ಬ್ರೇಕಿಂಗ್ ನ್ಯೂಸ್
27-09-20 03:49 pm Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟಂಬರ್ 27: ಸ್ವರ ಸಾಮ್ರಾಟ ಎಸ್ಪಿ ಬಾಲಸುಬ್ರಹ್ಮಣ್ಯಂ ಅಗಲಿಕೆಯ ಬಗ್ಗೆ ದಕ್ಷಿಣ ಭಾರತದ ಮತ್ತೊಬ್ಬ ಸಂಗೀತ ಮಾಂತ್ರಿಕ ಕೆ.ಜೆ. ಯೇಸುದಾಸ್ ಭಾವಪೂರ್ಣ ಪತ್ರ ಬರೆದಿದ್ದಾರೆ. ನನ್ನ ಬಹುಕಾಲದ ಗೆಳೆಯ, ಸೋದರ ಅಗಲಿದ್ದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಕೊನೆಯ ಬಾರಿಗೆ ನೋಡಬೇಕೆಂಬ ಆಸೆಯನ್ನೂ ಕೊರೊನಾದಿಂದ ಈಡೇರಿಸಿಕೊಳ್ಳಲು ಆಗಿಲ್ಲ ಎಂದು ವಿಷಾದಿಸಿದ್ದಾರೆ.


ನನ್ನ ಸಹೋದ್ಯೋಗಿಗಳ ಪೈಕಿ ಬಾಲು ನನಗೆ ಹತ್ತಿರದ ಸೋದರನಿದ್ದಂತೆ. ಬಾಲು ನನ್ನನ್ನು ಆ ರೀತಿ ನೋಡಿಕೊಂಡಿದ್ದರೇ ಗೊತ್ತಿಲ್ಲ, ಎಸ್ಪಿಬಿ ಮತ್ತು ನನ್ನ ನಡುವಿನ ಸಂಬಂಧ ಮುಂದೆಯೂ ಹಾಗೇ ಇರಲಿದೆ. ಶಾಸ್ತ್ರೀಯ ಶೈಲಿಯಲ್ಲಿ ಸಂಗೀತ ಕಲಿಯದೇ ಇದ್ದರೂ ಎಸ್ಪಿಬಿಯವರ ಸಂಗೀತ ಜ್ಞಾನ ಅಗಾಧ ಆಗಿತ್ತು, ಅವರು ಹಾಡುತ್ತಿದ್ದರು. ಜೊತೆಯಲ್ಲೇ ಮ್ಯೂಸಿಕ್ ಕಂಪೋಸ್ ಕೂಡ ಮಾಡುತ್ತಿದ್ದರು. ಶಂಕರಾಭರಣಂ ಚಿತ್ರದಲ್ಲಿ ಎಸ್ಪಿಬಿಯವರ ಸಂಗೀತ ಜ್ಞಾನ ನಮ್ಮ ಅರಿವಿಗೆ ಬರುತ್ತದೆ. ಶಾಸ್ತ್ರೀಯವಾಗಿ ಕಲಿತು ಬಂದಿದ್ದ ಇನ್ನೊಬ್ಬರ ಜೊತೆಗೆ ಎಸ್ಪಿಯವರು ಅಮೋಘವಾಗಿ ಹಾಡಿದ್ದರು. ಬಾಲು ಯಾರಿಗೂ ನೋವು ತಂದವರಲ್ಲ. ಅಂದ್ರೆ ಎಲ್ಲರನ್ನೂ ಪ್ರೀತಿಸುತ್ತಿದ್ದರು. ಎಲ್ಲರೊಂದಿಗೆ ಆಪ್ತವಾಗಿರುತ್ತಿದ್ದರು. ಒಂದೊಮ್ಮೆ ಎಸ್ಪಿಯವರು ತಮ್ಮ ಕೈಯಾರೆ ತಯಾರಿಸಿದ್ದ ಊಟ ಮಾಡುವ ಅವಕಾಶವೂ ನನಗೆ ಲಭಿಸಿತ್ತು. ಪ್ಯಾರಿಸ್ ನಲ್ಲಿ ಕಾರ್ಯಕ್ರಮಕ್ಕಾಗಿ ತಂಗಿದ್ದ ವೇಳೆ, ಎಸ್ಪಿಬಿಯವರು ನಮಗಾಗಿ ತಾವೇ ಸ್ಪೆಷಲ್ ಆಗಿ ಊಟ ತಯಾರಿಸಿದ್ದರು ಎಂದು ಸ್ಮರಿಸಿದ್ದಾರೆ.
ಕೋವಿಡ್ ಕಾರಣದಿಂದ ದೊಡ್ಡ ನಷ್ಟವನ್ನು ಅನುಭವಿಸುತ್ತಿದ್ದೇವೆ. ನನಗೆ ಅಮೆರಿಕದಿಂದ ಬರುವುದಕ್ಕೆ ಬಿಡುತ್ತಿಲ್ಲ. ಇದರಿಂದಾಗಿ ಕೊನೆಯ ಬಾರಿಗೆ ಎಸ್ಪಿಯವರನ್ನು ನೋಡುವುದಕ್ಕೂ ಆಗಿಲ್ಲ. ಅವರ ಜೊತೆಗಿನ ನೆನಪು ಮಾತ್ರ ಇರಲಿದೆ ಎಂದು ಯೇಸುದಾಸ್ ಭಾವುಕರಾಗಿ ಬರೆದಿದ್ದಾರೆ.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm