ಬ್ರೇಕಿಂಗ್ ನ್ಯೂಸ್
05-05-22 01:45 pm HK Desk News ಕರ್ನಾಟಕ
ಕಲಬುರಗಿ, ಮೇ 5: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ್ದಲ್ಲದೆ, ಅಕ್ರಮಕ್ಕೆ ಸಹಕಾರ ನೀಡಿದ್ದಾರೆ ಎನ್ನಲಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಚಾಟಿ ಬೀಸಲಾಗಿದೆ. ನೇಮಕಾತಿ ಅಕ್ರಮದಲ್ಲಿ ಪೊಲೀಸ್ ಅಧಿಕಾರಿಗಳ ಶಾಮೀಲಾತಿ ಇಲ್ಲದೆ ಹಗರಣ ನಡೆಯಲು ಸಾಧ್ಯವಿಲ್ಲವೆಂದೇ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಆ ಭಾಗದಲ್ಲಿ ಉಸ್ತುವಾರಿ ಆಗಿದ್ದ ಪೊಲೀಸ್ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದು ಪರೀಕ್ಷಾ ವಿಭಾಗದ ಇನ್ ಚಾರ್ಜ್ ಆಗಿದ್ದ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಾರೆ.
ಕಲಬುರಗಿಯಲ್ಲಿ ಪರೀಕ್ಷಾ ನೇಮಕಾತಿ ವಿಭಾಗದ ಉಸ್ತುವಾರಿ ಹೊಂದಿದ್ದ ಡಿವೈಎಸ್ಪಿ ಆರ್.ಆರ್.ಹೊಸಮನಿ ಮತ್ತು ಇನ್ ಸ್ಪೆಕ್ಟರ್ ದಿಲೀಪ್ ಸಾಗರ್ ಅವರನ್ನು ಅಮಾನತು ಮಾಡಲಾಗಿದೆ. ಹೊಸಮನಿ ಫಿಂಗರ್ ಪ್ರಿಂಟ್ ವಿಭಾಗದಲ್ಲಿ ಡಿವೈಎಸ್ಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ದಿಲೀಪ್ ಸಾಗರ್, ಕಲಬುರ್ಗಿ ಮಹಿಳಾ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದರು. ದೊಡ್ಡ ಮಟ್ಟದ ಅಕ್ರಮ ಆಗಿರುವ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದಲ್ಲಿ ದಿಲೀಪ್ ಸಾಗರ್ ಉಸ್ತುವಾರಿಯಾಗಿದ್ದರು.


ಇದೇ ವೇಳೆ, ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಹಕರಿಸಿದ್ದ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದ ಶಾಸಕ ಎಂ.ವೈ.ಪಾಟೀಲ್ ಅವರ ಗನ್ ಮ್ಯಾನ್, ಪೊಲೀಸ್ ಪೇದೆ ಹಯ್ಯಾಳಿ ದೇಸಾಯಿಯನ್ನೂ ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಕಳೆದ ಒಂದು ವಾರದ ಹಿಂದೆಯೇ ಸಿಐಡಿಯಿಂದ ಬಂಧಿಸಲ್ಪಟ್ಟಿದ್ದ ಹಯ್ಯಾಳಿ ದೇಸಾಯಿಯನ್ನು ಅಧಿಕಾರಿಗಳು ಡ್ರಿಲ್ ಗೆ ಒಳಪಡಿಸಿದ್ದಾರೆ. ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಮತ್ತು ಮಂಜುನಾಥ್ ಮೇಳಕುಂದಿ ಜೊತೆಗಿನ ಸಂಪರ್ಕ ಮತ್ತು ಹಣದ ವಹಿವಾಟು ನಡೆಸಿರುವ ಖಚಿತ ಸಾಕ್ಷ್ಯ ಸಿಕ್ಕ ಬಳಿಕ ಹಯ್ಯಾಳಿ ದೇಸಾಯಿಯನ್ನು ಪೊಲೀಸ್ ಪೇದೆ ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ.

ಇದೇ ಸಂದರ್ಭದಲ್ಲಿ ಅಕ್ರಮ ಪ್ರಕರಣದ ಕಿಂಗ್ ಪಿನ್ ಎನ್ನಲಾಗಿರುವ ಕಾಂಗ್ರೆಸ್ ಮುಖಂಡ ಆರ್.ಡಿ.ಪಾಟೀಲ್ ಜೊತೆ ನಿಕಟ ನಂಟು ಹೊಂದಿದ್ದ ಆರೋಪದಲ್ಲಿ ಲಿಂಗಸುಗೂರು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿಯನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಸಿಐಡಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಸಾಲಿಯನ್ನು ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ವಿಚಾರಣೆಗೆ ಒಳಪಡಿಸಿದ್ದು ಆರೋಪಿಗಳ ಜೊತೆ ನಂಟು ಸಾಬೀತಾದಲ್ಲಿ ಅಮಾನತು ಶಿಕ್ಷೆ ನೀಡುವ ಸಾಧ್ಯತೆಯಿದೆ. ಈ ಹಿಂದೆ ಅಳಂದ ವಿಭಾಗದಲ್ಲಿ ಡಿವೈಎಸ್ಪಿ ಆಗಿದ್ದ ಮಲ್ಲಿಕಾರ್ಜುನ ಸಾಲಿ, ಕಳೆದ ಎಪ್ರಿಲ್ 30ರಂದು ಲಿಂಗಸುಗೂರು ಡಿವೈಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ್ದರು.
Illegal PSI appointment, unlawful actions to prevent suspension of officers.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm