ಬ್ರೇಕಿಂಗ್ ನ್ಯೂಸ್
17-05-22 02:42 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 17: ದಪ್ಪಗಿದ್ದೇನೆಂದು ಬೊಜ್ಜು ಕರಗಿಸಲು ಹೋಗಿ ಸರ್ಜರಿಗೆ ಒಳಗಾಗಿದ್ದ ಯುವ ಕಿರುತೆರೆ ನಟಿ ಚೇತನಾ ರಾಜ್ (21) ದಾರುಣ ಸಾವು ಕಂಡ ಘಟನೆ ನಡೆದಿದ್ದು ಪೋಷಕರು ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ನವರಂಗ್ ಸರ್ಕಲ್ ನಲ್ಲಿರುವ ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರಿನಂಶ ಶೇಖರಣೆಯಾಗಿ ಸಾವು ಸಂಭವಿಸಿದೆ ಎನ್ನುವ ಆರೋಪ ಕೇಳಿಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ಚೇತನಾ ರಾಜ್ ಕುಟುಂಬ ವಾಸವಿತ್ತು. ಆಸ್ಪತ್ರೆಯಲ್ಲಿ ಅಗತ್ಯ ಸಲಕರಣೆ ಹಾಗೂ ಪೋಷಕರ ಒಪ್ಪಿಗೆ ಪಡೆಯದೆ ಈ ರೀತಿಯ ಅಪಾಯಕಾರಿ ಸರ್ಜರಿಗೆ ವೈದ್ಯರು ಮುಂದಾಗಿದ್ದರು ಎನ್ನಲಾಗಿದ್ದು, ಪೋಷಕರು ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚೇತನಾರಾಜ್ ಕಲರ್ಸ್ ಕನ್ನಡ ವಾಹಿನಿಯಲ್ಲಿ ಬರುತ್ತಿದ್ದ ಗೀತಾ, ದೊರೆಸಾನಿ, ಒಲವಿನ ನಿಲ್ದಾಣ ಧಾರಾವಾಹಿಗಳಲ್ಲಿ ನಟಿಸುತ್ತಿದ್ದಳು. ಇನ್ನೂ ಬಿಡುಗಡೆಯಾಗದ ಹವಾಯಾಮಿ ಸಿನಿಮಾದಲ್ಲೂ ನಟಿಸಿದ್ದಳು. ತೂಕ ಇಳಿಸಿಕೊಳ್ಳಲು ಹೋಗಿ ಎಡವಟ್ಟು ಮಾಡಿಕೊಂಡಿದ್ದು, ದುರಂತ ಸಾವು ಕಂಡಿದ್ದಾಳೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಚೇತನಾ ತಂದೆ ವರದರಾಜು, ದಯವಿಟ್ಟು ಯಾರು ಕೂಡ ತಮ್ಮ ತೂಕ ಇಳಿಸಿಕೊಳ್ಳಲು ಹೋಗಬೇಡಿ. ದಿಢೀರ್ ಆಗಿ ಸಣ್ಣ ಆಗಲು ಹೋದರೆ ಸಾವೇ ಗತಿ. ನೀವು ಈಗ ಹೇಗಿದ್ದೀರೋ ಹಾಗೇ ಇದ್ದುಬಿಡಿ. ಮಕ್ಕಳು ಮನೆಯಲ್ಲಿ ತಿಳಿಸದೆ ಸರ್ಜರಿಗೆ ಒಳಗಾದರೆ ಇಂತಹ ಪರಿಸ್ಥಿತಿ ಬರುತ್ತದೆ. ದಯವಿಟ್ಟು ಯಾರು ಕೂಡ ಫ್ಯಾಟ್ ಸರ್ಜರಿಗೆ ಒಳಗಾಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
Chetana Raj, a television actress, died at the Shetty Cosmetic Hospital in Navrang Circle. Water accumulated in her lungs as a result of the fat surgery. Parents are furious that their child perished as a result of medical malpractice. Munilakshmi, the actress's mother, sobbed in front of her body. Chetana's father, Varadaraj, claimed that the fat surgery was done without the proper equipment or parental approval.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm