ಬ್ರೇಕಿಂಗ್ ನ್ಯೂಸ್
20-05-22 02:13 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20 : ವಿದೇಶದ ಸಂಸತ್ತಿನಲ್ಲಿ ಇದೇ ಮೊದಲ ಬಾರಿಗೆ ಕನ್ನಡದ ಡಿಂಡಿಮ ಮೊಳಗಿದೆ. ಉತ್ತರ ಅಮೆರಿಕಾದ ಕೆನಡಾದ ಸಂಸತ್ತಿನಲ್ಲಿ ಕರ್ನಾಟಕ ಮೂಲದ ಸಂಸದರೊಬ್ಬರು ಕನ್ನಡದಲ್ಲಿ ಭಾಷಣ ಮಾಡುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದ ನಿವಾಸಿ ಚಂದ್ರ ಆರ್ಯ ಎಂಬವರು 2019ರಲ್ಲಿ ಕೆನಡಾ ದೇಶದ ನೇಪಿಯನ್ ಕ್ಷೇತ್ರದಿಂದ ಎರಡನೇ ಬಾರಿಗೆ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಅವರು ಲಿಬರಲ್ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದರು. ಇತ್ತೀಚೆಗೆ ತಾವು ಸಂಸತ್ತಿನಲ್ಲಿ ಕನ್ನಡದಲ್ಲಿ ನಾಲ್ಕು ವಾಕ್ಯಗಳನ್ನು ಮಾತನಾಡಿ ತನ್ನ ಮಾತೃಭಾಷೆಯೆಂದು ಹೇಳಿ ಭಾಷಾ ಪ್ರೇಮ ಮೆರೆದಿದ್ದಾರೆ.
ಚಂದ್ರ ಆರ್ಯ ದ್ವಾರಾಳು ಗ್ರಾಮದ ಕೆ.ಗೋವಿಂದಯ್ಯ ಮತ್ತು ಜಯಮ್ಮ ದಂಪತಿ ಪುತ್ರನಾಗಿದ್ದು ರಾಮನಗರದ ಗೌಸಿಯಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ ಪಡೆದಿದ್ದರು. ಬಳಿಕ ಧಾರವಾಡದಲ್ಲಿ ಎಂಬಿಎ ಶಿಕ್ಷಣ ಪೂರೈಸಿದ್ದರು. ಆನಂತರ ಕೆನಡಾದಲ್ಲಿ ಉದ್ಯೋಗ ಕಂಡುಕೊಂಡು ಅಲ್ಲಿಯೇ ನೆಲೆಸಿದ್ದರು.
ಈ ಬಗ್ಗೆ ಚಂದ್ರ ಆರ್ಯ ಟ್ವೀಟ್ ಮಾಡಿದ್ದು, ಕೆನಡಾದ ಸಂಸತ್ತಿನಲ್ಲಿ ನಾನು ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಿದ್ದೇನೆ. ಈ ಸುಂದರ ಭಾಷೆ ಸುದೀರ್ಘ ಇತಿಹಾಸವನ್ನು ಹೊಂದಿದೆ ಮತ್ತು ಸುಮಾರು 50 ಮಿಲಿಯನ್ ಜನರು ಮಾತನಾಡುತ್ತಾರೆ. ಭಾರತದ ಹೊರಗಿನ ಯಾವುದೇ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲು ಎಂದು ಅವರು ಬರೆದುಕೊಂಡಿದ್ದು ವಿಡಿಯೊ ತುಣುಕನ್ನು ಹಂಚಿಕೊಂಡಿದ್ದಾರೆ.
Canada MP Chandra Arya became the first to speak Kannada in a Parliament outside India. While addressing the house, he said in his native language, "Elladaru iru enthadaru iru endendigu nee Kannadavaagiru", which roughly translates to wherever you are, however you are, be a Kannadiga forever."I spoke in my mother tongue (first language) Kannada in Canadian parliament. This beautiful language has long history and is spoken by about 50 million people.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 12:41 pm
HK News Desk
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm