ಬ್ರೇಕಿಂಗ್ ನ್ಯೂಸ್
09-05-22 07:38 pm Bengalore Correspondnt ಕರ್ನಾಟಕ
ಬೆಂಗಳೂರು, ಮೇ 9: ಆಜಾನ್ ಹೆಸರಲ್ಲಿ ಸಮಾಜದಲ್ಲಿ ವಿಷ ಬೀಜ ಬಿತ್ತುವವರು ಭಯೋತ್ಪಾದಕರು. ಎರಡು ಧರ್ಮಗಳ ನಡುವೆ ವಿಷ ಬಿತ್ತಿ ಸಮಾಜದಲ್ಲಿ ದ್ವೇಷ ಹರಡುವ ಮಂದಿಯನ್ನು ದೇಶದ್ರೋಹ ಕಾಯ್ದೆಯಡಿ ಬಂಧಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಸಮಾಜದಲ್ಲಿ ದ್ವೇಷ ಬಿತ್ತುವುದನ್ನು ಬಂಧಿಸುವ ಬದಲು ಬಿಜೆಪಿ ಸರಕಾರ ಸಮರ್ಥನೆ ಮಾಡುತ್ತಿದೆ. ಸರಕಾರದ ವೈಫಲ್ಯ ಮುಚ್ಚಿ ಹಾಕಲು ಇಂತಹ ಸಮಾಜ ವಿರೋಧಿ ಕೃತ್ಯಗಳನ್ನು ಬಿಜೆಪಿ ಬೆಂಬಲಿಸುತ್ತಿದೆ. ಆಮೂಲಕ ಜ್ವಲಂತ ವಿಚಾರಗಳು ಜನರು ಚರ್ಚೆ ಮಾಡದಂತೆ ಮಾಡುವ ಪ್ರಯತ್ನ. ಬಿಜೆಪಿ ಮಂದಿ ಆರೆಸ್ಸೆಸ್ ಕೈಗೊಂಬೆಗಳಾಗಿದ್ದಾರೆ. ಸಂಘ ಪರಿವಾರ ಹೇಳಿದಂತೆ ನಡೆಯುತ್ತಿದ್ದಾರೆ. ದ್ವೇಷ ಹರಡುವ ಮಂದಿಯನ್ನು ಮೊದಲು ಬಂಧಿಸಬೇಕು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಶ್ರೀರಾಮ ಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಮಸೀದಿಗಳ ಆಜಾನ್ ವಿರೋಧಿಸಿ ಅಭಿಯಾನ ನಡೆಸಲಾಗುತ್ತಿದ್ದು ದೇವಸ್ಥಾನ, ಮಂದಿರಗಳ ಆವರಣದಲ್ಲಿ ಆಜಾನ್ ಕೂಗುವ ಸಂದರ್ಭದಲ್ಲೇ ಧ್ವನಿವರ್ಧಕ ಬಳಸಿ ಹನುಮಾನ್ ಚಾಲೀಸಾ ಪಠಣ ಹಾಕಲಾಗುತ್ತಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ಇದ್ದರೂ, ರಾಜ್ಯ ಸರಕಾರ ಪಾಲನೆ ಮಾಡದೇ ಇರುವುದರಿಂದ ಹಿಂದು ಸಂಘಟನೆಗಳು ಒತ್ತಡ ಹೇರುವ ಪ್ರಯತ್ನ ಮಾಡುತ್ತಿದೆ. ಆದರೆ ಈ ನಡೆಯನ್ನು ಕಾಂಗ್ರೆಸ್ ಖಂಡಿಸಿದ್ದು, ಇದೀಗ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಪರೋಕ್ಷವಾಗಿ ಹಿಂದು ಸಂಘಟನೆಗಳ ನಾಯಕರನ್ನು ಭಯೋತ್ಪಾದಕರು ಎಂದು ಜರೆದಿದ್ದಾರೆ.
ಇದೇ ವೇಳೆ, ರಾಜ್ಯದ ಹಲವು ಕಡೆ ಶ್ರೀರಾಮ ಸೇನೆ ಮತ್ತು ಇತರ ಹಿಂದು ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಆಜಾನ್ ಸಂದರ್ಭದಲ್ಲಿ ಅಭಿಯಾನದ ಹೆಸರಲ್ಲಿ ಸಂಘರ್ಷಕ್ಕೆ ದಾರಿಯಾಗುತ್ತದೆ ಎಂದು ಹೇಳಿ ಪೊಲೀಸರು ಬಲ ಪ್ರಯೋಗ ಮಾಡಿದ್ದಾರೆ. ಆದರೆ, ಪ್ರಮೋದ್ ಮುತಾಲಿಕ್ ಮಾತ್ರ ಹಿಂದು ಸಂಘಟನೆಗಳ ಅಭಿಯಾನ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.
The Opposition leader in the Legislative Council B.K. Hariprasad on Monday courted controversy when he said that those who are campaigning against Azaan are terrorists.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm