ಬ್ರೇಕಿಂಗ್ ನ್ಯೂಸ್
25-05-22 05:46 pm HK News Desk ದೇಶ - ವಿದೇಶ
ಮುಂಬೈ, ಮೇ 25: ಮುಂಬೈ ನಗರದಲ್ಲಿ ರಸ್ತೆ ಸುರಕ್ಷತೆ ಉದ್ದೇಶದಿಂದ ದ್ವಿಚಕ್ರ ವಾಹನ ಸವಾರರಿಬ್ಬರಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಹಿಂಬದಿ ಸವಾರ ಹೆಲ್ಮೆಟ್ ಇಲ್ಲದೆ ಸವಾರಿ ಮಾಡಿದ್ದು ಪತ್ತೆಯಾದರೆ, 500 ರೂಪಾಯಿ ದಂಡ ಮತ್ತು ಮೂರು ತಿಂಗಳ ಕಾಲ ಡ್ರೈವಿಂಗ್ ಲೈಸನ್ಸ್ ರದ್ದುಪಡಿಸುವ ಕಾನೂನು ಜಾರಿಗೆ ಬರಲಿದೆ. ಮುಂಬೈ ಪೊಲೀಸರ ಪ್ರಕಾರ, ಇನ್ನು 15 ದಿನಗಳಲ್ಲೇ ಹೊಸ ರೂಲ್ಸ್ ಜಾರಿಗೆ ಬರಲಿದೆ.
ಇತ್ತೀಚೆಗೆ ಸರಕಾರ 1998ರ ಮೋಟಾರು ವಾಹನ ಕಾಯ್ದೆಯನ್ನು ನವೀಕರಿಸಿದ್ದು, ಹೆಚ್ಚುವರಿ ದಂಡ ವಿಧಿಸುವ ಕಾನೂನನ್ನು ಜಾರಿಗೆ ತಂದಿದೆ. ಇದರಂತೆ, ಹೆಲ್ಮೆಟನ್ನು ಹಾಕದೆ ಸವಾರಿ ಮಾಡುವವರಿಗೆ ಎರಡು ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಒಂದ್ವೇಳೆ ತಲೆಗೆ ಹೆಲ್ಮೆಟ್ ಹಾಕಿದ್ದರೂ, ಅದರ ಬಟನ್ ಸರಿಯಾಗಿ ಹಾಕಿಕೊಳ್ಳದೇ ಇದ್ದರೆ ಒಂದು ಸಾವಿರ ರೂ. ದಂಡ ವಿಧಿಸಲಿದ್ದಾರೆ.
ಬಿಐಎಸ್ (ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್) ಮಾರ್ಕ್ ಇಲ್ಲದ ಹೆಲ್ಮೆಟ್ ಧರಿಸಿದ್ದರೆ ಒಂದು ಸಾವಿರ ರೂ. ದಂಡ ಇರಲಿದೆ. ಹೆಲ್ಮೆಟ್ ಧರಿಸಿದ್ದರೂ, ಟ್ರಾಫಿಕ್ ಸಿಗ್ನಲ್ ಜಂಪ್ ಮಾಡುವ ಸವಾರರಿಗೆ ಎರಡು ಸಾವಿರ ರೂ. ದಂಡ ಬೀಳಲಿದೆ. ರಸ್ತೆ ಸುರಕ್ಷತೆ ಸಲುವಾಗಿ ಮುಂಬೈ ಪೊಲೀಸರು ಹೊಸ ರೀತಿಯ ರೂಲ್ಸನ್ನು ತಂದಿದ್ದು, ಸದ್ಯದಲ್ಲೇ ಜಾರಿಗೆ ತರಲಿದ್ದಾರೆ.
In a push to make roads safer, Mumbai traffic police will be implementing a new rule making it mandatory for both the two-wheeler riders to be wearing a helmet. If the pillion rider is caught without a helmet, then a Rs 500 fine will be levied and the driving license will be suspended for 3 months. This rule will be implemented in the next 15 days, says the Mumbai police.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm