ಬ್ರೇಕಿಂಗ್ ನ್ಯೂಸ್
10-05-22 08:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಿಕ್ಕಿಬಿದ್ದಿರುವ ಕೆಎಸ್ ಆರ್ ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಬಿರಾದಾರ್ ಈಗ ಜೈಲು ಹಕ್ಕಿ. ವಿಶೇಷ ಅಂದ್ರೆ, ಮನೇಲಿ ಜೊತೆಗಿರುತ್ತಿದ್ದ ವೈಜನಾಥ್ ಹೆಂಡ್ತಿಯೇ ಜೈಲಿನಲ್ಲಿ ಪತಿಯನ್ನು ಕಾವಲು ಕಾಯುವ ದುರ್ಗತಿ ಬಂದಿದೆ.
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಕೆಎಸ್ಆರ್ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಬಿರಾದರ್ ಅನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ವಿಚಾರಣೆ ಮುಗಿಸಿ ಕಲಬುರಗಿ ಜೈಲಿಗೆ ಕಳುಹಿಸಿದ್ದಾರೆ. ವೈಜನಾಥ್ ಬಿರಾದರ್ ಪತ್ನಿ ಸುನಂದಾ ರೇವೂರ್ ಕಲಬುರಗಿ ಜೈಲಿನಲ್ಲಿ ಜೈಲರ್ ಆಗಿದ್ದು ಪತಿಯನ್ನು ತನ್ನದೇ ಸುಪರ್ದಿಯ ಜೈಲಿನಲ್ಲಿ ಮುದ್ದೆಯೂಟ ತಿನ್ನಿಸುವ ಗತಿ ಬಂದಿದೆ.

ಪತಿ - ಪತ್ನಿ ಸರಕಾರಿ ಕೆಲಸದಲ್ಲಿದ್ದು ಭರಪೂರ ಸಂಬಳ ಇದ್ದರೂ ವೈಜನಾಥ್ ಬಿರಾದಾರ್ ದುರಾಸೆಯಿಂದಾಗಿ ಇದೀಗ ಪತ್ನಿಯ ಸುಪರ್ದಿಯ ಜೈಲಿನಲ್ಲಿಯೇ ಮುದ್ದೆ ಮುರಿಯುವಂತೆ ಮಾಡಿದೆ. ಕೆಎಸ್ ಆರ್ ಪಿ ಕಮಾಂಡೆಂಟ್ ಆಗಿದ್ದ ವೈಜನಾಥ್, ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿ ಬಂಧನಕ್ಕೆ ಒಳಗಾಗಿರುವ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಜತೆ ಹತ್ತಿರದ ಸಂಪರ್ಕದಲ್ಲಿದ್ದ. ಪರೀಕ್ಷಾ ಕೇಂದ್ರ ಆಗಿದ್ದ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಉಸ್ತುವಾರಿಯಾಗಿದ್ದು ಅಲ್ಲಿ ನಡೆದ ಪಿಎಸ್ಐ ಪರೀಕ್ಷೆ ಅಕ್ರಮಕ್ಕೆ ಸಾಥ್ ನೀಡಿದ ಆರೋಪವಿದೆ.
ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಅಕ್ರಮ ಕಂಡುಬಂದ ಬೆನ್ನಲ್ಲೇ ವೈಜನಾಥ್ನನ್ನು ಸಿಐಡಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ವೈಜನಾಥ್ ತಪ್ಪೊಪ್ಪಿಕೊಂಡಿದ್ದು, ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Husband sent to Jail in PSI scam by his wife who is a Jail Superdent in Bengaluru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm