ಬ್ರೇಕಿಂಗ್ ನ್ಯೂಸ್
22-05-22 03:13 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 22 : ಹೋಮ ಮಂಟಪದಲ್ಲಿ ಮಾಂಸದೂಟ, ಗುಹೆಯಲ್ಲಿ ಗೋರಿ ಪೂಜೆ ಬಳಿಕ ದತ್ತಪೀಠದ ಆವರಣದಲ್ಲಿ ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
ಇನಾಂ ದತ್ತಾತ್ರೇಯ ಪೀಠ ಸಮೀಪದ ಮುಂಭಾಗದಲ್ಲಿ ಮುಸ್ಲಿಂ ಸಮುದಾಯದವರು ಪ್ರಾರ್ಥನೆ ಸಲ್ಲಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದರ ಬೆನ್ನಲ್ಲೇ ವಿವಾದ ಹೊತ್ತಿಕೊಂಡಿದೆ. ಕೆಲವು ದಿನಗಳ ಹಿಂದೆ ದತ್ತಪೀಠದ ಬಳಿ ಮಾಂಸಹಾರ ಬೇಯಿಸಲಾಗುತ್ತಿದೆ, ಪವಿತ್ರ ಕ್ಷೇತ್ರ ಅಪವಿತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು.
ನಮಾಜ್ ವಿಡಿಯೋ ಹೊರಬರುತ್ತಲೇ ಪ್ರಾರ್ಥನೆ ಸಲ್ಲಿಸುತ್ತಿರುವ ವಿಡಿಯೋ ಹಳೆಯದ್ದು ಎಂದು ಕೆಲವರು ವಾದಿಸಿದ್ದಾರೆ. ವಿವಾದಿತ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿರುವುದು ನ್ಯಾಯಾಲಯದ ಆದೇಶ ಉಲ್ಲಂಘನೆಯಾಗಿದ್ದು ವಿಡಿಯೋ ವೈರಲ್ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಕಂದಾಯ ಮತ್ತು ಮುಜರಾಯಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಪ್ರಕರಣ ಸಂಬಂಧ ವರದಿ ಸಲ್ಲಿಸುವಂತೆ ತಹಶೀಲ್ದಾರ್ಗೆ ಸೂಚನೆ ನೀಡಿದ್ದಾರೆ.
ವಿವಾದಿತ ಸ್ಥಳದಲ್ಲಿ ಈಗ ಪ್ರಾರ್ಥನೆ ಸಲ್ಲಿಸಿಲ್ಲ. ಹಳೇ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವ ಬಗ್ಗೆ ಅನುಮಾನವಿದೆ. ಈ ಬಗ್ಗೆ ವರದಿ ಸಲ್ಲಿಸುವಂತೆ ತಹಶೀಲ್ದಾರ್ಗೆ ಸೂಚಿಸಲಾಗಿದೆ. ವಿವಾದಿತ ಸ್ಥಳದಲ್ಲಿ ಯಾರೇ ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಎಚ್ಚರಿಸಿದ್ದಾರೆ.
ಪ್ರಾರ್ಥನೆ ಸಲ್ಲಿಸಿರುವ ಜಾಗ, ವಿವಾದಿತ ಪ್ರದೇಶದ ಹೊರಗಿದೆ. ಆದರೆ ಯಾವುದೇ ಕಾರಣಕ್ಕೂ ಈ ಪ್ರದೇಶದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆಗೆ ಅವಕಾಶ ಕೊಡುವುದಿಲ್ಲ. ಅಲ್ಲಿರುವ ಕೊಠಡಿಗೆ ಈ ಹಿಂದೆ ಬಳಿದಿರುವ ಬಣ್ಣ ಬೇರೆಯಾಗಿದ್ದು, ಇತ್ತೀಚೆಗೆ ಬೇರೆ ಬಣ್ಣ ಬಳಿಯಲಾಗಿತ್ತು. ಯಾವ ವ್ಯಕ್ತಿ ಈ ವಿಡಿಯೋ ಹಾಕಿದ್ದಾರೆಂಬುದನ್ನು ಪತ್ತೆಹಚ್ಚಲು ತನಿಖೆ ನಡೆಸಲಾಗುವುದು ಎಂದರು.
ಆದರೆ ಹಿಂದು ಸಂಘಟನೆಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ಗೊತ್ತಿಲ್ಲದೆ ನಮಾಜ್ ನಡೆಯಲು ಹೇಗೆ ಸಾಧ್ಯ. ಪ್ರತಿ ಬಾರಿ ಹಿಂದು ಭಾವನೆಗಳಿಗೆ ಧಕ್ಕೆ ತರಲಾಗುತ್ತಿದೆ. ಇದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾರೆ.
Chikkamagaluru Just as the controversy on cooking meat at the Datta Peeta is still afresh, another one has raised its head. It is being alleged that namaz is being offered at the disputed cave shrine in contravention of the court orders. A purported video of the Namaz being offered has gone viral on social media.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm