ಬ್ರೇಕಿಂಗ್ ನ್ಯೂಸ್
10-05-22 08:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಿಕ್ಕಿಬಿದ್ದಿರುವ ಕೆಎಸ್ ಆರ್ ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಬಿರಾದಾರ್ ಈಗ ಜೈಲು ಹಕ್ಕಿ. ವಿಶೇಷ ಅಂದ್ರೆ, ಮನೇಲಿ ಜೊತೆಗಿರುತ್ತಿದ್ದ ವೈಜನಾಥ್ ಹೆಂಡ್ತಿಯೇ ಜೈಲಿನಲ್ಲಿ ಪತಿಯನ್ನು ಕಾವಲು ಕಾಯುವ ದುರ್ಗತಿ ಬಂದಿದೆ.
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಕೆಎಸ್ಆರ್ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಬಿರಾದರ್ ಅನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ವಿಚಾರಣೆ ಮುಗಿಸಿ ಕಲಬುರಗಿ ಜೈಲಿಗೆ ಕಳುಹಿಸಿದ್ದಾರೆ. ವೈಜನಾಥ್ ಬಿರಾದರ್ ಪತ್ನಿ ಸುನಂದಾ ರೇವೂರ್ ಕಲಬುರಗಿ ಜೈಲಿನಲ್ಲಿ ಜೈಲರ್ ಆಗಿದ್ದು ಪತಿಯನ್ನು ತನ್ನದೇ ಸುಪರ್ದಿಯ ಜೈಲಿನಲ್ಲಿ ಮುದ್ದೆಯೂಟ ತಿನ್ನಿಸುವ ಗತಿ ಬಂದಿದೆ.
ಪತಿ - ಪತ್ನಿ ಸರಕಾರಿ ಕೆಲಸದಲ್ಲಿದ್ದು ಭರಪೂರ ಸಂಬಳ ಇದ್ದರೂ ವೈಜನಾಥ್ ಬಿರಾದಾರ್ ದುರಾಸೆಯಿಂದಾಗಿ ಇದೀಗ ಪತ್ನಿಯ ಸುಪರ್ದಿಯ ಜೈಲಿನಲ್ಲಿಯೇ ಮುದ್ದೆ ಮುರಿಯುವಂತೆ ಮಾಡಿದೆ. ಕೆಎಸ್ ಆರ್ ಪಿ ಕಮಾಂಡೆಂಟ್ ಆಗಿದ್ದ ವೈಜನಾಥ್, ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿ ಬಂಧನಕ್ಕೆ ಒಳಗಾಗಿರುವ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಜತೆ ಹತ್ತಿರದ ಸಂಪರ್ಕದಲ್ಲಿದ್ದ. ಪರೀಕ್ಷಾ ಕೇಂದ್ರ ಆಗಿದ್ದ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಉಸ್ತುವಾರಿಯಾಗಿದ್ದು ಅಲ್ಲಿ ನಡೆದ ಪಿಎಸ್ಐ ಪರೀಕ್ಷೆ ಅಕ್ರಮಕ್ಕೆ ಸಾಥ್ ನೀಡಿದ ಆರೋಪವಿದೆ.
ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಅಕ್ರಮ ಕಂಡುಬಂದ ಬೆನ್ನಲ್ಲೇ ವೈಜನಾಥ್ನನ್ನು ಸಿಐಡಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ವೈಜನಾಥ್ ತಪ್ಪೊಪ್ಪಿಕೊಂಡಿದ್ದು, ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Husband sent to Jail in PSI scam by his wife who is a Jail Superdent in Bengaluru.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm