ಬ್ರೇಕಿಂಗ್ ನ್ಯೂಸ್
27-04-22 05:24 pm Bangalore Correspondent ಕರ್ನಾಟಕ
ಬೆಂಗಳೂರು, ಎ.27 : ಸಹಾಯಕ ಪ್ರಾಧ್ಯಾಪಕರ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧಿತ ಆರೋಪಿ ಸೌಮ್ಯ ನೀಡಿದ ಮಾಹಿತಿ ಮೇರೆಗೆ ಧಾರವಾಡ ವಿವಿಯಲ್ಲಿ ಭೂಗೋಳಶಾಸ್ತ್ರದ ಹಿರಿಯ ಪ್ರಾಧ್ಯಾಪಕರಾಗಿರುವ ವ್ಯಕ್ತಿಯನ್ನು ಮಲ್ಲೇಶ್ವರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಧಾರವಾಡ ವಿಶ್ವವಿದ್ಯಾಲಯ ಮೌಲ್ಯಮಾಪನ ವಿಭಾಗದ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ನಾಗರಾಜ್ ಅವರಿಗೆ ಪ್ರಶ್ನೆಪತ್ರಿಕೆ ತಯಾರಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ ನೀಡಿತ್ತು. ಇದರಂತೆ ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಾಗ ಭೂಗೋಳಶಾಸ್ತ್ರದ ಅತಿಥಿ ಉಪನ್ಯಾಸಕಿಯಾಗಿದ್ದ ಸೌಮ್ಯ ಅವರಿಗೆ ಪ್ರಶ್ನೆಗಳನ್ನು ಸಿದ್ಧಪಡಿಸಲು ನಾಗರಾಜ್ ಹೇಳಿದ್ದರು ಎನ್ನಲಾಗಿದೆ. ಇದರಂತೆ 17 ಪ್ರಶ್ನೆಗಳನ್ನ ಸಿದ್ದಪಡಿಸಿ ಸೌಮ್ಯ ನೀಡಿದ್ದರು. ಇದರಲ್ಲಿ 12 ಪ್ರಶ್ನೆಗಳನ್ನು ಉಳಿಸಿಕೊಂಡಿದ್ದರು. ಸದ್ಯ ನಾಗರಾಜ್ ಅವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
ಮೂಲತಃ ಮೈಸೂರಿನ ನಿವಾಸಿಯಾಗಿರುವ ಆರೋಪಿ ಸೌಮ್ಯ ಭೂಗೋಳ ಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ್ದರು. 2013 ರಿಂದ 2015ರ ವರೆಗೆ ಕೆ.ಆರ್. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು.

ನಂತರ ಮಾನಸ ಗಂಗೋತ್ರಿ ಮೈಸೂರು ವಿಶ್ವವಿದ್ಯಾಲಯಕ್ಕೆ ಸೇರ್ಪಡೆಯಾಗಿದ್ದರು. 2019 ರಿಂದ 20ರ ವರೆಗೆ ಭೂಗೋಳ ಶಾಸ್ತ್ರದಲ್ಲಿ ಪಿಹೆಚ್ಡಿ ಅಧ್ಯಯನ ಮಾಡಿದ್ದರು. ನಂತರ ಮಾನಸ ಗಂಗೋತ್ರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಮೈಸೂರಿನಲ್ಲಿ ಪಿಹೆಚ್ಡಿ ಅಧ್ಯಯನ ಮಾಡುತ್ತಿದ್ದ ಸೌಮ್ಯಾಳಿಗೆ ನಾಗರಾಜ್ ಮಾರ್ಗದರ್ಶಕರಾಗಿದ್ದರು. ಹೀಗಾಗಿ ಶಿಷ್ಯೆ ಸೌಮ್ಯಗೆ ಕೆಲವು ಪ್ರಶ್ನೆಗಳನ್ನ ಸಿದ್ಧಪಡಿಸಿ ಕಳಿಸುವಂತೆ ಸೂಚಿಸಿದ್ದರಂತೆ.
ಅದರಂತೆ ಸೌಮ್ಯ 17 ಪ್ರಶ್ನೆಗಳನ್ನ ಸಿದ್ಧಪಡಿಸಿ ಕಳುಹಿಸಿದ್ದರು. ಈ ಪೈಕಿ 12 ಪ್ರಶ್ನೆಗಳನ್ನ ಪ್ರೊಫೆಸರ್ ನಾಗರಾಜ್ ಯಥಾವತ್ತಾಗಿ ಉಳಿಸಿಕೊಂಡಿದ್ದರು. ಗುರುಗಳಿಗೆ ಕಳಿಸಿದ್ದ ಪ್ರಶ್ನೆಗಳನ್ನ ಪರೀಕ್ಷೆಗೆ ಅರ್ಧ ಗಂಟೆ ಮೊದಲು ಸೌಮ್ಯ ಸ್ನೇಹಿತೆಯರಿಗೆ ಕಳುಹಿಸಿದ್ದು ಪೇಚಿಗೆ ಸಿಲುಕಿದ್ದಾರೆ.
The question papers for the recruitment to posts of Assistant Professors were allegedly leaked to selected candidates, shocking the state.Malleshwaram police, that is investigating the case, has taken Nagaraj, of the Geography Department, into their custody and are questioning him on the scandal.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm