ಬ್ರೇಕಿಂಗ್ ನ್ಯೂಸ್
15-05-22 03:28 pm HK Desk News ಕರ್ನಾಟಕ
ತುಮಕೂರು, ಮೇ 15 : ಎರಡು ವರ್ಷಗಳಿಂದ ಪ್ರೀತಿಸಿ ಮದುವೆಗೆ ರೆಡಿಯಾಗಿದ್ದಾಗಲೇ ಪ್ರಿಯಕರ ಅಪಘಾತದಲ್ಲಿ ಸಾವನ್ನಪ್ಪಿದರೆ, ಘಟನೆಯಿಂದ ಆಘಾತಗೊಂಡು ಪ್ರೀತಿಸುತ್ತಿದ್ದ ಯುವತಿಯೂ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ತುಮಕೂರಿನಲ್ಲಿ ನಡೆದಿದೆ.
ಧನುಷ್ (23) ಮತ್ತು ಸುಷ್ಮಾ (22) ಮೃತ ದುರ್ದೈವಿಗಳು. ತುಮಕೂರು ತಾಲೂಕಿನ ಅರೆಹಳ್ಳಿಯಲ್ಲಿ ದುರಂತ ನಡೆದಿದೆ. ಮೇ 11ರಂದು ಹುಡುಗ ಸಾವನ್ನಪ್ಪಿದರೆ, ಶನಿವಾರ ರಾತ್ರಿ ಯುವತಿ ಸಾವು ಕಂಡಿದ್ದಾಳೆ. ಮೇ 11ರಂದು ನೆಲಮಂಗಲ ಬಳಿ ನಡೆದ ಅಪಘಾತದಲ್ಲಿ ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದ ಧನುಷ್ ಸಾವನ್ನಪ್ಪಿದ್ದ. ಸಾವಿನ ಸುದ್ದಿಕೇಳಿ ಆಘಾತಗೊಂಡಿದ್ದ ಅರೆಹಳ್ಳಿ ನಿವಾಸಿ ಯುವತಿ ಸುಷ್ಮಾ ತೀವ್ರ ಖಿನ್ನತೆಗೆ ಒಳಗಾಗಿದ್ದಳು. ದುಃಖದ ಮಧ್ಯೆಯೂ ಪ್ರಿಯಕರನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದಳು. ಅದೇ ಯೋಚನೆಯಲ್ಲಿ ಮುಳುಗಿದ್ದ ಸುಷ್ಮಾ ಮನನೊಂದು ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ.


ವಿಷ ಸೇವಿಸಿದ್ದ ಯುವತಿಯನ್ನು ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಒಯ್ದಿದ್ದು ಸೂಕ್ತ ಚಿಕಿತ್ಸೆ ಲಭಿಸಿರಲಿಲ್ಲ. ನಾಲ್ಕೈದು ಆಸ್ಪತ್ರೆಗಳಲ್ಲಿ ಸುತ್ತಿದರೂ, ಚಿಕಿತ್ಸೆ ಫಲಿಸದೇ ಸುಷ್ಮಾ ಸಾವು ಕಂಡಿದ್ದಾಳೆ. ಎಂಕಾಂ ಮಾಡುತ್ತಿದ್ದ ಸುಷ್ಮಾ ಮತ್ತು ಬೆಂಗಳೂರಿನಲ್ಲಿ ಸ್ವಂತ ಬಟ್ಟೆ ಅಂಗಡಿ ಇಟ್ಟಿದ್ದ ಧನುಷ್ ಹೊಸ ಬಾಳಿನ ಕನಸು ಕಟ್ಟಿದ್ದರು. ಆದರೆ ಧನುಷ್ ಊರಿನ ಜಾತ್ರೆಗೆ ಬರುತ್ತಿದ್ದ ವೇಳೆ ಅಪಘಾತ ನಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದ. ಹುಡುಗ- ಹುಡುಗಿ ಪ್ರೀತಿಸುತ್ತಿದ್ದ ವಿಚಾರ ತಿಳಿದ ಮನೆಯವರು ಇತ್ತೀಚೆಗೆ ಇಬ್ಬರಿಗೂ ಮದುವೆ ನಿಶ್ಚಯ ಮಾಡಿದ್ದರು. ಆದರೆ ವಿಧಿಯಾಟ ಬೇರೆಯದೇ ಆಗಿತ್ತು. ಬಾಳಿ ಬದುಕಬೇಕಾದವರು ದುರಂತ ಅಂತ್ಯ ಕಂಡಿದ್ದಾರೆ.
Tumkur Bride grooms dies on road accident, shocked bride consumes poison found dead. The deceased have been identified as Dhanush (23) and Sushma (22).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm