ಬ್ರೇಕಿಂಗ್ ನ್ಯೂಸ್
06-05-22 08:34 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 7 : ಸಿಎಂ ಸ್ಥಾನಕ್ಕಾಗಿ ಎರಡೂವರೆ ಸಾವಿರ ಕೋಟಿ ಕೇಳಿದ್ದಾರೆ ಎನ್ನುವ ವಿಚಾರ ಇಡೀ ಕರ್ನಾಟಕ ರಾಜ್ಯ ತಲೆ ತಗ್ಗಿಸುವಂಥದ್ದು. ಮಾತ್ರವಲ್ಲ, ಸಂವಿಧಾನ, ಪ್ರಜಾಪ್ರಭುತ್ವ ಗಾಳಿಗೆ ತೂರಿ ಬಿಜೆಪಿಯವರು ಹಣದ ಮೇಲೆ ರಾಜಕಾರಣ ಮಾಡ್ತಿದಾರೆ ಎನ್ನೋದಕ್ಕೆ ಸ್ಪಷ್ಟ ನಿದರ್ಶನ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಶಾಸಕ ಬಸವನಗೌಡ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಹರಿಪ್ರಸಾದ್ ಅವರು, ಸಿಎಂ ಮಾಡಲು ಕೇಂದ್ರದ ನಾಯಕರು 2500 ಕೋಟಿ ಕೊಡಿ ಎಂದಿದ್ದನ್ನು ಯತ್ನಾಳ್ ಹೇಳಿದ್ದಾರೆ. ಈಗ ಯತ್ನಾಳ್ ಅವರೇ ಅಷ್ಟು ಹಣವನ್ನು ಕೇಳಿದ ವ್ಯಕ್ತಿ ಯಾರೆಂದು ಸ್ಪಷ್ಟಪಡಿಸಬೇಕು. ಈ ಮಾತಿನ ಹಿನ್ನೆಲೆ ಏನೆಂದರೆ, ಈ ಹಿಂದೆ ಅಮಿತ್ ಶಾ ಚುನಾವಣೆಗಳು ನಮಗೆ ವ್ಯವಹಾರ ಇದ್ದಂತೆ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಸಾಕ್ಷಿ ಎನ್ನುವಂತೆ ಯತ್ನಾಳ್ ಅವರಿಗೆ ಎರಡುವರೆ ಸಾವಿರ ಕೋಟಿ ಹಣ ಕೇಂದ್ರದ ನಾಯಕರು ಕೇಳಿರಬೇಕು. ಈ ವಿಷಯದಲ್ಲಿ ಯತ್ನಾಳ್ ಜವಾಬ್ದಾರಿಯಿಂದ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು.

ಧರ್ಮದ ಮೇಲೆ, ಹಣದ ಮೇಲೆ ರಾಜಕೀಯ ನಡೆಸುವುದು ಬಿಜೆಪಿಯ ಚುನಾವಣಾ ತಂತ್ರವಾಗಿದ್ದು, ಹಣ ಕೇಳಿದ್ದು ಯಾರು ಎಂದು ಕೂಡಲೇ ಯತ್ನಾಳ್ ಸ್ಪಷ್ಟಪಡಿಸಬೇಕು. ಅಮಿತ್ ಶಾ ಕೇಳಿದ್ದಾ? ಮೋಹನ್ ಭಾಗವತ್ ಕೇಳಿದ್ದಾ? ನಡ್ಡಾ ಕೇಳಿದ್ದಾ? ಇಲ್ಲ ಮೋದಿ ಅವ್ರು ಕೇಳಿದ್ದಾ? ಎಂದು ಬಿಜೆಪಿ ಕೇಂದ್ರದ ನಾಯಕರ ಮೇಲೆ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ನಡೆಸಿದರು.

ಈ ವಿಚಾರವನ್ನು ರಾಜ್ಯಪಾಲರು ಗಂಭೀರವಾಗಿ ಪರಿಗಣಿಸಿ, ಯತ್ನಾಳ್ ಹೇಳಿಕೆ ಕುರಿತು ತನಿಖೆಗೆ ಆದೇಶಿಸಬೇಕು ಎಂದವರು ಒತ್ತಾಯಿಸಿದರು.
BJP leader Basanagouda Patil Yatnal on Friday has flared up a major political controversy in Karnataka, alleging that he was asked him to pay a Rs 2,500 crore bribe to become Chief Minister.While addressing a rally of Panchamasali community in Ramdurg of Belagavi district on Friday, the BJP MLA said, “A few people from Delhi, who said that they were close to Congress President and BJP President asked me to pay Rs 2,500 crore to become Chief Minister.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm