ಬ್ರೇಕಿಂಗ್ ನ್ಯೂಸ್
02-05-22 03:09 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 2 : ಪಿಎಸ್ಐ ಹುದ್ದೆ ಅಕ್ರಮದಲ್ಲಿ ಪ್ರಭಾವಿ ಸಚಿವರೊಬ್ಬರ ಹೆಸರು ಕೇಳಿಬಂದಿದೆ. ಸಚಿವರ ತಮ್ಮನೇ ಅಭ್ಯರ್ಥಿಯೊಬ್ಬನಿಂದ 80 ಲಕ್ಷ ರೂ. ಹಣ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಐಡಿ ತನಿಖೆಯ ವೇಳೆ ಅಭ್ಯರ್ಥಿಯೇ ಈ ಬಗ್ಗೆ ಮಾಹಿತಿ ನೀಡಿದ್ದಾನೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್, ಅಕ್ರಮದಲ್ಲಿ ಮುಖ್ಯಮಂತ್ರಿ ರೇಸ್ ನಲ್ಲಿರುವ ಸಚಿವರೊಬ್ಬರ ಹೆಸರು ಕೇಳಿಬಂದಿದೆ ಎಂದು ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರ ಹೆಸರು ಕೇಳಿಬಂದಿದೆ. ಆ ಮಂತ್ರಿ ಅಥವಾ ಅವರ ತಮ್ಮ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ನಾನು ಹೇಳಲ್ಲ. ಅವರ ಸಂಬಂಧಿಕರು ಭಾಗಿಯಾಗಿದ್ದಾರೆ. ನನಗೆ ಬಂದಿರುವ ಮಾಹಿತಿ ಪ್ರಕಾರ ಆ ಸಚಿವರು ಸಿಎಂ ರೇಸ್ ನಲ್ಲಿದ್ದಾರೆ. ಅವರು ಸಿಎಂ ರೇಸ್ ನಲ್ಲಿರುವುದರಿಂದ ಅವರ ಹೆಸರನ್ನು ಬಹಿರಂಗವಾಗಿ ಹೇಳದಂತೆ ಕೆಲವರು ನನ್ನ ಬಳಿ ಹೇಳಿದ್ದಾರೆ. ಆದರೆ ಆ ಸಚಿವರು ಸಿಐಡಿ ತನಿಖೆಗೆ ಮುಂದಾದಾಗ ಸ್ವತಃ ಕರೆ ಮಾಡಿ ತನಿಖೆ ನಡೆಸದಂತೆ ಅಧಿಕಾರಿಗಳಿಗೆ ತಡೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಬದ್ಧತೆ ಇದ್ದರೆ ಪ್ರಕರಣದ ಸಂಪೂರ್ಣ ತನಿಖೆಗೆ ಆದೇಶ ನೀಡಲಿ ಎಂದು ಆಗ್ರಹಿಸಿದರು.
ಇದು ಸಿಎಂ ಬಸವರಾಜ್ ಬೊಮ್ಮಾಯಿ ಕಾಲದಲ್ಲಾದ ಅಕ್ರಮವಲ್ಲ. ಅಥವಾ ಸಿಎಂ ಬೊಮ್ಮಾಯಿ ಅವರು ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲ್ಲ. ಪ್ರಕರಣದಲ್ಲಿ ಭಾಗಿಯಾದ ಅಭ್ಯರ್ಥಿಗಳ ಪೋಸ್ಟಿಂಗ್ ಕೂಡ ಆಗಿದೆ. ಮಾಹಿತಿ ಪ್ರಕಾರ ಮಾಗಡಿಯ ಮೂವರು ಅಭ್ಯರ್ಥಿಗಳು ಇದ್ದಾರೆ. ಪೋಸ್ಟಿಂಗ್ ಆದ ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆಯೇ ? ಯಾಕೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ರಾಮನಗರದ ಉಸ್ತುವಾರಿ ಸಚಿವರು ನಮಗೆ ಗಂಡಸ್ತನದ ಪ್ರಶ್ನೆ ಮಾಡಿದ್ದರು. ಸಿಎಂ ಬೊಮ್ಮಾಯಿ ಎದುರಲ್ಲೇ ಇಂತಹ ಮಾತುಗಳನ್ನು ಆಡಿದ್ದರು. ನಾವ್ಯಾರು ಗಂಡಸರಲ್ಲ, ಆ ಸಚಿವರೊಬ್ಬರೇ ಗಂಡಸರು. ನಾನು, ನನ್ನ ತಮ್ಮ, ಅನಿತಾ ಕುಮಾರಸ್ವಾಮಿಯವರು ರಾಮನಗರದಲ್ಲಿ ಅವರ ಗಂಡಸ್ತನ ನೋಡಿ ಗಡ ಗಡ ನಡುಗುತ್ತಿದ್ದೇವೆ. ತಾಕತ್ತಿರುವ ಸಚಿವರು ಪಿಎಸ್ಐ ಅಕ್ರಮ ತನಿಖೆ ವಿಚಾರದಲ್ಲಿ ತಾಕತ್ತು ತೋರಿಸಲಿ ಎಂದು ಸಚಿವ ಅಶ್ವತ್ಥನಾರಾಯಣ ಹೆಸರು ಹೇಳದೆಯೇ ಡಿಕೆಶಿ ಸವಾಲು ಹಾಕಿದ್ದಾರೆ.
Karnataka PSI Exam scam, Minister Ashwath Narayan name has been revealed during the enquiry. Minister dr ashwath narayan rejects to talk about allegations of ugrappa
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm