ಬ್ರೇಕಿಂಗ್ ನ್ಯೂಸ್
05-05-22 07:40 pm HK Desk News ಕರ್ನಾಟಕ
ಕಲಬುರಗಿ, ಮೇ 5: ಪಿಎಸ್ಐ ನೇಮಕಾತಿ ಪ್ರಕರಣದ ತನಿಖೆ ಚುರುಕಾಗುತ್ತಿದ್ದಂತೆ ಅಕ್ರಮದ ಲೇಪ ಪೊಲೀಸ್ ಇಲಾಖೆಗೂ ಮೆತ್ತಿಕೊಂಡಿದೆ. ಪ್ರಕರಣದ ಬೆನ್ನತ್ತಿರುವ ಸಿಐಡಿ ಅಧಿಕಾರಿಗಳು ಪೊಲೀಸರ ಮೇಲೆ ಚಾಟಿ ಬೀಸಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಒಬ್ಬರು ಡಿವೈಎಸ್ಪಿ ಸೇರಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಸಿಐಡಿ ತಂಡ ಬಂಧಿಸಿದೆ.
ಅಕ್ರಮದ ಕಿಂಗ್ ಪಿನ್ ಎನ್ನಲಾಗಿರುವ ಆರ್.ಡಿ. ಪಾಟೀಲ ಜೊತೆಗೆ ಹತ್ತಿರದ ಲಿಂಕ್ ಹೊಂದಿದ್ದ ಲಿಂಗಸುಗೂರು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಮತ್ತು ಕಲಬುರಗಿ ನಗರ ಸಿಪಿಐ ಆನಂದ ಮೇತ್ರೆ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆಯಿಂದ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಗಳು ಇಂದು ಇಬ್ಬರನ್ನು ಬಂಧಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೆ, ಕಲಬುರಗಿ ಜಿಲ್ಲಾ ಮೂರನೇ ಜೆಎಂಎಫ್ ಕೋರ್ಟ್ ಮುಂದೆ ಇಬ್ಬರನ್ನೂ ಹಾಜರುಪಡಿಸಿದ್ದು ಎಂಟು ದಿನ ಸಿಐಡಿ ಕಸ್ಟಡಿಗೆ ಪಡೆದಿದ್ದಾರೆ.

ಆರೋಪಿಗಳ ಬಂಧನ ಒಂದೆಡೆಯಾದರೆ, ಇನ್ನೊಂದೆಡೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕರ್ತವ್ಯ ಲೋಪ ಆರೋಪದಲ್ಲಿ ಅಮಾನತು ಮಾಡಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಉಸ್ತುವಾರಿ ಹೊಂದಿದ್ದ ಫಿಂಗರ್ ಪ್ರಿಂಟ್ ವಿಭಾಗದ ಡಿವೈಎಸ್ಪಿ ಆರ್.ಆರ್. ಹೊಸಮನಿ ಹಾಗೂ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದ ಉಸ್ತುವಾರಿ ಹೊಂದಿದ್ದ ಕಲಬುರಗಿ ಮಹಿಳಾ ಠಾಣೆ ಇನ್ ಸ್ಪೆಕ್ಟರ್ ದಿಲೀಪ್ ಸಾಗರ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಇದೇ ವೇಳೆ ನಾಲ್ಕು ದಿನಗಳ ಹಿಂದಷ್ಟೇ ರಿಟೈರ್ ಆಗಿದ್ದ ಡಿವೈಎಸ್ಪಿ ಒಬ್ಬರನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಖಚಿತ ಸಾಕ್ಷ್ಯ ಸಿಕ್ಕಲ್ಲಿ ಆ ವ್ಯಕ್ತಿಯನ್ನೂ ಬಂಧಿಸುವ ಸಾಧ್ಯತೆಯಿದೆ.
Two including DYSP suspended in PSI exam scam in Kalaburgi.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm