ಬ್ರೇಕಿಂಗ್ ನ್ಯೂಸ್
27-04-22 05:24 pm Bangalore Correspondent ಕರ್ನಾಟಕ
ಬೆಂಗಳೂರು, ಎ.27 : ಸಹಾಯಕ ಪ್ರಾಧ್ಯಾಪಕರ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧಿತ ಆರೋಪಿ ಸೌಮ್ಯ ನೀಡಿದ ಮಾಹಿತಿ ಮೇರೆಗೆ ಧಾರವಾಡ ವಿವಿಯಲ್ಲಿ ಭೂಗೋಳಶಾಸ್ತ್ರದ ಹಿರಿಯ ಪ್ರಾಧ್ಯಾಪಕರಾಗಿರುವ ವ್ಯಕ್ತಿಯನ್ನು ಮಲ್ಲೇಶ್ವರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಧಾರವಾಡ ವಿಶ್ವವಿದ್ಯಾಲಯ ಮೌಲ್ಯಮಾಪನ ವಿಭಾಗದ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ನಾಗರಾಜ್ ಅವರಿಗೆ ಪ್ರಶ್ನೆಪತ್ರಿಕೆ ತಯಾರಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ ನೀಡಿತ್ತು. ಇದರಂತೆ ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಾಗ ಭೂಗೋಳಶಾಸ್ತ್ರದ ಅತಿಥಿ ಉಪನ್ಯಾಸಕಿಯಾಗಿದ್ದ ಸೌಮ್ಯ ಅವರಿಗೆ ಪ್ರಶ್ನೆಗಳನ್ನು ಸಿದ್ಧಪಡಿಸಲು ನಾಗರಾಜ್ ಹೇಳಿದ್ದರು ಎನ್ನಲಾಗಿದೆ. ಇದರಂತೆ 17 ಪ್ರಶ್ನೆಗಳನ್ನ ಸಿದ್ದಪಡಿಸಿ ಸೌಮ್ಯ ನೀಡಿದ್ದರು. ಇದರಲ್ಲಿ 12 ಪ್ರಶ್ನೆಗಳನ್ನು ಉಳಿಸಿಕೊಂಡಿದ್ದರು. ಸದ್ಯ ನಾಗರಾಜ್ ಅವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
ಮೂಲತಃ ಮೈಸೂರಿನ ನಿವಾಸಿಯಾಗಿರುವ ಆರೋಪಿ ಸೌಮ್ಯ ಭೂಗೋಳ ಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ್ದರು. 2013 ರಿಂದ 2015ರ ವರೆಗೆ ಕೆ.ಆರ್. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು.

ನಂತರ ಮಾನಸ ಗಂಗೋತ್ರಿ ಮೈಸೂರು ವಿಶ್ವವಿದ್ಯಾಲಯಕ್ಕೆ ಸೇರ್ಪಡೆಯಾಗಿದ್ದರು. 2019 ರಿಂದ 20ರ ವರೆಗೆ ಭೂಗೋಳ ಶಾಸ್ತ್ರದಲ್ಲಿ ಪಿಹೆಚ್ಡಿ ಅಧ್ಯಯನ ಮಾಡಿದ್ದರು. ನಂತರ ಮಾನಸ ಗಂಗೋತ್ರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಮೈಸೂರಿನಲ್ಲಿ ಪಿಹೆಚ್ಡಿ ಅಧ್ಯಯನ ಮಾಡುತ್ತಿದ್ದ ಸೌಮ್ಯಾಳಿಗೆ ನಾಗರಾಜ್ ಮಾರ್ಗದರ್ಶಕರಾಗಿದ್ದರು. ಹೀಗಾಗಿ ಶಿಷ್ಯೆ ಸೌಮ್ಯಗೆ ಕೆಲವು ಪ್ರಶ್ನೆಗಳನ್ನ ಸಿದ್ಧಪಡಿಸಿ ಕಳಿಸುವಂತೆ ಸೂಚಿಸಿದ್ದರಂತೆ.
ಅದರಂತೆ ಸೌಮ್ಯ 17 ಪ್ರಶ್ನೆಗಳನ್ನ ಸಿದ್ಧಪಡಿಸಿ ಕಳುಹಿಸಿದ್ದರು. ಈ ಪೈಕಿ 12 ಪ್ರಶ್ನೆಗಳನ್ನ ಪ್ರೊಫೆಸರ್ ನಾಗರಾಜ್ ಯಥಾವತ್ತಾಗಿ ಉಳಿಸಿಕೊಂಡಿದ್ದರು. ಗುರುಗಳಿಗೆ ಕಳಿಸಿದ್ದ ಪ್ರಶ್ನೆಗಳನ್ನ ಪರೀಕ್ಷೆಗೆ ಅರ್ಧ ಗಂಟೆ ಮೊದಲು ಸೌಮ್ಯ ಸ್ನೇಹಿತೆಯರಿಗೆ ಕಳುಹಿಸಿದ್ದು ಪೇಚಿಗೆ ಸಿಲುಕಿದ್ದಾರೆ.
The question papers for the recruitment to posts of Assistant Professors were allegedly leaked to selected candidates, shocking the state.Malleshwaram police, that is investigating the case, has taken Nagaraj, of the Geography Department, into their custody and are questioning him on the scandal.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm