ಬ್ರೇಕಿಂಗ್ ನ್ಯೂಸ್
01-05-22 08:34 pm HK Desk News ಕರ್ನಾಟಕ
ಪುತ್ತೂರು, ಮೇ 1: ಕಾಶ್ಮೀರ್ ಫೈಲ್ಸ್ ಚಿತ್ರವನ್ನು ನೋಡಿ ಮನಕರಗಿದ ಪುತ್ತೂರಿನ ಶಿಕ್ಷಣ ಸಂಸ್ಥೆಯೊಂದರ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜಿ, ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣದ ಆಫರ್ ನೀಡಿದ್ದಾರೆ.
ಕಾಶ್ಮೀರಿ ಪಂಡಿತರು ತಮ್ಮ ಮೂಲ ಊರನ್ನು ಬಿಟ್ಟು ದೇಶಾದ್ಯಂತ ನೆಲೆ ಕಂಡುಕೊಂಡಿದ್ದಾರೆ. ಅವರನ್ನು ಪೈಶಾಚಿಕವಾಗಿ ಹಿಂಸಿಸಿ ಊರು ಬಿಡುವಂತೆ ಮಾಡಿದ ಚಿತ್ರಣವನ್ನು ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ ಕಟ್ಟಿಕೊಡಲಾಗಿತ್ತು. ಚಿತ್ರವನ್ನು ವೀಕ್ಷಿಸಿದ ಬಳಿಕ ಕಾಶ್ಮೀರ ಮತ್ತು ಜಮ್ಮುವಿಗೆ ತೆರಳಿ, ಅಲ್ಲಿನ ಚಿತ್ರಣ ನೋಡಿ ಬಂದಿದ್ದ ಸುಬ್ರಹ್ಮಣ್ಯ ನಟ್ಟೋಜಿಯವರು ತಮ್ಮ ಅಂಬಿಕಾ ವಿದ್ಯಾಲಯದಲ್ಲಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣದ ಆಫರ್ ಪ್ರಕಟಿಸಿದ್ದಾರೆ.
ಸದ್ಯಕ್ಕೆ ಆರನೇ ತರಗತಿಯಿಂದ ಪದವಿ ಹಂತದ ವರೆಗೆ ಉಚಿತ ಶಿಕ್ಷಣ ನೀಡುವ ಯೋಜನೆ ಪ್ರಕಟಿಸಿದ್ದಾರೆ. ಅಲ್ಲದೆ, ತಮ್ಮ ವಿದ್ಯಾಲಯದಲ್ಲಿ ಅಡ್ಮಿಶನ್ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಉಚಿತ ಹಾಸ್ಟೆಲ್ ಸೌಲಭ್ಯವನ್ನೂ ನೀಡುವುದಾಗಿ ಹೇಳಿದ್ದಾರೆ. ಈಗಾಗಲೇ ಉಚಿತ ಯೋಜನೆಯಡಿ ನಾಲ್ಕು ಮಂದಿ ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದಾರೆ. ಅಂಬಿಕಾ ವಿದ್ಯಾಲಯದಲ್ಲಿ ಒಬ್ಬ ವಿದ್ಯಾರ್ಥಿಗೆ ವರ್ಷಕ್ಕೆ 80 ಸಾವಿರ ವೆಚ್ಚ ತಗಲುತ್ತದೆ. ಇತರ ವೆಚ್ಚ 50 ಸಾವಿರ ಬೇಕಾಗುತ್ತದೆ. ಕಾಶ್ಮೀರಿ ಪಂಡಿತರ ಮಕ್ಕಳಿಗೆ ಎಲ್ಲವನ್ನೂ ಉಚಿತವಾಗಿ ನೀಡಲಾಗುತ್ತದೆ ಎಂದು ಸುಬ್ರಹ್ಮಣ್ಯ ನಟ್ಟೋಜಿ ತಿಳಿಸಿದ್ದಾರೆ.
Kashmir Files movie effect, free education to Kashmir pundits children at Puttur in Ambike college.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm