ಬ್ರೇಕಿಂಗ್ ನ್ಯೂಸ್
10-05-22 08:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಿಕ್ಕಿಬಿದ್ದಿರುವ ಕೆಎಸ್ ಆರ್ ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಬಿರಾದಾರ್ ಈಗ ಜೈಲು ಹಕ್ಕಿ. ವಿಶೇಷ ಅಂದ್ರೆ, ಮನೇಲಿ ಜೊತೆಗಿರುತ್ತಿದ್ದ ವೈಜನಾಥ್ ಹೆಂಡ್ತಿಯೇ ಜೈಲಿನಲ್ಲಿ ಪತಿಯನ್ನು ಕಾವಲು ಕಾಯುವ ದುರ್ಗತಿ ಬಂದಿದೆ.
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಕೆಎಸ್ಆರ್ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಬಿರಾದರ್ ಅನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ವಿಚಾರಣೆ ಮುಗಿಸಿ ಕಲಬುರಗಿ ಜೈಲಿಗೆ ಕಳುಹಿಸಿದ್ದಾರೆ. ವೈಜನಾಥ್ ಬಿರಾದರ್ ಪತ್ನಿ ಸುನಂದಾ ರೇವೂರ್ ಕಲಬುರಗಿ ಜೈಲಿನಲ್ಲಿ ಜೈಲರ್ ಆಗಿದ್ದು ಪತಿಯನ್ನು ತನ್ನದೇ ಸುಪರ್ದಿಯ ಜೈಲಿನಲ್ಲಿ ಮುದ್ದೆಯೂಟ ತಿನ್ನಿಸುವ ಗತಿ ಬಂದಿದೆ.

ಪತಿ - ಪತ್ನಿ ಸರಕಾರಿ ಕೆಲಸದಲ್ಲಿದ್ದು ಭರಪೂರ ಸಂಬಳ ಇದ್ದರೂ ವೈಜನಾಥ್ ಬಿರಾದಾರ್ ದುರಾಸೆಯಿಂದಾಗಿ ಇದೀಗ ಪತ್ನಿಯ ಸುಪರ್ದಿಯ ಜೈಲಿನಲ್ಲಿಯೇ ಮುದ್ದೆ ಮುರಿಯುವಂತೆ ಮಾಡಿದೆ. ಕೆಎಸ್ ಆರ್ ಪಿ ಕಮಾಂಡೆಂಟ್ ಆಗಿದ್ದ ವೈಜನಾಥ್, ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿ ಬಂಧನಕ್ಕೆ ಒಳಗಾಗಿರುವ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಜತೆ ಹತ್ತಿರದ ಸಂಪರ್ಕದಲ್ಲಿದ್ದ. ಪರೀಕ್ಷಾ ಕೇಂದ್ರ ಆಗಿದ್ದ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಉಸ್ತುವಾರಿಯಾಗಿದ್ದು ಅಲ್ಲಿ ನಡೆದ ಪಿಎಸ್ಐ ಪರೀಕ್ಷೆ ಅಕ್ರಮಕ್ಕೆ ಸಾಥ್ ನೀಡಿದ ಆರೋಪವಿದೆ.
ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಅಕ್ರಮ ಕಂಡುಬಂದ ಬೆನ್ನಲ್ಲೇ ವೈಜನಾಥ್ನನ್ನು ಸಿಐಡಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ವೈಜನಾಥ್ ತಪ್ಪೊಪ್ಪಿಕೊಂಡಿದ್ದು, ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Husband sent to Jail in PSI scam by his wife who is a Jail Superdent in Bengaluru.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm