ಬ್ರೇಕಿಂಗ್ ನ್ಯೂಸ್
28-04-22 03:17 pm HK Desk News ಕರ್ನಾಟಕ
ದೊಡ್ಡಬಳ್ಳಾಪುರ, ಎ.28 : ತಾಲೂಕಿನ ನಾಗದೇನಹಳ್ಳಿಯ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಉಗಾಂಡ ಮೂಲದ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಸಾವನಪ್ಪಿದ ಘಟನೆ ನಡೆದಿದೆ. ಇದರಿಂದ ಉದ್ರಿಕ್ತರಾದ ಹಾಸ್ಟೆಲ್ ವಿದ್ಯಾರ್ಥಿಗಳು ಕಾಲೇಜಿಗೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃತ ಯುವತಿಯನ್ನು ಉಗಾಂಡ ದೇಶದ ಮೂಲದ ಆಸಿನಾ ಉವಾಸೆ (24) ಎಂದು ಗುರುತಿಸಲಾಗಿದ್ದು, ಬಿಬಿಎ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಬುಧವಾರ ರಾತ್ರಿ ಒಣಗಿಸಲು ಹಾಕಿದ್ದ ಬಟ್ಟೆಯನ್ನು ತರಲು ಆರನೇ ಮಹಡಿಯನ್ನು ಹತ್ತಿದ್ದಾಗ, ಆಕಸ್ಮಿಕವಾಗಿ ಬಿದ್ದು ಸಾವನಪ್ಪಿದ್ದಾರೆ ಎನ್ನಲಾಗಿದೆ.

ಘಟನೆಗೆ ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯ ಧೋರಣೆಯೇ ಕಾರಣವೆಂದು ಕೆರಳಿದ ವಿದ್ಯಾರ್ಥಿಗಳು ದಾಂಧಲೆ ಎಬ್ಬಿಸಿದ್ದು, ಕಲ್ಲು ತೂರಾಟ ನಡೆಸಿ ಕಿಟಕಿ ಗಾಜುಗಳನ್ನು ಒಡೆದಿದ್ದಾರೆ. ಡಿವೈಎಸ್ಪಿ ನಾಗರಾಜ್, ಇನ್ಸ್ಪೆಕ್ಟರ್ ಸತೀಶ್ ನೇತೃತ್ವದಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಇದೇ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದು ವಿಷಯ ಪೊಲೀಸ್ ಠಾಣೆ ಮೇಟ್ಟಿಲೇರಿತ್ತು. ಈಗ ಮತ್ತೆ ವಿದ್ಯಾರ್ಥಿನಿ ಸಾವಿನಿಂದ ಮತ್ತೆ ಸುದ್ದಿಯಾಗಿದೆ.
African student jumps from 6th floor of college hostel in Dhodballapura in Bangalore, dies on spot.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm