ಬ್ರೇಕಿಂಗ್ ನ್ಯೂಸ್
05-05-22 07:40 pm HK Desk News ಕರ್ನಾಟಕ
ಕಲಬುರಗಿ, ಮೇ 5: ಪಿಎಸ್ಐ ನೇಮಕಾತಿ ಪ್ರಕರಣದ ತನಿಖೆ ಚುರುಕಾಗುತ್ತಿದ್ದಂತೆ ಅಕ್ರಮದ ಲೇಪ ಪೊಲೀಸ್ ಇಲಾಖೆಗೂ ಮೆತ್ತಿಕೊಂಡಿದೆ. ಪ್ರಕರಣದ ಬೆನ್ನತ್ತಿರುವ ಸಿಐಡಿ ಅಧಿಕಾರಿಗಳು ಪೊಲೀಸರ ಮೇಲೆ ಚಾಟಿ ಬೀಸಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಒಬ್ಬರು ಡಿವೈಎಸ್ಪಿ ಸೇರಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಸಿಐಡಿ ತಂಡ ಬಂಧಿಸಿದೆ.
ಅಕ್ರಮದ ಕಿಂಗ್ ಪಿನ್ ಎನ್ನಲಾಗಿರುವ ಆರ್.ಡಿ. ಪಾಟೀಲ ಜೊತೆಗೆ ಹತ್ತಿರದ ಲಿಂಕ್ ಹೊಂದಿದ್ದ ಲಿಂಗಸುಗೂರು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಮತ್ತು ಕಲಬುರಗಿ ನಗರ ಸಿಪಿಐ ಆನಂದ ಮೇತ್ರೆ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆಯಿಂದ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಗಳು ಇಂದು ಇಬ್ಬರನ್ನು ಬಂಧಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೆ, ಕಲಬುರಗಿ ಜಿಲ್ಲಾ ಮೂರನೇ ಜೆಎಂಎಫ್ ಕೋರ್ಟ್ ಮುಂದೆ ಇಬ್ಬರನ್ನೂ ಹಾಜರುಪಡಿಸಿದ್ದು ಎಂಟು ದಿನ ಸಿಐಡಿ ಕಸ್ಟಡಿಗೆ ಪಡೆದಿದ್ದಾರೆ.

ಆರೋಪಿಗಳ ಬಂಧನ ಒಂದೆಡೆಯಾದರೆ, ಇನ್ನೊಂದೆಡೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕರ್ತವ್ಯ ಲೋಪ ಆರೋಪದಲ್ಲಿ ಅಮಾನತು ಮಾಡಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಉಸ್ತುವಾರಿ ಹೊಂದಿದ್ದ ಫಿಂಗರ್ ಪ್ರಿಂಟ್ ವಿಭಾಗದ ಡಿವೈಎಸ್ಪಿ ಆರ್.ಆರ್. ಹೊಸಮನಿ ಹಾಗೂ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದ ಉಸ್ತುವಾರಿ ಹೊಂದಿದ್ದ ಕಲಬುರಗಿ ಮಹಿಳಾ ಠಾಣೆ ಇನ್ ಸ್ಪೆಕ್ಟರ್ ದಿಲೀಪ್ ಸಾಗರ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಇದೇ ವೇಳೆ ನಾಲ್ಕು ದಿನಗಳ ಹಿಂದಷ್ಟೇ ರಿಟೈರ್ ಆಗಿದ್ದ ಡಿವೈಎಸ್ಪಿ ಒಬ್ಬರನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಖಚಿತ ಸಾಕ್ಷ್ಯ ಸಿಕ್ಕಲ್ಲಿ ಆ ವ್ಯಕ್ತಿಯನ್ನೂ ಬಂಧಿಸುವ ಸಾಧ್ಯತೆಯಿದೆ.
Two including DYSP suspended in PSI exam scam in Kalaburgi.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm