ಬ್ರೇಕಿಂಗ್ ನ್ಯೂಸ್
23-05-22 11:58 am Bengalore Correspondent ಕರ್ನಾಟಕ
ಬೆಂಗಳೂರು, ಮೇ 23: ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಜಾರಿಗೊಳಿಸಿರುವ ಮೋಟಾರು ವಾಹನ ನಿಯಮಗಳನ್ನು ರಾಜ್ಯದಲ್ಲಿ ಯಥಾವತ್ ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರದ ನಿರ್ಧರಿಸಿದೆ. ಅದರಂತೆ ನಂಬರ್ ಪ್ಲೇಟ್ ಮೇಲೆ ಯಾವುದೇ ಹೆಸರು, ಸರ್ಕಾರಿ ಲಾಂಛನ, ಇತರ ಲೋಗೋ ಸೇರಿದಂತೆ ಯಾವುದೂ ಇರುವಂತಿಲ್ಲ. ಕೇವಲ ವಾಹನ ನೋಂದಣಿ ಸಂಖ್ಯೆ ಮಾತ್ರ ಇರಬೇಕು ಎಂಬುದಾಗಿ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.
1989 ರ ಮೋಟಾರು ವಾಹನ ನಿಯಮದಲ್ಲಿರುವ ಮಾನದಂಡಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಇದಕ್ಕೆ ಸರ್ಕಾರಿ ನೌಕರರು, ನಿಗಮ ಮಂಡಳಿ, ಸಹಕಾರಿ ಸಂಘದ ಅಧ್ಯಕ್ಷರು ಹೊರತಲ್ಲ. ನಂಬರ್ ಪ್ಲೇಟ್ ಮೇಲೆ ಸಂಘ ಸಂಸ್ಥೆಗಳ ಹೆಸರು, ಉಪಾಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಯಾವುದೇ ಲೋಗೋ ಕೂಡ ಇರಬಾರದು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಸೂಚಿಸಿದೆ.

ನಂಬರ್ ಪ್ಲೇಟ್ ಕೆಳಭಾಗದಲ್ಲಿ ಅಥವಾ ಮೇಲ್ಬಾಗದಲ್ಲಿ ಸರ್ಕಾರಿ ಲೋಗೋ, ಸರ್ಕಾರಿ ಸಂಸ್ಥೆಗಳ ಹೆಸರು ಬಳಕೆ ಮಾಡುವುದಿದ್ದರೆ ಕೇಂದ್ರ ಸರ್ಕಾರದ ಅನುಮತಿ ಪಡೆಯಬೇಕೆಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ವಾಹನಗಳ ನಂಬರ್ ಪ್ಲೇಟ್ ಮೇಲೆ ಯಾವುದೇ ಬರಹ, ಸ್ಟಿಕ್ಕರ್ ಇರಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕರ್ನಾಟಕ ರಾಜ್ಯಪತ್ರದಲ್ಲಿ ಎರಡು ದಿನಗಳ ಹಿಂದೆ ಸುತ್ತೋಲೆ ಹೊರಡಿಸಿದ್ದಾರೆ. ವಾಹನಗಳ ನೋಂದಣಿ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕು ಎಂದು ತಿಳಿಸಿದ್ದಾರೆ.
Karnataka Vehicle registration plates should not have any stickers and logo orders state government.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm