, ಆಯಕಟ್ಟಿನ ಹುದ್ದೆ ಪಡೆಯಲು ಐಪಿಎಸ್ ಅಧಿಕಾರಿಗಳು ತಮ್ಮ ಪರಿಚಿತ ರಾಜಕಾರಣಿಗಳ ಮುಖಾಂತರ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಕಮಿಷನರ್ ಆಗಿರುವ ಶಶಿಕುಮಾರ್, ಮೈಸೂರಿಗೆ ವರ್ಗಾವಣೆ ಬಯಸಿದ್ದಾರೆ ಎನ್ನಲಾಗುತ್ತಿದ್ದು ಇದಕ್ಕಾಗಿ ತೆರೆಮರೆಯಲ್ಲಿ ಆಪ್ತರ ಮೂಲಕ ಲಾಬಿ ನಡೆಸಿದ್ದಾರೆ.

ಮಂಗಳೂರು ಮತ್ತು ಮೈಸೂರು ನಗರ ಪೊಲೀಸ್ ಆಯುಕ್ತರು ಒಂದು ವರ್ಷ ಪೂರೈಸಿದ್ದಾರೆ. ಕನಿಷ್ಠ ಒಂದು ವರ್ಷ ಪೂರೈಸಿದ ಕಮಿಷನರ್, ಎಸ್ಪಿ ದರ್ಜೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಅವಕಾಶ ಇದೆ. ಹೀಗಾಗಿ, ಚುನಾವಣೆ ಹತ್ತಿರ ಬರುತ್ತಿರುವುದರಿಂದ ಅಳೆದು ತೂಗಿ ಅಧಿಕಾರಿಗಳ ನೇಮಕಕ್ಕೆ ಸರ್ಕಾರ ಮುಂದಾಗಿದೆ. ಬೆಂಗಳೂರು ನಗರ ಒಳಗೊಂಡಂತೆ ವಿವಿಧ ವಲಯಗಳ ಎಸಿಪಿ, ಡಿಸಿಪಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ)ಗಳ ವರ್ಗಾವಣೆಗೂ ಸರ್ಕಾರ ತಯಾರಿ ನಡೆಸಿದೆ ಎಂದು ತಿಳಿದುಬಂದಿದೆ. ಪೂರ್ವ ವಲಯದಲ್ಲಿ ಐಜಿಪಿ ಹುದ್ದೆಯೂ ಖಾಲಿಯಿದ್ದು ಅದನ್ನು ತುಂಬುವುದಕ್ಕೂ ಸರಕಾರ ಮುಂದಾಗಿದೆ.
Bangalore, Mangaluru and Mysuru Police commissioner to transfer soon as major surgery is plan is all ready by the Home Ministry department.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm