ಬ್ರೇಕಿಂಗ್ ನ್ಯೂಸ್
29-05-22 01:41 pm HK News Desk ದೇಶ - ವಿದೇಶ
ಮಂಡ್ಲಾ ,ಮೇ 29: ಮಧ್ಯಪ್ರದೇಶದ ಮಂಡ್ಲಾ ಜಿಲ್ಲೆಯಲ್ಲಿ ಉತ್ಸವವೊಂದರ ವೇಳೆ ಪಾನಿಪುರಿ ಸೇವಿಸಿದ ಬಳಿಕ 97 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಭಾನುವಾರ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ವಿಷಪೂರಿತ ಆಹಾರ ಸೇವಿಸಿದ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಎಲ್ಲ ಮಕ್ಕಳೂ ಶನಿವಾರ ಸಂಜೆ ಒಂದೇ ಅಂಗಡಿಯಿಂದ ರುಚಿ ರುಚಿಯಾದ ಪಾನಿಪುರಿಯನ್ನು ತಿಂದು ಸಂಭ್ರಮಿಸಿದ್ದರು. ಮಂಡ್ಲಾ ಜಿಲ್ಲಾ ಕೇಂದ್ರದಿಂದ 38 ಕಿಮೀ ದೂರದಲ್ಲಿರುವ ಬುಡಕಟ್ಟು ಪ್ರಾಬಲ್ಯದ ಸಿಂಗರ್ಪುರ ಪ್ರದೇಶದಲ್ಲಿ ಉತ್ಸವ ಆಯೋಜನೆ ಮಾಡಲಾಗಿತ್ತು. ಅಕ್ಕಪಕ್ಕದ ಅನೇಕ ಹಳ್ಳಿಗಳ ಜನರು ವ್ಯಾಪಾರ ವಹಿವಾಟಿಗಾಗಿ ಅಲ್ಲಿಗೆ ಬಂದಿದ್ದರು.

ಸಂಜೆ 7.30ರ ಸುಮಾರಿಗೆ ಮಕ್ಕಳಲ್ಲಿ ಹೊಟ್ಟೆ ನೋವು ಮತ್ತು ವಾಂತಿ ಸಮಸ್ಯೆ ಕಂಡುಬಂದಿತ್ತು ಎಂದು ಜಿಲ್ಲಾ ಆಸ್ಪತ್ರೆ ಸಿವಿಲ್ ಸರ್ಜನ್ ಡಾ. ಕೆಆರ್ ಶಾಕ್ಯ ತಿಳಿಸಿದ್ದಾರೆ. "ವಿಷಪೂರಿತ ಆಹಾರ ಸೇವನೆಯಿಂದ ಬಳಲುತ್ತಿದ್ದ 97 ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರೀಗ ಅಪಾಯದಿಂದ ಪಾರಾಗಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.
ಪಾನಿಪುರಿ ಮಾರಾಟಗಾರನನ್ನು ಬಂಧಿಸಲಾಗಿದೆ. ತಿನಿಸಿನ ಮಾದರಿಗಳನ್ನು ಸಂಗ್ರಹಿಸಿರುವ ಪೊಲೀಸರು, ಅವುಗಳನ್ನು ಪರೀಕ್ಷೆಗೆ ರವಾನಿಸಿದ್ದಾರೆ. ಮಂಡ್ಲಾ ಸಂಸದರಾಗಿರುವ ಕೇಂದ್ರ ಸಚಿವ ಫಗ್ಗಾನ್ ಸಿಂಗ್ ಕುಲಸ್ತೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳನ್ನು ಶನಿವಾರ ರಾತ್ರಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.
Ninety seven children suffered from food poisoning after eating 'pani puri' at a fair in Madhya Pradesh's Mandla district, a health official said on Sunday. All the victims consumed the spicy snack from the same shop on Saturday evening at the fair organised in the tribal-dominated Singarpur area, 38 km from the district headquarters, where people from various nearby villages had come to make purchases, he said.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm