ಬ್ರೇಕಿಂಗ್ ನ್ಯೂಸ್
19-05-22 09:35 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19 : ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಸೃಷ್ಟಿಸುವ ಆತಂಕದ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಮುಂದಿನ ವಾರ ಎನ್ಡಿಆರ್ಎಫ್ (ಕೇಂದ್ರಿಯ ವಿಪತ್ತು ರಕ್ಷಣಾ ಪಡೆ) ಪಡೆಯ ನಾಲ್ಕು ತಂಡಗಳು ರಾಜ್ಯಕ್ಕೆ ಆಗಮಿಸಲಿದೆ. ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದು, ಮಾನ್ಸೂನ್ ಆಗಮನದ ಒಂದು ವಾರ ಮಂಚೆಯೇ ರಾಜ್ಯಕ್ಕೆ ಆಗಮಿಸಿ, ಕಾರ್ಯಾಚರಣೆಗೆ ಸಿದ್ಧವಾಗಿರಲಿದೆ ಎಂದು ತಿಳಿಸಿದ್ದಾರೆ.
ಎನ್ ಡಿ ಆರ್ ಎಫ್ ಎಲ್ಲೆಲ್ಲಿ ನಿಯೋಜನೆ?
ಎನ್ಡಿಆರ್ಎಫ್ ನಾಲ್ಕು ತಂಡಗಳ ಪೈಕಿ ಮೊದಲ ತಂಡ ದಕ್ಷಿಣ ಕನ್ನಡ - ಉಡುಪಿ, ಉತ್ತರ ಕನ್ನಡ ಹಾಗೂ ಸುತ್ತಮುತ್ತಲಿನ ಪ್ರದೇಶದ ಅನುಕೂಲಕ್ಕಾಗಿ ನಿಯೋಜನೆ ಮಾಡಲಾಗುತ್ತದೆ. ಎರಡನೇ ತಂಡ ಕೊಡಗು - ಮೈಸೂರು, ಹಾಸನ, ಚಿಕ್ಕಮಗಳೂರು ಭಾಗದಲ್ಲಿ ನಿಯೋಜನೆ ಮಾಡಲಾಗುತ್ತದೆ. ಮೂರನೇ ತಂಡ ಬೆಳಗಾವಿ - ಬಾಗಲಕೋಟ, ವಿಜಯಪುರ ಹಾಗೂ ಸುತ್ತಮುತ್ತಲಿನ ಪ್ರದೇಶದ ಅನುಕೂಲಕ್ಕಾಗಿ ನಿಯೋಜನೆ ಮಾಡಲಾಗುತ್ತದೆ. ನಾಲ್ಕನೇ ತಂಡವನ್ನು ರಾಯಚೂರು - ಯಾದಗಿರಿ, ಬಳ್ಳಾರಿ, ಕಲಬುರ್ಗಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ನಿಯೋಜಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲೂ ಒಂದು ತಂಡ
ಜಿಲ್ಲೆಗಳಲ್ಲಿ ಮಾತ್ರವಲ್ಲದೆ ಬೆಂಗಳೂರಿನಲ್ಲೂ ಒಂದು ಎನ್ಡಿಆರ್ ಎಫ್ ತಂಡ ಕಾರ್ಯಚರಣೆಗೆ ಸಿದ್ಧವಾಗಿರುತ್ತದೆ. ಜತೆಗೆ SDRF ತಂಡಗಳು ಎಲ್ಲ ರೀತಿಯ ಪರಿಸ್ಥಿತಿ ಎದುರಿಸಲು ಸಿದ್ಧವಾಗಿದೆ. ಇದೇ ಸಂದರ್ಭದಲ್ಲಿ ಮಳೆ ಹಾನಿ ಆಗದಂತೆ ಕ್ರಮ ಕೈಗೊಳ್ಳಲು ಸರ್ಕಾರವೂ ಎಲ್ಲ ಸಿದ್ಧತೆಯನ್ನು ಕೈಗೊಳ್ಳುತ್ತಿದೆ ಎಂದು ಆರ್. ಅಶೋಕ್ ತಿಳಿಸಿದರು. ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರಿಗೆ ಪತ್ರ ಬರೆದು ಆಯಾ ಜಿಲ್ಲೆಗಳಲ್ಲಿ ಪರಿಶೀಲನಾ ಸಭೆ ನಡೆಸುವಂತೆ ವಿನಂತಿ ಮಾಡುತ್ತೇನೆ. ಇನ್ನು 3-4 ತಿಂಗಳು ಕಾರ್ಯಾಚರಣೆಯ ವೇಗ ಹೆಚ್ಚಿಸಬೇಕು. ಎಲ್ಲೇ ಭೂಕುಸಿತ, ನೆರೆ ಬಂದರೂ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಹಾರವನ್ನು ತ್ವರಿತವಾಗಿ ನೀಡಬೇಕು.
ಮನೆಹಾನಿ, ಪ್ರಾಣಹಾನಿ ಉಂಟಾದಾಗ 48 ಗಂಟೆಯಲ್ಲಿ ಪರಿಹಾರ ನೀಡಬೇಕು. ಕಂಟ್ರೋಲ್ ರೂಮ್ ಸದಾ ಆಕ್ಟಿವ್ ಆಗಿರಬೇಕು. ಕಾಳಜಿ ಕೇಂದ್ರದಲ್ಲಿ ಇಲಾಖೆ ಸೂಚಿಸಿದ ಪ್ರಕಾರವೇ ಊಟೋಪಚಾರ ವ್ಯವಸ್ಥೆ ಮಾಡಬೇಕು. ಈಗಿನಿಂದಲೇ ಎಲ್ಲ ರೀತಿಯ ರೂಪುರೇಷೆ ಸಿದ್ಧಪಡಿಸಬೇಕು. ಎಲ್ಲೆಲ್ಲಿ ಭೂಕುಸಿತ ಆಗುವ ಸಾಧ್ಯತೆ ಇದೆಯೋ ಅಲ್ಲಿನ ಜನರ ಮನವೊಲಿಸಿ ಖುದ್ದು ಡಿಸಿಗಳೇ ಸ್ಥಳಾಂತರ ಮಾಡಿಸಬೇಕು. ಪ್ರಾಣಹಾನಿ ಆಗದಂತೆ ತಡೆಯುವುದು ನಮ್ಮ ಮೊದಲ ಆದ್ಯತೆ ಆಗಬೇಕಿದೆ ಎಂದರು.
Four teams of NDRF (Central Disaster Protection Force) will arrive in the state next week as a precautionary measure in the wake of fears of monsoon rains in the state. The Minister of Revenue. Ashok informed him that the arrival of the state would be ready for operation just a week before the arrival of the monsoon.The first of four NDRF teams will be deployed in Dakshina Kannada – Udupi, Uttar Kannada and surrounding areas. The second team will be deployed in Kodagu – Mysore, Hassan and Chikmagalur.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 12:41 pm
HK News Desk
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm