ಬ್ರೇಕಿಂಗ್ ನ್ಯೂಸ್
15-05-22 03:28 pm HK Desk News ಕರ್ನಾಟಕ
ತುಮಕೂರು, ಮೇ 15 : ಎರಡು ವರ್ಷಗಳಿಂದ ಪ್ರೀತಿಸಿ ಮದುವೆಗೆ ರೆಡಿಯಾಗಿದ್ದಾಗಲೇ ಪ್ರಿಯಕರ ಅಪಘಾತದಲ್ಲಿ ಸಾವನ್ನಪ್ಪಿದರೆ, ಘಟನೆಯಿಂದ ಆಘಾತಗೊಂಡು ಪ್ರೀತಿಸುತ್ತಿದ್ದ ಯುವತಿಯೂ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ತುಮಕೂರಿನಲ್ಲಿ ನಡೆದಿದೆ.
ಧನುಷ್ (23) ಮತ್ತು ಸುಷ್ಮಾ (22) ಮೃತ ದುರ್ದೈವಿಗಳು. ತುಮಕೂರು ತಾಲೂಕಿನ ಅರೆಹಳ್ಳಿಯಲ್ಲಿ ದುರಂತ ನಡೆದಿದೆ. ಮೇ 11ರಂದು ಹುಡುಗ ಸಾವನ್ನಪ್ಪಿದರೆ, ಶನಿವಾರ ರಾತ್ರಿ ಯುವತಿ ಸಾವು ಕಂಡಿದ್ದಾಳೆ. ಮೇ 11ರಂದು ನೆಲಮಂಗಲ ಬಳಿ ನಡೆದ ಅಪಘಾತದಲ್ಲಿ ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದ ಧನುಷ್ ಸಾವನ್ನಪ್ಪಿದ್ದ. ಸಾವಿನ ಸುದ್ದಿಕೇಳಿ ಆಘಾತಗೊಂಡಿದ್ದ ಅರೆಹಳ್ಳಿ ನಿವಾಸಿ ಯುವತಿ ಸುಷ್ಮಾ ತೀವ್ರ ಖಿನ್ನತೆಗೆ ಒಳಗಾಗಿದ್ದಳು. ದುಃಖದ ಮಧ್ಯೆಯೂ ಪ್ರಿಯಕರನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದಳು. ಅದೇ ಯೋಚನೆಯಲ್ಲಿ ಮುಳುಗಿದ್ದ ಸುಷ್ಮಾ ಮನನೊಂದು ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ.


ವಿಷ ಸೇವಿಸಿದ್ದ ಯುವತಿಯನ್ನು ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಒಯ್ದಿದ್ದು ಸೂಕ್ತ ಚಿಕಿತ್ಸೆ ಲಭಿಸಿರಲಿಲ್ಲ. ನಾಲ್ಕೈದು ಆಸ್ಪತ್ರೆಗಳಲ್ಲಿ ಸುತ್ತಿದರೂ, ಚಿಕಿತ್ಸೆ ಫಲಿಸದೇ ಸುಷ್ಮಾ ಸಾವು ಕಂಡಿದ್ದಾಳೆ. ಎಂಕಾಂ ಮಾಡುತ್ತಿದ್ದ ಸುಷ್ಮಾ ಮತ್ತು ಬೆಂಗಳೂರಿನಲ್ಲಿ ಸ್ವಂತ ಬಟ್ಟೆ ಅಂಗಡಿ ಇಟ್ಟಿದ್ದ ಧನುಷ್ ಹೊಸ ಬಾಳಿನ ಕನಸು ಕಟ್ಟಿದ್ದರು. ಆದರೆ ಧನುಷ್ ಊರಿನ ಜಾತ್ರೆಗೆ ಬರುತ್ತಿದ್ದ ವೇಳೆ ಅಪಘಾತ ನಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದ. ಹುಡುಗ- ಹುಡುಗಿ ಪ್ರೀತಿಸುತ್ತಿದ್ದ ವಿಚಾರ ತಿಳಿದ ಮನೆಯವರು ಇತ್ತೀಚೆಗೆ ಇಬ್ಬರಿಗೂ ಮದುವೆ ನಿಶ್ಚಯ ಮಾಡಿದ್ದರು. ಆದರೆ ವಿಧಿಯಾಟ ಬೇರೆಯದೇ ಆಗಿತ್ತು. ಬಾಳಿ ಬದುಕಬೇಕಾದವರು ದುರಂತ ಅಂತ್ಯ ಕಂಡಿದ್ದಾರೆ.
Tumkur Bride grooms dies on road accident, shocked bride consumes poison found dead. The deceased have been identified as Dhanush (23) and Sushma (22).
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm