ಬ್ರೇಕಿಂಗ್ ನ್ಯೂಸ್
18-05-22 03:08 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 18: ರಾತ್ರಿ ಸುರಿದ ಮಳೆಗೆ ಇಬ್ಬರು ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೈಪ್ಲೈನ್ ಕಾಮಗಾರಿ ನಡೆಸುತ್ತಿದ್ದ ಸ್ಥಳದಲ್ಲಿ ಇಬ್ಬರು ಕಾರ್ಮಿಕರು ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಉಲ್ಲಾಳ ಉಪನಗರ ಉಪಕಾರ್ ಲೇಔಟ್ ಬಸ್ ನಿಲ್ದಾಣ ಬಳಿ ಘಟನೆ ನಡೆದಿದೆ. ಬಿಹಾರ ಮೂಲದ ದೇವ್ ಭರತ್ ಹಾಗೂ ಉತ್ತರ ಪ್ರದೇಶದ ಅಂಕಿತ್ ಕುಮಾರ್ ಸಾವನ್ನಪ್ಪಿರುವ ದುರ್ದೈವಿಗಳು. ಇವರ ಜೊತೆಗಿದ್ದ ತ್ರಿಲೋಕ್ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಘಟನೆ ಸಂಬಂಧ ಕಾವೇರಿ ಐದನೇ ಹಂತದ ಯೋಜನೆ ಇಂಜಿನಿಯರ್ ರಮೇಶ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ನಿನ್ನೆ ಮೂವರು ಕಾರ್ಮಿಕರು ಕೆಲಸ ಮಾಡ್ತಿದ್ರು. ಆಕ್ಸಿಡೆಂಡಲೀ ಘಟನೆ ನಡೆದಿದೆ, ಇದರ ಬಗ್ಗೆ ಬೇಸರವಿದೆ. ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಸಂಸ್ಥೆಗೆ ಗುತ್ತಿಗೆ ಕೊಡಲಾಗಿತ್ತು. ಕೇವಲ ಪೈಪ್ ಗೆ ಒಂದು ಹೋಲ್ ಮಾಡುವ ಕೆಲಸ ಮಾತ್ರವಿತ್ತು. ಹೀಗಾಗಿ ಮೂವರು ಕಾರ್ಮಿಕರ ಅಗತ್ಯ ಮಾತ್ರವಿತ್ತು. ಒಬ್ಬ ಬಚಾವ್ ಆಗಿ ಬಂದಿದ್ದಾನೆ, ಒಟ್ಟು 480 ಕೋಟಿ ಪ್ರಾಜೆಕ್ಟ್ ಇದು. ಘಟನೆ ಸಂಬಂಧ ಸೂಕ್ತ ತನಿಖೆಯಾಗಲಿ, ಗುತ್ತಿಗೆದಾರರಿಂದ ಪರಿಹಾರ ಕೊಡಿಸುವ ಕೆಲಸ ಆಗಲಿದೆ ಎಂದು ಹೇಳಿದ್ದಾರೆ.

ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು ಇಬ್ಬರು ಕಂಟ್ರಾಕ್ಟರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ನಿರ್ಲಕ್ಷ್ಯ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದಾರೆ.
As many as two rain-related deaths were reported in Bengaluru on Wednesday as heavy showers cause widespread waterlogging and power cuts across the city. Two labourers were found dead at a pipeline work site in West Bengaluru’s Ullal on Wednesday morning.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm