ಬ್ರೇಕಿಂಗ್ ನ್ಯೂಸ್
10-05-22 10:22 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : ಇದೇ ತಿಂಗಳ ಮೇ 21 ಮತ್ತು 22 ರಂದು ಶಿಕ್ಷಕ ಹುದ್ದೆ ನೇಮಕಾತಿಗೆ ಪರೀಕ್ಷೆ ನಡೆಸಲಾಗುವುದು. ಈ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಇರಲ್ಲ. ಯಾವುದೇ ಊಹಾಪೋಹಗಳಿಗೆ ಯಾರೂ ಕಿವಿಗೊಡಬೇಡಿ. ಸಮಾಜ ವಿಜ್ಞಾನ ವಿಷಯದಲ್ಲಿ 1:50 ಇದೆ. ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದೆ. 1,06,083 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ರಾಜ್ಯದ 435 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುವುದು. ಚಿಕ್ಕೋಡಿಯಲ್ಲಿ ಹೆಚ್ಚು ಕೇಂದ್ರಗಳಿವೆ. ಸುಮಾರು 11 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಹೀಗಾಗಿ ಅಲ್ಲಿ ಕೇಂದ್ರ ಜಾಸ್ತಿ ಮಾಡಲಾಗಿದೆ ಎಂದರು.

ಪರೀಕ್ಷಾ ಕೇಂದ್ರದ ಬಗ್ಗೆ ಬಹಳಷ್ಟು ಮುಂಜಾಗ್ರತೆ ವಹಿಸಿದ್ದೇವೆ. ಉನ್ನತ ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇವೆ. ಯಾವುದೇ ಕಾರಣಕ್ಕೂ ಎಲೆಕ್ಟ್ರಾನಿಕ್ ವಸ್ತುಗಳನ್ನ ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ. ಒಂದು ಗಂಟೆ ಒಳಗೆ ಪರೀಕ್ಷಾ ಕೇಂದ್ರಗಳಿಗೆ ಬರಬೇಕು. ಅರ್ಧ ಗಂಟೆಗೆ ಮುಂಚಿತವಾಗಿ ಕೊಠಡಿಗೆ ಬರಬೇಕು. ಪ್ರತಿ ಕೊಠಡಿಯಲ್ಲೂ ಗಡಿಯಾರ, ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗುವುದು. ಒಂದು ರೂಮ್ನಲ್ಲಿ 20 ಜನರು ಮಾತ್ರ ಇರ್ತಾರೆ. ಯಾವುದೇ ಗೊಂದಲಕ್ಕೀಡಾಗದೆ ಪರೀಕ್ಷೆ ಬರೆಯಬೇಕು ಎಂದು ತಿಳಿಸಿದರು.
ಸೂಕ್ಷ್ಮ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡ್ತೀವಿ. ಪ್ರತಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು, ಸಿಇಒ, ಎಸ್ಪಿಗಳ ನೇತೃತ್ವದಲ್ಲಿ ಕಮಿಟಿ ಮಾಡಲಾಗಿದೆ. ಪರೀಕ್ಷೆ ಜವಾಬ್ದಾರಿ ಈ ಕಮಿಟಿ ನೋಡುತ್ತದೆ. ಪರೀಕ್ಷೆಗೆ ಖಾಸಗಿ ಶಾಲಾ ಕೊಠಡಿಗಳನ್ನ ತೆಗೆದುಕೊಳ್ತೀವಿ. ಆ ಶಾಲೆಯನ್ನ ಶಿಕ್ಷಣ ಇಲಾಖೆ ನಿಯಂತ್ರಣಕ್ಕೆ ತೆಗೆದುಕೊಳ್ಳಲಾಗುತ್ತದೆ ಮತ್ತು ಅದೇ ಶಾಲೆಯ ಶಿಕ್ಷಕರನ್ನು ಪರೀಕ್ಷೆಗಳಿಗೆ ಬಳಸಿಕೊಳ್ಳುವುದಿಲ್ಲ. ಪ್ರತಿ ಕೇಂದ್ರಕ್ಕೂ ತಹಶೀಲ್ದಾರ್ ಮೇಲ್ಪಟ್ಟ ಅಧಿಕಾರಿಗಳನ್ನ ನೇಮಕ ಮಾಡಲಾಗುವುದು. ಪರೀಕ್ಷಾ ಕೇಂದ್ರದಲ್ಲಿ 144 ಸೆಕ್ಷನ್ ಇರಲಿದೆ. ಪೊಲೀಸ್ ಇಲಾಖೆ ಸಂಪೂರ್ಣ ಹದ್ದಿನ ಕಣ್ಣು ಇಟ್ಟಿದೆ ಎಂದು ವಿವರಿಸಿದರು.
The examinations, which are scheduled to be held on May 21 and May 22, will be conducted in 435 centres across different districts in the state. Following the controversial PSI (Police Sub-Inspector) recruitment scam, the competitive exams for teachers for 11,000 jobs in different districts will now be conducted under strong vigilance, Karnataka Primary and Secondary Education minister B C Nagesh said Tuesday.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm